ಬರ ನಿರ್ವಹಣೆ ಅನುದಾನ ನೀಡಲು ಕೇಂದ್ರದ ಹಿಂದೇಟು, ದಿಲ್ಲಿಯಲ್ಲಿ ಪ್ರತಿಭಟನೆಗೆ ಸಜ್ಜು: ಡಿಕೆ ಶಿವಕುಮಾರ್
1076 views
ಕಲಬುರಗಿ ವಿಡಿಯೋಗಳಿಗೆ ಚಂದಾದಾರರಾಗಿಕಲಬುರಗಿ: ಕರ್ನಾಟಕದಲ್ಲಿ ಅತ್ಯಂತ ಹೀನಾಯವಾದ ಬರ ಕಾಡುತ್ತಿದ್ದಾಗಲೂ ಕೇಂದ್ರ ಸರಕಾರ ತನ್ನ ಪಾಲಿನ ಅನುದಾನ ನೀಡದೆಯೇ ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಇದೇ ಫೆಬ್ರವರಿ 7ರಂದು ದಿಲ್ಲಿಯಲ್ಲಿ ರಾಜ್ಯ ಸರಕಾರದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಶನಿವಾರ ಕಲಬುರಗಿ ನಗರಕ್ಕೆ ಬಂದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದ ಪಾಲಿಗೆ ಬರಬೇಕಾದ ಬರ ನಿರ್ವಹಣೆ ಅನುದಾನ ನೀಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದೆ. ಹೀಗಾಗಿ, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಸಂಸದರು, ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಒಟ್ಟಾಗಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ದಿಲ್ಲಿಗೆ ನಮ್ಮ ಧ್ವನಿ ಮುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಅದೇದಿನ ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ ಕುರಿತು ಗಮನ ಸೆಳೆದಾಗ ಗರಂ ಆದ ಡಿಕೆಶಿ, ಬಿಜೆಪಿಯವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅವರು ಪ್ರಧಾನಮಂತ್ರಿಗಳನ್ನು ಒಮ್ಮೆಯಾದರೂ ಭೇಟಿ ಮಾಡಿ ರಾಜ್ಯ ಸರಕಾರಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯ ಮಾಡಿದ್ದಾರಾ? ಎಂದು ಪ್ರಶ್ನಿಸಿದರಲ್ಲದೆ, ಅವರಿಗೆ ಮಾನ-ಮರ್ಯಾದೆ ಇದ್ದರೆ ಮೊದಲು ನಮ್ಮ ರಾಜ್ಯದ ಬರ ಪರಿಸ್ಥಿತಿ ಕುರಿತು ದನಿ ಎತ್ತಲಿ ನೋಡೋಣ ಎಂದು ಸವಾಲು ಹಾಕಿದರು.
ಕನಕಗುರು ಪೀಠದ ಈಶ್ವರಾನಂದಪುರಿ ಶ್ರೀಗಳು ದೇವಸ್ಥಾನ ಪ್ರವೇಶಿಸಿದ ಬೆನ್ನಲ್ಲೇ ದೇವಸ್ಥಾನ ಸ್ವಚ್ಛಗೊಳಿಸಿದ ಘಟನೆ ಕುರಿತು ಪ್ರಸ್ತಾಪಿಸಿದ ಅವರು, ನಾನು ಪೇಪರ್ ನಲ್ಲಿ ಗಮನಿಸಿದೆ. ಸಾಮಾನ್ಯವಾಗಿ ದೇವಸ್ಥಾನವನ್ನು ಬೆಳಗ್ಗೆ ಮತ್ತು ಸಂಜೆ ಎರಡೂ ಹೊತ್ತು ಸ್ವಚ್ಛಗೊಳಿಸುತ್ತಾರೆ. ಆದರೂ, ಏನಾಗಿದೆ ಎಂಬುದನ್ನು ತಾವು ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡಿ ತಿಳಿದುಕೊಳ್ಳುವುದಾಗಿ ಹೇಳಿದರು.
ಶನಿವಾರ ಕಲಬುರಗಿ ನಗರಕ್ಕೆ ಬಂದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದ ಪಾಲಿಗೆ ಬರಬೇಕಾದ ಬರ ನಿರ್ವಹಣೆ ಅನುದಾನ ನೀಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದೆ. ಹೀಗಾಗಿ, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಸಂಸದರು, ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಒಟ್ಟಾಗಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ದಿಲ್ಲಿಗೆ ನಮ್ಮ ಧ್ವನಿ ಮುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಅದೇದಿನ ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ ಕುರಿತು ಗಮನ ಸೆಳೆದಾಗ ಗರಂ ಆದ ಡಿಕೆಶಿ, ಬಿಜೆಪಿಯವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅವರು ಪ್ರಧಾನಮಂತ್ರಿಗಳನ್ನು ಒಮ್ಮೆಯಾದರೂ ಭೇಟಿ ಮಾಡಿ ರಾಜ್ಯ ಸರಕಾರಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯ ಮಾಡಿದ್ದಾರಾ? ಎಂದು ಪ್ರಶ್ನಿಸಿದರಲ್ಲದೆ, ಅವರಿಗೆ ಮಾನ-ಮರ್ಯಾದೆ ಇದ್ದರೆ ಮೊದಲು ನಮ್ಮ ರಾಜ್ಯದ ಬರ ಪರಿಸ್ಥಿತಿ ಕುರಿತು ದನಿ ಎತ್ತಲಿ ನೋಡೋಣ ಎಂದು ಸವಾಲು ಹಾಕಿದರು.
ಕನಕಗುರು ಪೀಠದ ಈಶ್ವರಾನಂದಪುರಿ ಶ್ರೀಗಳು ದೇವಸ್ಥಾನ ಪ್ರವೇಶಿಸಿದ ಬೆನ್ನಲ್ಲೇ ದೇವಸ್ಥಾನ ಸ್ವಚ್ಛಗೊಳಿಸಿದ ಘಟನೆ ಕುರಿತು ಪ್ರಸ್ತಾಪಿಸಿದ ಅವರು, ನಾನು ಪೇಪರ್ ನಲ್ಲಿ ಗಮನಿಸಿದೆ. ಸಾಮಾನ್ಯವಾಗಿ ದೇವಸ್ಥಾನವನ್ನು ಬೆಳಗ್ಗೆ ಮತ್ತು ಸಂಜೆ ಎರಡೂ ಹೊತ್ತು ಸ್ವಚ್ಛಗೊಳಿಸುತ್ತಾರೆ. ಆದರೂ, ಏನಾಗಿದೆ ಎಂಬುದನ್ನು ತಾವು ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡಿ ತಿಳಿದುಕೊಳ್ಳುವುದಾಗಿ ಹೇಳಿದರು.