ನಾವು ಆಪರೇಷನ್ ಹಸ್ತ ಮಾಡಲ್ಲ, ತತ್ವ, ಸಿದ್ಧಾಂತ ಒಪ್ಪಿ ಬಂದ್ರೆ ಬರಲಿ ; ಶಿವರಾಜ ತಂಗಡಗಿ
1069 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ : ನಾವು ಪಕ್ಷಕ್ಕೆ ಸೇರಿಸಿಕೊಳ್ಳಲು ಶುರುಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಯಾರೂ ಇರಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾವು ಆಪರೇಷನ್ ಹಸ್ತ ಮಾಡುವ ಅವಶ್ಯಕತೆ ಇಲ್ಲ. ನಮ್ಮ ತತ್ವ, ಸಿದ್ಧಾಂತವನ್ನು ಒಪ್ಪಿಕೊಂಡು ಬರುವವರು ಇದ್ದರೆ ಬರಬಹುದು. ದ್ವೇಷದ ರಾಜಕಾರಣ ಮಾಡುವವರು ಬಿಜೆಪಿಯವರು ನಾವಲ್ಲ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬಡವರು, ಮಧ್ಯಮ ವರ್ಗದವರಿಗೆ ಒಂದೇ ಒಂದು ಯೋಜನೆ ತಂದಿಲ್ಲ. ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಕ್ಕೆ ಕಡಿವಾಣ ಹಾಕುತ್ತಿದ್ದೇವೆ. ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪೆನ್ಡ್ರೈವ್ನಲ್ಲಿ ಏನೂ ಹುರುಳಿಲ್ಲ. ಬುಟ್ಟಿಯಲ್ಲಿ ಹಾವಿಟ್ಟು ಹಾವಿದೆ ಹಾವಿದೇ ಎಂದು ಕುಮಾರಸ್ವಾಮಿ ಹೆದರಿಸುತ್ತಿದ್ದಾರೆ. ವರ್ಗಾವಣೆ ಎಲ್ಲ ಸರ್ಕಾರದ ಅವಧಿಯಲ್ಲಿಯೂ ಆಗಿದೆ. ಸರಿಯಾದ ದಾಖಲಾತಿ ನೀಡದೇ ಹರಾಜು ಪ್ರಕ್ರಿಯೆ ಎಂದು ಹೇಳುವುದು ಸರಿಯಲ್ಲ ಎಂದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಕುರಿತು ಆ. 23ಕ್ಕೆ ಸಭೆಯನ್ನು ಕರೆದಿದ್ದಾರೆ. ನೀರು ಬಿಡಲು, ಕನ್ನಡಕ್ಕೂ ವ್ಯತ್ಯಾಸ ಇದೆ, ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಮಾಡ್ತೇವೆ ಎಂದರು. ಇನ್ನು ದೇಶದ ಪ್ರಧಾನ ಮಂತ್ರಿ, ಗೃಹ ಮಂತ್ರಿ ಬೀದಿ ಬೀದಿ ಓಡಾಡಿದ್ರು 66 ಸೀಟ್ ದಾಟಲಿಲ್ಲ, ಇದು ಭಾರತೀಯ ಜನತಾ ಪಕ್ಷದ ಕಥೆ ಎಂದ ಅವರು ನಾವು ಮೂರು ತಿಂಗಳಲ್ಲಿ ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ, 4ನೇಯ ಗೃಹ ಲಕ್ಷ್ಮಿ ಯೋಜನೆ ಜಾರಿ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಜನರು ಬಿಜೆಪಿಯನ್ನು ಮನೆಗೆ ಕಳಿಸ್ತಾರೆ ಎಂದು ಹೇಳಿದರು.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬಡವರು, ಮಧ್ಯಮ ವರ್ಗದವರಿಗೆ ಒಂದೇ ಒಂದು ಯೋಜನೆ ತಂದಿಲ್ಲ. ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಕ್ಕೆ ಕಡಿವಾಣ ಹಾಕುತ್ತಿದ್ದೇವೆ. ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪೆನ್ಡ್ರೈವ್ನಲ್ಲಿ ಏನೂ ಹುರುಳಿಲ್ಲ. ಬುಟ್ಟಿಯಲ್ಲಿ ಹಾವಿಟ್ಟು ಹಾವಿದೆ ಹಾವಿದೇ ಎಂದು ಕುಮಾರಸ್ವಾಮಿ ಹೆದರಿಸುತ್ತಿದ್ದಾರೆ. ವರ್ಗಾವಣೆ ಎಲ್ಲ ಸರ್ಕಾರದ ಅವಧಿಯಲ್ಲಿಯೂ ಆಗಿದೆ. ಸರಿಯಾದ ದಾಖಲಾತಿ ನೀಡದೇ ಹರಾಜು ಪ್ರಕ್ರಿಯೆ ಎಂದು ಹೇಳುವುದು ಸರಿಯಲ್ಲ ಎಂದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಕುರಿತು ಆ. 23ಕ್ಕೆ ಸಭೆಯನ್ನು ಕರೆದಿದ್ದಾರೆ. ನೀರು ಬಿಡಲು, ಕನ್ನಡಕ್ಕೂ ವ್ಯತ್ಯಾಸ ಇದೆ, ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಮಾಡ್ತೇವೆ ಎಂದರು. ಇನ್ನು ದೇಶದ ಪ್ರಧಾನ ಮಂತ್ರಿ, ಗೃಹ ಮಂತ್ರಿ ಬೀದಿ ಬೀದಿ ಓಡಾಡಿದ್ರು 66 ಸೀಟ್ ದಾಟಲಿಲ್ಲ, ಇದು ಭಾರತೀಯ ಜನತಾ ಪಕ್ಷದ ಕಥೆ ಎಂದ ಅವರು ನಾವು ಮೂರು ತಿಂಗಳಲ್ಲಿ ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ, 4ನೇಯ ಗೃಹ ಲಕ್ಷ್ಮಿ ಯೋಜನೆ ಜಾರಿ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಜನರು ಬಿಜೆಪಿಯನ್ನು ಮನೆಗೆ ಕಳಿಸ್ತಾರೆ ಎಂದು ಹೇಳಿದರು.