ಶಿಗ್ಗಾಂವಿ: ಶಿಶುನಾಳ್ ಶರೀಫ-ಗುರು ಗೋವಿಂದ ಭಟ್ಟರ ರಥೋತ್ಸವದಲ್ಲಿ ಭಕ್ತ ಸಾಗರ, ಸಾಮರಸ್ಯದ ಜಾತ್ರೆ
1075 views
ಹಾವೇರಿ ವಿಡಿಯೋಗಳಿಗೆ ಚಂದಾದಾರರಾಗಿಕೋಮು ಸಾಮರಸ್ಯ ಸಾರುವ ಶಿಶುನಾಳ್ ಶರೀಫ್ ಮತ್ತು ಗುರು ಗೋವಿಂದ ಭಟ್ಟರ ರಥೋತ್ಸವವು ವೈಭವದಿಂದ ನಡೆಯಿತು. ಶಿಗ್ಗಾಂವಿಯ ಶಿಶುನಾಳ ಗ್ರಾಮದ ಶರೀಫಗಿರಿಯಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
''ಈಶ್ವರ ಅಲ್ಲಾ ನೀನೆ ಎಲ್ಲಾ'' ಎಂಬ ಘೋಷಣೆಗಳು ಕೇಳಿದವು. ಹಿಂದೂ ಮುಸ್ಲಿಮ್ ಬಾಂಧವರು ಒಂದಾಗಿ ಗುರು ಶಿಷ್ಯರ ಮೂರ್ತಿಗಳಿಗೆ ಪೂಜೆ ಸಲ್ಲಿಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೂ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ''ಜನರ ಉತ್ಸಾಹ ಭಕ್ತಿಭಾವ ನೋಡಿ ಸಂತಸ ಉಂಟಾಗಿದೆ. ಈ ಹಿಂದೆಯೂ ಹಲವು ಬಾರಿ ನಾನು ಶಿಶುನಾಳ ಶರೀಫ ಜಾತ್ರೆಯಲ್ಲಿ ಪಾಲ್ಗೊಂಡಿದ್ದೆ'' ಎಂಬುದನ್ನು ನೆನೆದರು.
ಗುರು ಗೋವಿಂದ ಭಟ್ಟರು ಮತ್ತು ಶಿಶುನಾಳ ಶರೀಫರ ಬೆಳ್ಳಿಯ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ತರಲಾಯಿತು. ರಥದ ಸುತ್ತ ಪ್ರದಕ್ಷಿಣೆ ಮಾಡಿದ ನಂತರ ಮೂರ್ತಿಗಳನ್ನು ರಥದಲ್ಲಿಟ್ಟು ಪೂಜೆ ಸಲ್ಲಿಸಲಾಯಿತು. ಪೂಜೆ ಸಲ್ಲಿಸುತ್ತಿದ್ದಂತೆ ಭಕ್ತರು ಜೈಕಾರ ಹಾಕಿದರು. ನಂತರ ಭಕ್ತರು ರಥ ಎಳೆದು ಪುನೀತರಾದರು.
ರಥ ಸಾಗುತ್ತಿದ್ದಂತೆ ಭಕ್ತರು ರಥದ ಕಳಸಕ್ಕೆ ಉತ್ತತ್ತಿ, ಬಾಳೆಹಣ್ಣು ನಿಂಬೆಹಣ್ಣುಗಳನ್ನು ಎಸೆದು ಪ್ರಾರ್ಥನೆ ಸಲ್ಲಿಸಿದರು. ರಥಕ್ಕೆ ಮಾಡಿದ್ದ ಹೂವಿನ ಅಲಂಕಾರ ಮತ್ತು ಬೃಹತ್ ರುದ್ರಾಕ್ಷಿಮಾಲೆಗಳು ಗಮನ ಸೆಳೆದವು.
ರಥೋತ್ಸವಕ್ಕೆ ರಾಜ್ಯದ ವಿವಿಧಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಜಾತ್ರಾ ಮಹೋತ್ಸವದ ಅಂಗವಾಗಿ ಶಿಶುನಾಳ ಶರೀಫರ ಮತ್ತು ಗುರು ಗೋವಿಂದ ಭಟ್ಟರ ದೇವಸ್ಥಾನಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶಿಶುನಾಳ ಶರೀಫರ ಗದ್ದುಗಿ ದರ್ಶನಕ್ಕೆ ಭಕ್ತರು ಸರತಿಯಲ್ಲಿ ನಿಂತಿದ್ದರು. ಗದ್ದುಗೆ ಬಳಿಕ ಮೂರ್ತಿಯ ದರ್ಶನ ಪಡೆದು ಭಕ್ತರು ಗುರು-ಶಿಷ್ಯರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಮರು ಸಕ್ಕರೆ ನೈವಿಧ್ಯ ಹಿಡಿದರೆ, ಹಿಂದೂಗಳು ತೆಂಗಿನಕಾಯಿ ಮತ್ತು ಬಾಳೆಹಣ್ಣು ನೈವಿಧ್ಯ ಸಲ್ಲಿಸಿದರು.
''ಈಶ್ವರ ಅಲ್ಲಾ ನೀನೆ ಎಲ್ಲಾ'' ಎಂಬ ಘೋಷಣೆಗಳು ಕೇಳಿದವು. ಹಿಂದೂ ಮುಸ್ಲಿಮ್ ಬಾಂಧವರು ಒಂದಾಗಿ ಗುರು ಶಿಷ್ಯರ ಮೂರ್ತಿಗಳಿಗೆ ಪೂಜೆ ಸಲ್ಲಿಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೂ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ''ಜನರ ಉತ್ಸಾಹ ಭಕ್ತಿಭಾವ ನೋಡಿ ಸಂತಸ ಉಂಟಾಗಿದೆ. ಈ ಹಿಂದೆಯೂ ಹಲವು ಬಾರಿ ನಾನು ಶಿಶುನಾಳ ಶರೀಫ ಜಾತ್ರೆಯಲ್ಲಿ ಪಾಲ್ಗೊಂಡಿದ್ದೆ'' ಎಂಬುದನ್ನು ನೆನೆದರು.
ಗುರು ಗೋವಿಂದ ಭಟ್ಟರು ಮತ್ತು ಶಿಶುನಾಳ ಶರೀಫರ ಬೆಳ್ಳಿಯ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ತರಲಾಯಿತು. ರಥದ ಸುತ್ತ ಪ್ರದಕ್ಷಿಣೆ ಮಾಡಿದ ನಂತರ ಮೂರ್ತಿಗಳನ್ನು ರಥದಲ್ಲಿಟ್ಟು ಪೂಜೆ ಸಲ್ಲಿಸಲಾಯಿತು. ಪೂಜೆ ಸಲ್ಲಿಸುತ್ತಿದ್ದಂತೆ ಭಕ್ತರು ಜೈಕಾರ ಹಾಕಿದರು. ನಂತರ ಭಕ್ತರು ರಥ ಎಳೆದು ಪುನೀತರಾದರು.
ರಥ ಸಾಗುತ್ತಿದ್ದಂತೆ ಭಕ್ತರು ರಥದ ಕಳಸಕ್ಕೆ ಉತ್ತತ್ತಿ, ಬಾಳೆಹಣ್ಣು ನಿಂಬೆಹಣ್ಣುಗಳನ್ನು ಎಸೆದು ಪ್ರಾರ್ಥನೆ ಸಲ್ಲಿಸಿದರು. ರಥಕ್ಕೆ ಮಾಡಿದ್ದ ಹೂವಿನ ಅಲಂಕಾರ ಮತ್ತು ಬೃಹತ್ ರುದ್ರಾಕ್ಷಿಮಾಲೆಗಳು ಗಮನ ಸೆಳೆದವು.
ರಥೋತ್ಸವಕ್ಕೆ ರಾಜ್ಯದ ವಿವಿಧಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಜಾತ್ರಾ ಮಹೋತ್ಸವದ ಅಂಗವಾಗಿ ಶಿಶುನಾಳ ಶರೀಫರ ಮತ್ತು ಗುರು ಗೋವಿಂದ ಭಟ್ಟರ ದೇವಸ್ಥಾನಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶಿಶುನಾಳ ಶರೀಫರ ಗದ್ದುಗಿ ದರ್ಶನಕ್ಕೆ ಭಕ್ತರು ಸರತಿಯಲ್ಲಿ ನಿಂತಿದ್ದರು. ಗದ್ದುಗೆ ಬಳಿಕ ಮೂರ್ತಿಯ ದರ್ಶನ ಪಡೆದು ಭಕ್ತರು ಗುರು-ಶಿಷ್ಯರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಮರು ಸಕ್ಕರೆ ನೈವಿಧ್ಯ ಹಿಡಿದರೆ, ಹಿಂದೂಗಳು ತೆಂಗಿನಕಾಯಿ ಮತ್ತು ಬಾಳೆಹಣ್ಣು ನೈವಿಧ್ಯ ಸಲ್ಲಿಸಿದರು.