ಜುಲೈನಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್
1250 views
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಬಹು ನಿರೀಕ್ಷೆಯ ಧಾರವಾಡ -ಬೆಂಗಳೂರು ಮಧ್ಯದ ವಂದೇ ಭಾರತ್ ರೈಲಿನ ಸೇವೆ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ''ದೆಹಲಿಯಲ್ಲಿ ಕೇಂದ್ರ ರೈಲ್ವೇ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದು, ರೈಲು ಸೇವೆಯ ಆರಂಭಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ'' ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನರ ಬಹು ನಿರೀಕ್ಷಿತ ವೇಗದ ರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದಾಗಿದೆ ಎಂದೂ ಜೋಶಿ ಹೇಳಿದ್ದಾರೆ. ಅತಿ ವೇಗದ ರೈಲು ಇದಾಗಿದ್ದು, ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಐಶಾರಾಮಿ ವ್ಯವಸ್ಥೆ, ಸೀಟುಗಳನ್ನು ವಿಮಾನದ ರೀತಿ ನಿರ್ಮಿಸಲಾಗಿದ್ದು, ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನರ ಬಹು ನಿರೀಕ್ಷಿತ ವೇಗದ ರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದಾಗಿದೆ ಎಂದೂ ಜೋಶಿ ಹೇಳಿದ್ದಾರೆ. ಅತಿ ವೇಗದ ರೈಲು ಇದಾಗಿದ್ದು, ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಐಶಾರಾಮಿ ವ್ಯವಸ್ಥೆ, ಸೀಟುಗಳನ್ನು ವಿಮಾನದ ರೀತಿ ನಿರ್ಮಿಸಲಾಗಿದ್ದು, ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ.