ಬಿಜೆಪಿ-ಜೆಡಿಎಸ್ನಿಂದ ಅನೇಕರು ಕಾಂಗ್ರೆಸ್ಗೆ ಬರಲಿದ್ದಾರೆ; ಸಲೀಂ ಅಹಮದ್
1089 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಬಿಜೆಪಿ ಮತ್ತು ಜೆಡಿಎಸ್ನಿಂದ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಅದರಲ್ಲಿ ಶಾಸಕರೂ ಇದ್ದಾರೆ. ಯಾರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಸಲೀಂ ಅಹ್ಮದ್ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಪಕ್ಷದವರು ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿಯಲ್ಲಿ ಅನೇಕರು ನೊಂದಿದ್ದಾರೆ. ಅವರಾಗಿಯೇ ನಮ್ಮ ಪಕ್ಷಕ್ಕೆ ಬರಲು ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡುವ ಶಕ್ತಿಯನ್ನೂ ಬಿಜೆಪಿ ಕಳೆದುಕೊಂಡಿದೆ. ನಾವೇನು ಆಪರೇಶನ್ ಹಸ್ತ ಮಾಡುತ್ತಿಲ್ಲ ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾವು ಈಗಾಗಲೇ 28 ಲೋಕಸಭಾ ಕ್ಷೇತ್ರದಲ್ಲಿ ವೀಕ್ಷಕರ ನೇಮಕವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತಿದೆ. ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು ಹಾಗೂ ಕಾರ್ಯಕರ್ತರನ್ನು ಮಾತನಾಡಿಸಲಾಗಿದೆ. ಇವರನ್ನೆಲ್ಲ ಮಾತನಾಡಿಸಿ ಒಂದು ಪ್ಯಾನಲ್ ಮಾಡಲಾಗುತ್ತದೆ. ಹತ್ತು ದಿನಗಳಲ್ಲಿ ಮಹತ್ವದ ಸಭೆ ಕೂಡ ನಡೆಯಲಿದೆ. ಎಲ್ಲ ವೀಕ್ಷಕರು, ಸಚಿವರು ಮತ್ತು ಕೆಪಿಸಿಸಿ ಅಧ್ಯಕ್ಷರ ಜೊತೆ ಸಭೆ ಮಾಡಲಾಗುತ್ತದೆ. ಸಭೆ ಬಳಿಕ ಅಧ್ಯಕ್ಷರು ಮತ್ತು ಸಿಎಂ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ರವಾನೆ ಮಾಡುತ್ತಾರೆ. ಜನೆವರಿ ಮೊದಲ ವಾರದಲ್ಲಿ ನಮ್ಮ ಪಟ್ಟಿ ಬಿಡುಗಡೆಯಾಗುತ್ತದೆ ಎಂದರು.
ಧಾರವಾಡದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಪಕ್ಷದವರು ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿಯಲ್ಲಿ ಅನೇಕರು ನೊಂದಿದ್ದಾರೆ. ಅವರಾಗಿಯೇ ನಮ್ಮ ಪಕ್ಷಕ್ಕೆ ಬರಲು ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡುವ ಶಕ್ತಿಯನ್ನೂ ಬಿಜೆಪಿ ಕಳೆದುಕೊಂಡಿದೆ. ನಾವೇನು ಆಪರೇಶನ್ ಹಸ್ತ ಮಾಡುತ್ತಿಲ್ಲ ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾವು ಈಗಾಗಲೇ 28 ಲೋಕಸಭಾ ಕ್ಷೇತ್ರದಲ್ಲಿ ವೀಕ್ಷಕರ ನೇಮಕವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತಿದೆ. ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು ಹಾಗೂ ಕಾರ್ಯಕರ್ತರನ್ನು ಮಾತನಾಡಿಸಲಾಗಿದೆ. ಇವರನ್ನೆಲ್ಲ ಮಾತನಾಡಿಸಿ ಒಂದು ಪ್ಯಾನಲ್ ಮಾಡಲಾಗುತ್ತದೆ. ಹತ್ತು ದಿನಗಳಲ್ಲಿ ಮಹತ್ವದ ಸಭೆ ಕೂಡ ನಡೆಯಲಿದೆ. ಎಲ್ಲ ವೀಕ್ಷಕರು, ಸಚಿವರು ಮತ್ತು ಕೆಪಿಸಿಸಿ ಅಧ್ಯಕ್ಷರ ಜೊತೆ ಸಭೆ ಮಾಡಲಾಗುತ್ತದೆ. ಸಭೆ ಬಳಿಕ ಅಧ್ಯಕ್ಷರು ಮತ್ತು ಸಿಎಂ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ರವಾನೆ ಮಾಡುತ್ತಾರೆ. ಜನೆವರಿ ಮೊದಲ ವಾರದಲ್ಲಿ ನಮ್ಮ ಪಟ್ಟಿ ಬಿಡುಗಡೆಯಾಗುತ್ತದೆ ಎಂದರು.