ಪ್ರಿಯಾಂಕ್ ಖರ್ಗೆ ನಾಯಕ ಅಲ್ಲ, ನಾನ್ ಸೆನ್ಸ್ ಮಂತ್ರಿ ; ಮಣಿಕಂಠ ರಾಠೋಡ್
1111 views
ಕಲಬುರಗಿ ವಿಡಿಯೋಗಳಿಗೆ ಚಂದಾದಾರರಾಗಿಕಲಬುರಗಿ: ಪ್ರಿಯಾಂಕ್ ಖರ್ಗೆ ನಾಯಕ ಅಲ್ಲ, ನಾನ್ ಸೆನ್ಸ್ ಮಂತ್ರಿ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಚಿತ್ತಾಪೂರದಲ್ಲಿ ಕೋಲಿ ಸಮಾಜದ ಯುವಕ ದೇವಾನಂದ ಆತ್ಮಹತ್ಯೆ ಆರೋಪಿ ಬಂಧನಕ್ಕೆ ಆಗ್ರಹಿಸಿ ತಿಂಗಳಿಂದ ಸಮಾಜದವರು ಸತ್ಯಾಗ್ರಹ ನಡೆಸುತ್ತಿದ್ದಾರೆ. ಸಮಸ್ಯೆಗೆ ಪರಿಹಾರ ಕೊಡುವುದು ಒತ್ತಟ್ಟಿಗಿರಲಿ, ಮನವಿ ಪಡೆಯುವ ಸೌಜನ್ಯವೂ ಕೂಡ ಇಲ್ಲ. ರಸ್ತೆ ಮೇಲೆ ಉರುಳಾಡಿ ಪ್ರತಿಭಟನೆ ನಡೆಸುತ್ತಿದ್ದರೂ ಗಮನ ಹರಿಸದೇ ಹೋಗ್ತಾರೆ. ಹೀಗಾಗಿ ಇವರು ನಾಯಕರಲ್ಲ, ನಾನ್ ಸೆನ್ಸ್ ಎನ್ನಬೇಕಾಗುತ್ತದೆ. ಪ್ರಿಯಾಂಕ್ ಇಷ್ಟೂ ನಾನ್ ಸೆನ್ಸ್ ಇಲ್ಲದ ವ್ಯಕ್ತಿ, ಮಾನವೀಯತೆ ಇಲ್ಲದ ವ್ಯಕ್ತಿ ಎಂದು ಹರಿಹಾಯ್ದರು.
ಇದೇ ವೇಳೆ ಮಾತನಾಡಿದ ಅವರು, ಹಿಂದೂ ಪರ ಹೋರಾಟಗಾರ ಆಂದೋಲಾ ಸ್ವಾಮೀಜಿಗೆ ಬೆದರಿಕೆ ಹಾಕಲಾಗುತ್ತಿದೆ. ವ್ಯಕ್ತಿಯೊಬ್ಬ ಅವರಿಗೆ ಕರೆ ಮಾಡಿ ಹಲ್ಲೆ ಮಾಡುವ ರೀತಿ ಮಾತನಾಡಿದ್ದಾನೆ. ಕಾಂಗ್ರೆಸ್ನಲ್ಲಿರುವ ಲಿಂಗಾಯತ ನಾಯಕರೇ ಎಲ್ಲಿದ್ದೀರಿ, ಧರ್ಮ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಸ್ವಾಮಿಜಿಗೆ ಅವಾಚ್ಯವಾಗಿ ನಿಂದಿಸಲಾಗಿದೆ. ಧರ್ಮ ರಕ್ಷಣೆಗಾಗಿ ಆಂದೋಲ ಸ್ವಾಮೀಜಿ ಪರವಾಗಿ ನಿಲ್ಲಿರಿ. ಕಾಂಗ್ರೆಸ್ ನ ಲಿಂಗಾಯತ ನಾಯಕರು, ಕುರ್ಚಿ ಆಸೆಗಾಗಿ ಸುಮ್ಮನಿದ್ದೀರಾ? ಎಂದು ಕಾಂಗ್ರೆಸ್ ನ ಲಿಂಗಾಯತ ನಾಯಕರಿಗೆ ಮಣಿಕಂಠ ರಾಠೋಡ್ ಟಾಂಗ್ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಚಿತ್ತಾಪೂರದಲ್ಲಿ ಕೋಲಿ ಸಮಾಜದ ಯುವಕ ದೇವಾನಂದ ಆತ್ಮಹತ್ಯೆ ಆರೋಪಿ ಬಂಧನಕ್ಕೆ ಆಗ್ರಹಿಸಿ ತಿಂಗಳಿಂದ ಸಮಾಜದವರು ಸತ್ಯಾಗ್ರಹ ನಡೆಸುತ್ತಿದ್ದಾರೆ. ಸಮಸ್ಯೆಗೆ ಪರಿಹಾರ ಕೊಡುವುದು ಒತ್ತಟ್ಟಿಗಿರಲಿ, ಮನವಿ ಪಡೆಯುವ ಸೌಜನ್ಯವೂ ಕೂಡ ಇಲ್ಲ. ರಸ್ತೆ ಮೇಲೆ ಉರುಳಾಡಿ ಪ್ರತಿಭಟನೆ ನಡೆಸುತ್ತಿದ್ದರೂ ಗಮನ ಹರಿಸದೇ ಹೋಗ್ತಾರೆ. ಹೀಗಾಗಿ ಇವರು ನಾಯಕರಲ್ಲ, ನಾನ್ ಸೆನ್ಸ್ ಎನ್ನಬೇಕಾಗುತ್ತದೆ. ಪ್ರಿಯಾಂಕ್ ಇಷ್ಟೂ ನಾನ್ ಸೆನ್ಸ್ ಇಲ್ಲದ ವ್ಯಕ್ತಿ, ಮಾನವೀಯತೆ ಇಲ್ಲದ ವ್ಯಕ್ತಿ ಎಂದು ಹರಿಹಾಯ್ದರು.
ಇದೇ ವೇಳೆ ಮಾತನಾಡಿದ ಅವರು, ಹಿಂದೂ ಪರ ಹೋರಾಟಗಾರ ಆಂದೋಲಾ ಸ್ವಾಮೀಜಿಗೆ ಬೆದರಿಕೆ ಹಾಕಲಾಗುತ್ತಿದೆ. ವ್ಯಕ್ತಿಯೊಬ್ಬ ಅವರಿಗೆ ಕರೆ ಮಾಡಿ ಹಲ್ಲೆ ಮಾಡುವ ರೀತಿ ಮಾತನಾಡಿದ್ದಾನೆ. ಕಾಂಗ್ರೆಸ್ನಲ್ಲಿರುವ ಲಿಂಗಾಯತ ನಾಯಕರೇ ಎಲ್ಲಿದ್ದೀರಿ, ಧರ್ಮ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಸ್ವಾಮಿಜಿಗೆ ಅವಾಚ್ಯವಾಗಿ ನಿಂದಿಸಲಾಗಿದೆ. ಧರ್ಮ ರಕ್ಷಣೆಗಾಗಿ ಆಂದೋಲ ಸ್ವಾಮೀಜಿ ಪರವಾಗಿ ನಿಲ್ಲಿರಿ. ಕಾಂಗ್ರೆಸ್ ನ ಲಿಂಗಾಯತ ನಾಯಕರು, ಕುರ್ಚಿ ಆಸೆಗಾಗಿ ಸುಮ್ಮನಿದ್ದೀರಾ? ಎಂದು ಕಾಂಗ್ರೆಸ್ ನ ಲಿಂಗಾಯತ ನಾಯಕರಿಗೆ ಮಣಿಕಂಠ ರಾಠೋಡ್ ಟಾಂಗ್ ಕೊಟ್ಟಿದ್ದಾರೆ.