ಜೆಡಿಎಸ್ನವರು ಮೈತ್ರಿ ಬಯಸಿ ಬಿಜೆಪಿ ಮನೆಗೆ ಬಂದಿದ್ದಾರೆ; ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಯೇ ನಿಲ್ಲೋದು : ಪ್ರೀತಂ ಗೌಡ
1177 views
ಹಾಸನ ವಿಡಿಯೋಗಳಿಗೆ ಚಂದಾದಾರರಾಗಿಹಾಸನ : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದ ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ, ಜೆಡಿಎಸ್ನವರು ಮೈತ್ರಿ ಬಯಸಿ ಬಿಜೆಪಿ ಮನೆಗೆ ಬಂದವರು. ತಾವು ಕೊಟ್ಟಿದ್ದನ್ನು ತಿನ್ನಬೇಕು ಇಲ್ಲಸಲ್ಲದಕ್ಕೆಲ್ಲ ಬೇಡಿಕೆ ಇಡಬಾರದು. ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿ ಅಂತ ಬಯಸುತ್ತಿರುವವರಲ್ಲಿ ತಾನೂ ಒಬ್ಬ, ಜೆಡಿಎಸ್ ತಮ್ಮ ಮನೆಗೆ ಬಂದಿರೋದ್ರಿಂದ ಕೊಂಚ ಸಹಾಯವಾಗುತ್ತದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯೇ ಸ್ಪರ್ಧಿಸೋದು, ಕ್ಷೇತ್ರ ಬಿಜೆಪಿಗೆ ಸಿಗುತ್ತದೆ ಎಂದಯ ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಒಂದು ದೀರ್ಘಾವದಿಯ ಒಪ್ಪಂದವಾಗಿರೋದ್ರಿಂದ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿ ಪ್ರಚಾರ ಮಾಡುವ ಅನಿವಾರ್ಯತೆ ಇರುತ್ತೆ. ಅದು ಅವರಿಗೂ ಗೊತ್ತಿದೆ ಎಂದರು.