ಬ್ಯಾಡಗಿ ಎಪಿಎಂಸಿಗೆ ಬೆಂಕಿ ಹಚ್ಚಿದ ಮೆಣಸಿನಕಾಯಿ ಬೆಳೆಗಾರರು, ಅಗ್ನಿಶಾಮಕ ವಾಹನಕ್ಕೂ ಹೊತ್ತಿದ ಕಿಚ್ಚು!
1469 views
ಹಾವೇರಿ ವಿಡಿಯೋಗಳಿಗೆ ಚಂದಾದಾರರಾಗಿಉತ್ತಮ ಬೆಲೆ ಕಂಡಿದ್ದ ಬ್ಯಾಡಗಿ ಮೆಣಸಿನಕಾಯಿ ದಿಢೀರ್ ಕುಸಿತದಿಂದ ಬೆಳೆಗಾರರು ರೊಚ್ಚಿಗೆದ್ದರು. ದೊಡ್ಡ ಮೊತ್ತದ ನಿರೀಕ್ಷೆಯಲ್ಲಿದ್ದ ರೈತರಿಗೆ ಮೆಣಸಿನಕಾಯಿ ದರ ಕುಸಿತವು ಆಘಾತ ತಂದಿದೆ. ತಂದಿದ್ದ ಚೀಲಗಟ್ಟಲೆ ಮೆಣಸಿನಕಾಯಿಗೆ ರೇಟ್ ಕಡಿಮೆಯಾಗಿರುವುದು ಗೊತ್ತಾಗುತ್ತಿದ್ದಂತೆ ಎಪಿಎಂಸಿ ಆಡಳಿತ ಕಚೇರಿಗೆ ಕಲ್ಲು ತೂರಾಟ ನಡೆಯಿತು. ಗಲಾಟೆ ಹೆಚ್ಚಾಗಿ ಬೆಂಕಿ ಹಚ್ಚಲಾಯಿತು.
ಹಾವೇರಿಯ ಬ್ಯಾಡಗಿ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಮೆಣಸಿನಕಾಯಿ ತರಲಾಗುತ್ತಿದೆ. ಆವಕ ಹೆಚ್ಚಿದರೂ ಬೆಲೆಯಲ್ಲಿ ಇಳಿಕೆಯಾಗಿರಲಿಲ್ಲ. ಬ್ಯಾಡಗಿ ಎಪಿಎಂಸಿಯಲ್ಲಿ ಸಂಗ್ರಹಕ್ಕೆ ಜಾಗ ಇಲ್ಲದೆ, ಮೈದಾನದಲ್ಲಿ ಮೆಣಸಿನಕಾಯಿ ಮೂಟೆ ಇಳಿಸಿ, ಹರಾಜು ಮಾಡಲಾಗುತ್ತಿತ್ತು. ಆದರೆ, ಈಗ ಕಳೆದ ವಾರಕ್ಕಿಂತ ಅರ್ಧದಷ್ಟು ದರ ಕಡಿಮೆಯಾಗಿದೆ. ನೂರಾರು ಕಿಲೋ ಮೀಟರ್ ದೂರದಿಂದ ಸಾವಿರಾರು ರೂಪಾಯಿ ಖರ್ಚು ಮಾಡಿಕೊಂಡು ಬಂದಿದ್ದೆವು ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಕಳೆದ ವಾರ ಪ್ರತಿ ಕ್ವಿಂಟಾಲ್ ಮೆಣಸಿನಕಾಯಿಗೆ 20 ಸಾವಿರ ರೂಪಾಯಿ ದರ ನಿಗದಿಯಾಗಿತ್ತು. ಈ ವಾರ ಪ್ರತಿ ಕ್ವಿಂಟಾಲ್ 12 ಸಾವಿರ ರೂಪಾಯಿಗೆ ಇಳಿದಿದೆ. ಇದರಿಂದಾಗಿ ಆಕ್ರೋಶಗೊಂಡ ರೈತರು ಎಪಿಎಂಸಿ ಮುಂದೆ ಇದ್ದ ಕಾರು, ಕಚೇರಿಯ ಗಾಜಿಗೆ ಕಲ್ಲು ತೂರಿದರು. ಪೀಠೋಪಕರಣಗಳನ್ನು ಧ್ವಂಸ ಮಾಡಿದರು. ವಾಹನಗಳಿಗೆ ಬೆಂಕಿ ಹಚ್ಚಿದರು. ಕಾರು, ಚೀಪ್, ಬೈಕ್ ಜೊತೆಗೆ ಅಗ್ನಿಶಾಮಕ ದಳದ ವಾಹನಕ್ಕೂ ಬೆಂಕಿ ಇಟ್ಟರು.
ಗಲಾಟೆ ಜೋರಾಗುತ್ತಿದ್ದಂತೆ ಪೊಲೀಸರು, ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸತತ ಯತ್ನ ನಡೆಸಿದರು. ವಾಹನಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಎಪಿಎಂಸಿಯ ಸುತ್ತಮುತ್ತಲು ಗಾಢವಾದ ಹೊಗೆ ಆವರಿಸಿತು.
ಬ್ಯಾಡಗಿ ಎಪಿಎಂಸಿ ಕಚೇರಿಯ ಸಮೀಪ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ತುಕಡಿಗಳು ಬ್ಯಾಡಗಿ ಪಟ್ಟಣದಲ್ಲಿ ಬೀಡು ಬಿಟ್ಟಿವೆ. ಪರಿಸ್ಥಿತಿಯು ನಿಯಂತ್ರಣದಲ್ಲಿದ್ದು, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಎಪಿಎಂಸಿಯಲ್ಲಿ ಕರೆಂಟ್ ಕಡಿತಗೊಂಡಿದೆ. ಬ್ಯಾಡಗಿ ನಿಷೇಧಾಜ್ಞೆ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಗಲಾಟೆ ನಡೆಸುತ್ತಿದ್ದವರ ಪೈಕಿ ಹಲವು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಷ್ಟೇ ಅಲ್ಲದೇ ಆಂಧ್ರ ಪ್ರದೇಶ, ತೆಲಂಗಾಣದಿಂದಲೂ ರೈತರು ಬ್ಯಾಡಗಿಯ ಮಾರುಕಟ್ಟೆಗೆ ಮೆಣಸಿನಕಾಯಿ ತಂದಿದ್ದಾರೆ. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಪಾರದರ್ಶಕ ಮತ್ತು ಇ ಟೆಂಡರ್ ವ್ಯವಸ್ಥೆ. ಇಲ್ಲಿಯ ವರ್ತಕರು ರೈತರಿಗೆ ಮೋಸವಾಗಲು ಬಿಡುವುದಿಲ್ಲ ಎಂಬ ಮಾತೂ ಇದೆ. ಈ ನಂಬಿಕೆಯಿಂದ ಈ ಮಾರುಕಟ್ಟೆಗೆ ವರ್ಷದಿಂದ ವರ್ಷಕ್ಕೆ ಮೆಣಸಿನಕಾಯಿ ಮಾರಾಟ ಮಾಡಲು ಹೆಚ್ಚಿನ ರೈತರು ಬರುತ್ತಿದ್ದಾರೆ. ಆದರೆ, ಸೋಮವಾರ ನಡೆದಿರುವ ಘಟನೆಯು ಎಪಿಎಂಸಿಗೆ ತಲೆ ನೋವಾಗಿ ಪರಿಣಮಿಸಿದೆ.
ಹಾವೇರಿಯ ಬ್ಯಾಡಗಿ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಮೆಣಸಿನಕಾಯಿ ತರಲಾಗುತ್ತಿದೆ. ಆವಕ ಹೆಚ್ಚಿದರೂ ಬೆಲೆಯಲ್ಲಿ ಇಳಿಕೆಯಾಗಿರಲಿಲ್ಲ. ಬ್ಯಾಡಗಿ ಎಪಿಎಂಸಿಯಲ್ಲಿ ಸಂಗ್ರಹಕ್ಕೆ ಜಾಗ ಇಲ್ಲದೆ, ಮೈದಾನದಲ್ಲಿ ಮೆಣಸಿನಕಾಯಿ ಮೂಟೆ ಇಳಿಸಿ, ಹರಾಜು ಮಾಡಲಾಗುತ್ತಿತ್ತು. ಆದರೆ, ಈಗ ಕಳೆದ ವಾರಕ್ಕಿಂತ ಅರ್ಧದಷ್ಟು ದರ ಕಡಿಮೆಯಾಗಿದೆ. ನೂರಾರು ಕಿಲೋ ಮೀಟರ್ ದೂರದಿಂದ ಸಾವಿರಾರು ರೂಪಾಯಿ ಖರ್ಚು ಮಾಡಿಕೊಂಡು ಬಂದಿದ್ದೆವು ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಕಳೆದ ವಾರ ಪ್ರತಿ ಕ್ವಿಂಟಾಲ್ ಮೆಣಸಿನಕಾಯಿಗೆ 20 ಸಾವಿರ ರೂಪಾಯಿ ದರ ನಿಗದಿಯಾಗಿತ್ತು. ಈ ವಾರ ಪ್ರತಿ ಕ್ವಿಂಟಾಲ್ 12 ಸಾವಿರ ರೂಪಾಯಿಗೆ ಇಳಿದಿದೆ. ಇದರಿಂದಾಗಿ ಆಕ್ರೋಶಗೊಂಡ ರೈತರು ಎಪಿಎಂಸಿ ಮುಂದೆ ಇದ್ದ ಕಾರು, ಕಚೇರಿಯ ಗಾಜಿಗೆ ಕಲ್ಲು ತೂರಿದರು. ಪೀಠೋಪಕರಣಗಳನ್ನು ಧ್ವಂಸ ಮಾಡಿದರು. ವಾಹನಗಳಿಗೆ ಬೆಂಕಿ ಹಚ್ಚಿದರು. ಕಾರು, ಚೀಪ್, ಬೈಕ್ ಜೊತೆಗೆ ಅಗ್ನಿಶಾಮಕ ದಳದ ವಾಹನಕ್ಕೂ ಬೆಂಕಿ ಇಟ್ಟರು.
ಗಲಾಟೆ ಜೋರಾಗುತ್ತಿದ್ದಂತೆ ಪೊಲೀಸರು, ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸತತ ಯತ್ನ ನಡೆಸಿದರು. ವಾಹನಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಎಪಿಎಂಸಿಯ ಸುತ್ತಮುತ್ತಲು ಗಾಢವಾದ ಹೊಗೆ ಆವರಿಸಿತು.
ಬ್ಯಾಡಗಿ ಎಪಿಎಂಸಿ ಕಚೇರಿಯ ಸಮೀಪ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ತುಕಡಿಗಳು ಬ್ಯಾಡಗಿ ಪಟ್ಟಣದಲ್ಲಿ ಬೀಡು ಬಿಟ್ಟಿವೆ. ಪರಿಸ್ಥಿತಿಯು ನಿಯಂತ್ರಣದಲ್ಲಿದ್ದು, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಎಪಿಎಂಸಿಯಲ್ಲಿ ಕರೆಂಟ್ ಕಡಿತಗೊಂಡಿದೆ. ಬ್ಯಾಡಗಿ ನಿಷೇಧಾಜ್ಞೆ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಗಲಾಟೆ ನಡೆಸುತ್ತಿದ್ದವರ ಪೈಕಿ ಹಲವು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಷ್ಟೇ ಅಲ್ಲದೇ ಆಂಧ್ರ ಪ್ರದೇಶ, ತೆಲಂಗಾಣದಿಂದಲೂ ರೈತರು ಬ್ಯಾಡಗಿಯ ಮಾರುಕಟ್ಟೆಗೆ ಮೆಣಸಿನಕಾಯಿ ತಂದಿದ್ದಾರೆ. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಪಾರದರ್ಶಕ ಮತ್ತು ಇ ಟೆಂಡರ್ ವ್ಯವಸ್ಥೆ. ಇಲ್ಲಿಯ ವರ್ತಕರು ರೈತರಿಗೆ ಮೋಸವಾಗಲು ಬಿಡುವುದಿಲ್ಲ ಎಂಬ ಮಾತೂ ಇದೆ. ಈ ನಂಬಿಕೆಯಿಂದ ಈ ಮಾರುಕಟ್ಟೆಗೆ ವರ್ಷದಿಂದ ವರ್ಷಕ್ಕೆ ಮೆಣಸಿನಕಾಯಿ ಮಾರಾಟ ಮಾಡಲು ಹೆಚ್ಚಿನ ರೈತರು ಬರುತ್ತಿದ್ದಾರೆ. ಆದರೆ, ಸೋಮವಾರ ನಡೆದಿರುವ ಘಟನೆಯು ಎಪಿಎಂಸಿಗೆ ತಲೆ ನೋವಾಗಿ ಪರಿಣಮಿಸಿದೆ.