ಕಾವೇರಿ ವಿಚಾರದಲ್ಲಿ ಪ್ರಧಾನಿಯೊಬ್ಬರೇ ತೀರ್ಮಾನಿಸಲು ಸಾಧ್ಯವಿಲ್ಲ ; ಎಚ್ಡಿ ದೇವೇಗೌಡ
1179 views
ಹಾಸನ ವಿಡಿಯೋಗಳಿಗೆ ಚಂದಾದಾರರಾಗಿಹಾಸನ: ಕಾವೇರಿ ವಿಚಾರದಲ್ಲಿ ನಮ್ಮ ರಾಜ್ಯದಲ್ಲಿ ಒಗ್ಗಟ್ಟಿಲ್ಲ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಕರೆಯಲಾಗಿರುವ ಬಂದ್ ವಿಚಾರದಲ್ಲಿ ಮೊದಲು ನಮ್ಮಲ್ಲಿಯೇ ಒಗ್ಗಟ್ಟು ಇಲ್ಲ. ಇದು ನಮ್ಮ ರಾಜ್ಯದಲ್ಲಿರುವ ಸ್ಥಿತಿ ಎಂದರು.
ನಗರದ ಸಂಸದರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸ್ಥಳ ಪರಿಶೀಲನೆ ಮಾಡಿ ನೀರು ಎಷ್ಡಿದೆ ಎಂದು ವಿವರ ತಂದಿದ್ದಾರೆ. ಬಳಿಕ ಮತ್ತೆ ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ನಿಷ್ಪಕ್ಷಪಾತವಾಗಿ ಎರಡು ರಾಜ್ಯಗಳ ಸ್ಥಿತಿ ಅಧ್ಯಯನ ಮಾಡಲು ತಜ್ಞರ ಸಮಿತಿ ಕಳಿಸಿ ಎಂದು ಆ ಪತ್ರದಲ್ಲಿ ಕೇಳಿದ್ದೇನೆ. ನಾನು ಬರೆದ ಪತ್ರದ ಸಾರಾಂಶದ ಬಗ್ಗೆ ಸಿಎಂ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬೊಮ್ಮಾಯಿ ಎಲ್ಲರು ಸ್ವಾಗತ ಮಾಡಿದ್ದಾರೆ ಎಂದರು.
ನಮ್ಮ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಬೇಕು. ಹಾಗಾಗಿ ಆ ಬೆಳೆ ಉಳಿಸೋಕೆ ಇವರಿಂದ ಆಗಲ್ಲ. ಮತ್ತೆ ಸಿಡಬ್ಲು ಆರ್ ಸಿ ತೀರ್ಪಿನ ಬಗ್ಗೆ ಸರ್ಕಾರದ ನಿಲುವು ಇನ್ನು ಗೊತ್ತಿಲ್ಲ. ನಾನು ಹಿರಿಯ ರಾಜಕಾರಣಿ ಆಗಿ ನಮ್ಮಲ್ಲಿ ಐಕ್ಯತೆ ಇಲ್ಲ ಎಂದು ಹಲವಾರು ಬಾರಿ ಹೇಳಿದ್ದೇನೆ. ತಮಿಳುನಾಡಿನ ಪರಿಸ್ಥಿತಿ ಬೇರೆ ಇದೆ. ಈ ವಿಚಾರದಲ್ಲಿ ಸರ್ಕಾರದ ನಿಲುವು ಬಂದ ಮೇಲೆ ನಾವು ನಮ್ಮ ಪಕ್ಷ ಪ್ರತಿಕ್ರಿಯೆ ನೀಡುತ್ತೇವೆ ಎಂದರು.
ನಾನು ಬರೆದಿರೊ ಪತ್ರದಲ್ಲಿ ನಮ್ಮ ಹಾಲಿ ಬೆಳೆಗೆ 70 ಟಿಎಂಸಿ ನೀರು ಬೇಕೆಂದು ಸ್ಪಷ್ಟವಾಗಿ ಬರೆದಿದ್ದೇನೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಪ್ರಶ್ನೆ ಇಲ್ಲ. ಮನಮೋಹನ್ ಸಿಂಗ್ ತೀರ್ಮಾನ ಮಾಡಿದ್ರಾ, ವಾಜಪೇಯಿ ತೀರ್ಮಾನ ಮಾಡಿದ್ರಾ! ಪ್ರಧಾನಿಯೊಬ್ಬರೇ ಈ ಬಗ್ಗೆ ತೀರ್ಮಾನ ಮಾಡಲು ಆಗಲ್ಲ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ನಾಳೆ ವಿವರವಾಗಿ ಮಾತನಾಡುತ್ತೇನೆ. ನಾನು ತಪ್ಪಿಸಿಕೊಂಡು ಕದ್ದು ಓಡಿ ಹೋಗೋ ಪ್ರಶ್ನೆ ಇಲ್ಲ. ನನ್ನ ಜೀವನದಲ್ಲಿ ಎಂದೂ ಮಿಸ್ ಲೀಡ್ ಮಾಡಿಲ್ಲ. ಹಿಂದೆ ಸಂಕಷ್ಟ ಬಂದಾಗ ಸಿದ್ದರಾಮಯ್ಯ ಹಾಗೂ ಸುಪ್ರೀಂಕೋರ್ಟ್ ವಕೀಲರು ನಮ್ಮ ಮನೆಗೆ ಬಂದಿದ್ದರು. ನಾನು ಉಪವಾಸ ಕೂತಿದ್ದಾಗ ಅನಂತಕುಮಾರ್ ಕೂಡ ಇದ್ದರು. ದೇವೇಗೌಡರು ಹೇಳಿದ್ದಕ್ಕೆ ಬದ್ದ ಎಂದು ಹೇಳಿದ್ದರು. ಆಗ ಇದೇ ಪ್ರಧಾನಿ ಇದ್ದರು ಎಂದರು.
ಕಾವೇರಿ ನೀರು ಬಿಡದಂತೆ ಬೆಂಗಳೂರು ಬಂದ್ ಕರ್ನಾಟಕ ಬಂದ್ ವಿಚಾರವಾಗಿ ಪ್ರಶ್ನೆಯೊಂದಕ್ಕೆ ಮಾತನಾಡುತ್ತಾ, ಕೆಲವರು ಇಂದು ಬಂದ್ ಮಾಡಿದ್ದಾರೆ, ಇನ್ನು ಕೆಲವರು ಶುಕ್ರವಾರ ಮಾಡ್ತಾರಂತೆ ಮತ್ತೆ ಕೆಲವರು ವಿಧಾನಸೌಧಕ್ಕೆ ಮುತ್ತಿಗೆ ಹಾಕ್ತಾರಂತೆ. ಇದೆ ನಮ್ಮ ಕರ್ನಾಟಕ ಎಂದು ನಸುನಕ್ಕರು.
ನಗರದ ಸಂಸದರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸ್ಥಳ ಪರಿಶೀಲನೆ ಮಾಡಿ ನೀರು ಎಷ್ಡಿದೆ ಎಂದು ವಿವರ ತಂದಿದ್ದಾರೆ. ಬಳಿಕ ಮತ್ತೆ ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ನಿಷ್ಪಕ್ಷಪಾತವಾಗಿ ಎರಡು ರಾಜ್ಯಗಳ ಸ್ಥಿತಿ ಅಧ್ಯಯನ ಮಾಡಲು ತಜ್ಞರ ಸಮಿತಿ ಕಳಿಸಿ ಎಂದು ಆ ಪತ್ರದಲ್ಲಿ ಕೇಳಿದ್ದೇನೆ. ನಾನು ಬರೆದ ಪತ್ರದ ಸಾರಾಂಶದ ಬಗ್ಗೆ ಸಿಎಂ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬೊಮ್ಮಾಯಿ ಎಲ್ಲರು ಸ್ವಾಗತ ಮಾಡಿದ್ದಾರೆ ಎಂದರು.
ನಮ್ಮ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಬೇಕು. ಹಾಗಾಗಿ ಆ ಬೆಳೆ ಉಳಿಸೋಕೆ ಇವರಿಂದ ಆಗಲ್ಲ. ಮತ್ತೆ ಸಿಡಬ್ಲು ಆರ್ ಸಿ ತೀರ್ಪಿನ ಬಗ್ಗೆ ಸರ್ಕಾರದ ನಿಲುವು ಇನ್ನು ಗೊತ್ತಿಲ್ಲ. ನಾನು ಹಿರಿಯ ರಾಜಕಾರಣಿ ಆಗಿ ನಮ್ಮಲ್ಲಿ ಐಕ್ಯತೆ ಇಲ್ಲ ಎಂದು ಹಲವಾರು ಬಾರಿ ಹೇಳಿದ್ದೇನೆ. ತಮಿಳುನಾಡಿನ ಪರಿಸ್ಥಿತಿ ಬೇರೆ ಇದೆ. ಈ ವಿಚಾರದಲ್ಲಿ ಸರ್ಕಾರದ ನಿಲುವು ಬಂದ ಮೇಲೆ ನಾವು ನಮ್ಮ ಪಕ್ಷ ಪ್ರತಿಕ್ರಿಯೆ ನೀಡುತ್ತೇವೆ ಎಂದರು.
ನಾನು ಬರೆದಿರೊ ಪತ್ರದಲ್ಲಿ ನಮ್ಮ ಹಾಲಿ ಬೆಳೆಗೆ 70 ಟಿಎಂಸಿ ನೀರು ಬೇಕೆಂದು ಸ್ಪಷ್ಟವಾಗಿ ಬರೆದಿದ್ದೇನೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಪ್ರಶ್ನೆ ಇಲ್ಲ. ಮನಮೋಹನ್ ಸಿಂಗ್ ತೀರ್ಮಾನ ಮಾಡಿದ್ರಾ, ವಾಜಪೇಯಿ ತೀರ್ಮಾನ ಮಾಡಿದ್ರಾ! ಪ್ರಧಾನಿಯೊಬ್ಬರೇ ಈ ಬಗ್ಗೆ ತೀರ್ಮಾನ ಮಾಡಲು ಆಗಲ್ಲ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ನಾಳೆ ವಿವರವಾಗಿ ಮಾತನಾಡುತ್ತೇನೆ. ನಾನು ತಪ್ಪಿಸಿಕೊಂಡು ಕದ್ದು ಓಡಿ ಹೋಗೋ ಪ್ರಶ್ನೆ ಇಲ್ಲ. ನನ್ನ ಜೀವನದಲ್ಲಿ ಎಂದೂ ಮಿಸ್ ಲೀಡ್ ಮಾಡಿಲ್ಲ. ಹಿಂದೆ ಸಂಕಷ್ಟ ಬಂದಾಗ ಸಿದ್ದರಾಮಯ್ಯ ಹಾಗೂ ಸುಪ್ರೀಂಕೋರ್ಟ್ ವಕೀಲರು ನಮ್ಮ ಮನೆಗೆ ಬಂದಿದ್ದರು. ನಾನು ಉಪವಾಸ ಕೂತಿದ್ದಾಗ ಅನಂತಕುಮಾರ್ ಕೂಡ ಇದ್ದರು. ದೇವೇಗೌಡರು ಹೇಳಿದ್ದಕ್ಕೆ ಬದ್ದ ಎಂದು ಹೇಳಿದ್ದರು. ಆಗ ಇದೇ ಪ್ರಧಾನಿ ಇದ್ದರು ಎಂದರು.
ಕಾವೇರಿ ನೀರು ಬಿಡದಂತೆ ಬೆಂಗಳೂರು ಬಂದ್ ಕರ್ನಾಟಕ ಬಂದ್ ವಿಚಾರವಾಗಿ ಪ್ರಶ್ನೆಯೊಂದಕ್ಕೆ ಮಾತನಾಡುತ್ತಾ, ಕೆಲವರು ಇಂದು ಬಂದ್ ಮಾಡಿದ್ದಾರೆ, ಇನ್ನು ಕೆಲವರು ಶುಕ್ರವಾರ ಮಾಡ್ತಾರಂತೆ ಮತ್ತೆ ಕೆಲವರು ವಿಧಾನಸೌಧಕ್ಕೆ ಮುತ್ತಿಗೆ ಹಾಕ್ತಾರಂತೆ. ಇದೆ ನಮ್ಮ ಕರ್ನಾಟಕ ಎಂದು ನಸುನಕ್ಕರು.