ಪಕ್ಷದ ಹಿತದೃಷ್ಟಿಯಿಂದ ಈಶ್ವರಪ್ಪ ಪುತ್ರನಿಗೆ ಹಾವೇರಿ ಕ್ಷೇತ್ರ ಕೈತಪ್ಪಿರಬಹುದು; ಜೋಶಿ
1289 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಕೆಎಸ್.ಈಶ್ವರಪ್ಪ ಬಹಳ ಹಿರಿಯರು, ಪಕ್ಷದ ಹಿತದೃಷ್ಟಿಯಿಂದ ಅವರ ಜೊತೆಗೆ ನಾನೇ ಕುದ್ದಾಗಿ ಮಾತನಾಡಿ, ಅಸಮಾಧಾನ ಶಮನ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೂ ನಮಗೂ ಆತ್ಮೀಯವಾದ ಸಂಬಂಧವಿದೆ. ನಾನು ಅವರ ಜೊತೆಗೆ ಮಾತನಾಡುವ ಪ್ರಯತ್ನ ಮಾಡಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಹಾವೇರಿ ಕ್ಷೇತ್ರ ಕೈತಪ್ಪಿರಬಹುದು. ಇದು ಪಕ್ಷದ ನಿರ್ಣಯ. ಈಶ್ವರಪ್ಪ ಅವರು ನಮಗಿಂತ ಬಹಳ ಹಿರಿಯರು, ಅವರು ಪಕ್ಷದ ಹಿತ ಬಿಟ್ಟು ಬೇರೆ ಯೋಚನೆ ಮಾಡಿದವರೇ ಅಲ್ಲ. ಹೀಗಾಗಿ ಪಕ್ಷದ ವಿರುದ್ಧ ಅವರು ಹೋಗುವುದಿಲ್ಲ ಎಂಬ ವಿಶ್ವಾಸ ಇದೆ ಎಂದರು.
ಈ ಹಿಂದೆ ಕೆ.ಎಸ್.ಈಶ್ವರಪ್ಪ ಅವರು ರಾಜ್ಯಾಧ್ಯಕ್ಷ ಆಗಿದ್ದಾಗ, ನಾನು ಜಿಲ್ಲಾಧ್ಯಕ್ಷನಾಗಿದ್ದೆ, ಈಶ್ವರಪ್ಪ ಅವರು ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಣಯಕ್ಕೆ ಮಾನ್ಯ ಮಾಡುತ್ತಾರೆಂಬ ನಂಬಿಕೆಯಿದೆ. ಇನ್ನು ಬಹಳ ಸಮಯಿದ್ದು, ಬದಲಾವಣೆ ಆಗಲಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ನಾನು ಕೂಡಾ ಕಲಬುರ್ಗಿಗೆ ಹೋಗುತ್ತಿದ್ದೇನೆ. ಅದರೊಳಗೆ ಈಶ್ವರಪ್ಪ ಅವರು ಬದಲಾವಣೆ ಆಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಶೆಟ್ಟರ್ ಅವರು ಬೆಳಗಾವಿಯಲ್ಲಿ ಅತಿಹೆಚ್ಚು ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಅವರಿಗೆ ನಾನು ಶುಭಕೋರುತ್ತೇನೆ. ಅಲ್ಲಿನ ಸ್ಥಳೀಯಮಟ್ಟದ ವಿರೋಧವನ್ನು ಸರಿಪಡಿಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೂ ನಮಗೂ ಆತ್ಮೀಯವಾದ ಸಂಬಂಧವಿದೆ. ನಾನು ಅವರ ಜೊತೆಗೆ ಮಾತನಾಡುವ ಪ್ರಯತ್ನ ಮಾಡಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಹಾವೇರಿ ಕ್ಷೇತ್ರ ಕೈತಪ್ಪಿರಬಹುದು. ಇದು ಪಕ್ಷದ ನಿರ್ಣಯ. ಈಶ್ವರಪ್ಪ ಅವರು ನಮಗಿಂತ ಬಹಳ ಹಿರಿಯರು, ಅವರು ಪಕ್ಷದ ಹಿತ ಬಿಟ್ಟು ಬೇರೆ ಯೋಚನೆ ಮಾಡಿದವರೇ ಅಲ್ಲ. ಹೀಗಾಗಿ ಪಕ್ಷದ ವಿರುದ್ಧ ಅವರು ಹೋಗುವುದಿಲ್ಲ ಎಂಬ ವಿಶ್ವಾಸ ಇದೆ ಎಂದರು.
ಈ ಹಿಂದೆ ಕೆ.ಎಸ್.ಈಶ್ವರಪ್ಪ ಅವರು ರಾಜ್ಯಾಧ್ಯಕ್ಷ ಆಗಿದ್ದಾಗ, ನಾನು ಜಿಲ್ಲಾಧ್ಯಕ್ಷನಾಗಿದ್ದೆ, ಈಶ್ವರಪ್ಪ ಅವರು ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಣಯಕ್ಕೆ ಮಾನ್ಯ ಮಾಡುತ್ತಾರೆಂಬ ನಂಬಿಕೆಯಿದೆ. ಇನ್ನು ಬಹಳ ಸಮಯಿದ್ದು, ಬದಲಾವಣೆ ಆಗಲಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ನಾನು ಕೂಡಾ ಕಲಬುರ್ಗಿಗೆ ಹೋಗುತ್ತಿದ್ದೇನೆ. ಅದರೊಳಗೆ ಈಶ್ವರಪ್ಪ ಅವರು ಬದಲಾವಣೆ ಆಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಶೆಟ್ಟರ್ ಅವರು ಬೆಳಗಾವಿಯಲ್ಲಿ ಅತಿಹೆಚ್ಚು ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಅವರಿಗೆ ನಾನು ಶುಭಕೋರುತ್ತೇನೆ. ಅಲ್ಲಿನ ಸ್ಥಳೀಯಮಟ್ಟದ ವಿರೋಧವನ್ನು ಸರಿಪಡಿಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಹೇಳಿದರು.