ಭಾರತದ ಅಭಿವೃದ್ಧಿಗಾಗಿ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಅವಶ್ಯಕ: ಸಂಸದ ಉಮೇಶ್ ಜಾಧವ್
1009 views
ಕಲಬುರಗಿ ವಿಡಿಯೋಗಳಿಗೆ ಚಂದಾದಾರರಾಗಿಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಪ್ರಧಾನಿ ಆದ್ರೆ ನಮಗೆ ಯಾವುದೇ ಅಭ್ಯಂತರ ಇಲ್ಲ. ಆದರೆ ಭಾರತಕ್ಕೆ ಮತ್ತೊಮ್ಮೆ ಮೋದಿಯವರೆ ಪಿಎಂ ಆಗಬೇಕು ಎಂದು ಕಲಬುರಗಿ ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.
ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗ್ಬೇಕು ಎಂಬುದು ಭಾರತ ದೇಶದ ಪ್ರಜೆಗಳ ಆಸೆಯಾಗಿದೆ. ಭಾರತದ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಅವರು ಅತ್ಯವಶ್ಯಕವಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅಭ್ಯರ್ಥಿ ಆಗ್ಬೇಕು ಎಂಬುದು ಕಾಂಗ್ರೆಸ್ ನಾಯಕರ ಆಸೆ. ಆದರೆ, ನಮ್ಮ ಉದ್ದೇಶ ಮತ್ತೆ ಭಾರತಕ್ಕೆ ಮೋದಿಯವರೇ ಪ್ರಧಾನಿ ಆಗಬೇಕು ಎಂಬುದು ಎಂದು ಸಂಸದ ಉಮೇಶ್ ಜಾದವ್ ಅವರು ಹೇಳಿದರು.
ಇನ್ನು ಇದೇ ವೇಳೆ ಮಾತನಾಡಿದ ನಾವು ಎಂದೆಂದೂ ಕಾಣದಂತಹ ಭಿನ್ನಾಭಿಪ್ರಾಯವನ್ನು ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಕಂಡಿದ್ದೇವೆ. 136 ಸ್ಥಾನಗಳು ಪಡೆದರು ಸಹ ಪ್ರಾರಂಭದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಕಂಡುಬರ್ತಿವೆ. ಐದು ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಡೆ ಗಮನ ಕೊಡುವುದನ್ನು ಬಿಟ್ಟಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರ್ನಾಲ್ಕು ತಿಂಗಳು ಕಳೆದರೂ ಸಹ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ದೊರೆತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗ್ಬೇಕು ಎಂಬುದು ಭಾರತ ದೇಶದ ಪ್ರಜೆಗಳ ಆಸೆಯಾಗಿದೆ. ಭಾರತದ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಅವರು ಅತ್ಯವಶ್ಯಕವಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅಭ್ಯರ್ಥಿ ಆಗ್ಬೇಕು ಎಂಬುದು ಕಾಂಗ್ರೆಸ್ ನಾಯಕರ ಆಸೆ. ಆದರೆ, ನಮ್ಮ ಉದ್ದೇಶ ಮತ್ತೆ ಭಾರತಕ್ಕೆ ಮೋದಿಯವರೇ ಪ್ರಧಾನಿ ಆಗಬೇಕು ಎಂಬುದು ಎಂದು ಸಂಸದ ಉಮೇಶ್ ಜಾದವ್ ಅವರು ಹೇಳಿದರು.
ಇನ್ನು ಇದೇ ವೇಳೆ ಮಾತನಾಡಿದ ನಾವು ಎಂದೆಂದೂ ಕಾಣದಂತಹ ಭಿನ್ನಾಭಿಪ್ರಾಯವನ್ನು ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಕಂಡಿದ್ದೇವೆ. 136 ಸ್ಥಾನಗಳು ಪಡೆದರು ಸಹ ಪ್ರಾರಂಭದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಕಂಡುಬರ್ತಿವೆ. ಐದು ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಡೆ ಗಮನ ಕೊಡುವುದನ್ನು ಬಿಟ್ಟಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರ್ನಾಲ್ಕು ತಿಂಗಳು ಕಳೆದರೂ ಸಹ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ದೊರೆತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.