ಗ್ಯಾರಂಟಿ ಯೋಜನೆಗಳಿಗೆ 85 ಸಾವಿರ ಕೋಟಿ ರೂ. ಬೇಕು; ಎಲ್ಲಿಂದ ತರ್ತೀರಿ, ಉತ್ತರ ಕೊಡಿ: ಪ್ರಹ್ಲಾದ್ ಜೋಶಿ
1063 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಧಾರವಾಡ: ಕಾಂಗ್ರೆಸ್ ಆಶ್ವಾಸನೆಗಳು ಬೋಗಸ್, ಸುಳ್ಳು ಆಶ್ವಾಸನೆ ನೀಡಿ ಮತದಾರರಿಗೆ ಶುದ್ಧ ಮೋಸ ಮಾಡಿದ್ದಾರೆ. ಘೋಷಿಸಿರುವ ಯೋಜನೆಗಳು ಜನರಿಗೆ ಸಿಗದಂತೆ ಹಲವು ಷರತ್ತು ಹಾಕಿದ್ದಾರೆ. ಇದು ಕಾಡುವ ದೇವರ ಕಾಟ ಕಳೆಯುವ ಯತ್ನವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರೇ ಇಷ್ಟು ದಿನ ನಿರುದ್ಯೋಗಿಗಳಾಗಿದ್ದರು. ಈಗ ಬಜರಂಗದಳ, ಬಿಜೆಪಿ ಹೆಸರು ಹೇಳಿ ಅಸಭ್ಯವಾಗಿ ಮಾತನಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ , ನಳಿನ್ ಕುಮಾರ ಕಟೀಲ್ ಬಗ್ಗೆ ಕಾಂಗ್ರೆಸ್ ಅಹಂಕಾರದಿಂದ ವರ್ತಿಸುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಅನೇಕ ರಾಜ್ಯಗಳಲ್ಲಿ ನಿಮ್ಮ ಅಸ್ತಿತ್ವವೇ ಇಲ್ಲ, ನಿಮ್ಮ ಯೋಗ್ಯತೆ ಏನಿದೆ ತಿಳಿದುಕೊಳ್ಳಿ ಎಂದು ಹರಿಹಾಯ್ದರು.
ಕಾಂಗ್ರೆಸ್ನವರು ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿದ್ದೇವೆ ಅಂತಾ ದುರಹಂಕಾರದಿಂದ ವರ್ತಿಸುತ್ತಿದ್ದಾರೆ. ರಾಜಕೀಯ ಸೌಜನ್ಯತೆ, ಸಂಸ್ಕೃತಿಯಿದ್ರೆ ಇತರ ರಾಜ್ಯಗಳಲ್ಲಿ ನಿಮ್ಮ ಪರಿಸ್ಥಿತಿ ಏನಿದೆ ನೋಡಿ. ರಾಜ್ಯದ ಜನರೇ ಇವರಿಗೆ ತಕ್ಕ ಉತ್ತರ ಕೊಡುತ್ತಾರೆ. ಉಚಿತ ಯೋಜನೆಗಳಿಗೆ ಪ್ರತಿವರ್ಷ 85 ಸಾವಿರ ಕೋಟಿ ಖರ್ಚಾಗುತ್ತೆ. ಎಲ್ಲಿಂದ ಹಣ ತರ್ತಾರೆ? ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಲಿ. ಇವರು ಯೋಜನೆ ಅನುಷ್ಠಾನಕ್ಕೆ ಸಾಲ ಮಾಡ್ತಾರಾ, ಅಭಿವೃದ್ಧಿ ಕೆಲಸ ನಿಲ್ಲಿಸ್ತಾರಾ? ಎಂಬುದನ್ನು ತಿಳಿಸಲಿ ಎಂದು ಒತ್ತಾಯಿಸಿದರು.
ಕಾಂಗ್ರೆಸ್ನವರು ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿದ್ದೇವೆ ಅಂತಾ ದುರಹಂಕಾರದಿಂದ ವರ್ತಿಸುತ್ತಿದ್ದಾರೆ. ರಾಜಕೀಯ ಸೌಜನ್ಯತೆ, ಸಂಸ್ಕೃತಿಯಿದ್ರೆ ಇತರ ರಾಜ್ಯಗಳಲ್ಲಿ ನಿಮ್ಮ ಪರಿಸ್ಥಿತಿ ಏನಿದೆ ನೋಡಿ. ರಾಜ್ಯದ ಜನರೇ ಇವರಿಗೆ ತಕ್ಕ ಉತ್ತರ ಕೊಡುತ್ತಾರೆ. ಉಚಿತ ಯೋಜನೆಗಳಿಗೆ ಪ್ರತಿವರ್ಷ 85 ಸಾವಿರ ಕೋಟಿ ಖರ್ಚಾಗುತ್ತೆ. ಎಲ್ಲಿಂದ ಹಣ ತರ್ತಾರೆ? ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಲಿ. ಇವರು ಯೋಜನೆ ಅನುಷ್ಠಾನಕ್ಕೆ ಸಾಲ ಮಾಡ್ತಾರಾ, ಅಭಿವೃದ್ಧಿ ಕೆಲಸ ನಿಲ್ಲಿಸ್ತಾರಾ? ಎಂಬುದನ್ನು ತಿಳಿಸಲಿ ಎಂದು ಒತ್ತಾಯಿಸಿದರು.