ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು ಕಡಿದ ಕಿಡಿಗೇಡಿಗಳು; ಕಣ್ಣೀರಿಟ್ಟ ರೈತ!
1087 views
ಹಾಸನ ವಿಡಿಯೋಗಳಿಗೆ ಚಂದಾದಾರರಾಗಿಹಾಸನ: ಫಸಲಿಗೆ ಬಂದಿದ್ದ 50-60 ಅಡಿಕೆ ಮರಗಳನ್ನು ಕಿಡಿಗೇಡಿಗಳ ನಾಶ ಪಡಿಸಿರುವ ಘಟನೆ ಹಾಸನ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಗ್ಗಣ್ಣ ಎಂಬುವರಿಗೆ ಸೇರಿದ ಸುಮಾರು 50ರಿಂದ 60 ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಬುಡ ಸಮೇತ ಕಡಿದು ಹಾಕಿದ್ದಾರೆ. ವೈಯುಕ್ತಿಕ ದ್ವೇಷದಿಂದ ಹೀಗೆ ಮಾಡಿರುವ ಬಗ್ಗೆ ಅನುಮಾನ ಮೂಡಿದ್ದು, ಮಾಲೀಕ ಕಣ್ಣೀರು ಹಾಕಿದ್ದಾರೆ.
ಆದಷ್ಟು ಬೇಗ ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಸೂಕ್ತ ಪರಿಹಾರ ನೀಡಬೇಕೆಂದು ರೈತ ಮನವಿ ಮಾಡಿದ್ದಾರೆ. ಇದ್ದ ಅಲ್ಪ ಸ್ವಲ್ಪ ಜಮೀನಿನಲ್ಲೇ ಜೀವನ ಸಾಗಿಸುತ್ತಿದ್ದ ಜಗ್ಗಣ್ಣ ಫಸಲಿಗೆ ಬಂದ ಅಡಿಕೆ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಪ್ರಕರಣ ಸಂಬಂಧ ದುದ್ದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಆದಷ್ಟು ಬೇಗ ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಸೂಕ್ತ ಪರಿಹಾರ ನೀಡಬೇಕೆಂದು ರೈತ ಮನವಿ ಮಾಡಿದ್ದಾರೆ. ಇದ್ದ ಅಲ್ಪ ಸ್ವಲ್ಪ ಜಮೀನಿನಲ್ಲೇ ಜೀವನ ಸಾಗಿಸುತ್ತಿದ್ದ ಜಗ್ಗಣ್ಣ ಫಸಲಿಗೆ ಬಂದ ಅಡಿಕೆ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಪ್ರಕರಣ ಸಂಬಂಧ ದುದ್ದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.