ಸೆಕ್ಯುರಿಟಿ ಕೆಲಸಕ್ಕೆಂದು ರಷ್ಯಾಗೆ ಹೋದ ಕಲಬುರಗಿ ಯುವಕರು, ಉಕ್ರೇನ್ ಗಡಿ ಕಾಯಲು ನಿಲ್ಲಿಸಿದರು!
1150 views
ಕಲಬುರಗಿ ವಿಡಿಯೋಗಳಿಗೆ ಚಂದಾದಾರರಾಗಿಕಲಬುರಗಿ: ಸೆಕ್ಯುರಿಟಿ ಗಾರ್ಡ್ ಕೆಲಸ ಕೊಡಿಸುವುದಾಗಿ ನಂಬಿಸಿ ಕಲಬುರಗಿ ಯುವಕರನ್ನು ರಷ್ಯಾಕ್ಕೆ ಕರೆದೊಯ್ದು ಉಕ್ರೇನ್ ಗಡಿಯಲ್ಲಿ ಯುದ್ದಕ್ಕೆ ನಿಯೋಜಿಸಿದ ಘಟನೆ ಬಹಿರಂಗವಾಗಿದೆ. ಕಲಬುರಗಿಯ ಸೈಯದ್ ಇಲಿಯಾಸ್ ಹುಸೇನಿ , ಮೊಹಮ್ಮದ್ ಸಮೀರ್ ಅಹಮದ್ , ಸೋಫಿಯಾ ಮೊಹಮ್ಮದ್ ರಷ್ಯಾದಲ್ಲಿ ಸಿಲುಕಿದ ಮೂವರು ಯುವಕರಾಗಿದ್ದು,. ಬಾಬಾ ಎಂಬ ಏಜೆಂಟ್ ಮೂಲಕ ರಷ್ಯಾಕ್ಕೆ ತೆರಳಿದ್ದರು. ಸೆಕ್ಯುರಿಟಿ ಗಾರ್ಡ್ ಕೆಲಸ ಕೊಡಿಸುವುದಾಗಿ ಅವರನ್ನು ನಂಬಿಸಲಾಗಿತ್ತು.
ಬಾಬಾ ಏಜೆಂಟ್ ಮೂಲಕ ರಷ್ಯಾಕ್ಕೆ ತೆರಳಿದ್ದ ಕಲಬುರಗಿ ಯುವಕರು ಈಗ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಉಕ್ರೇನ್ ಗಡಿಯಿಂದಲೇ ವಿಡಿಯೋ ಮೂಲಕ ಪರಿಸ್ಥಿತಿಯನ್ನು ವಿವರಿಸಿರುವ ಯುವಕರು, ಸೆಕ್ಯುರಿಟಿ ಕೆಲಸ ಕೋಡಿಸುವುದಾಗಿ ಒಬ್ಬೊಬ್ಬರ ಬಳಿ ಮೂರು ಲಕ್ಷ ಹಣ ರೂಪಾಯಿ ಹಣ ಪಡೆದುಕೊಂಡು ಬಾಬಾ ಎಂಬ ಎಜೆಂಟ್ ಉಕ್ರೇನ್ ಬಾರ್ಡರ್ ನಲ್ಲಿ ನಮಗೆ ಯುದ್ದದಲ್ಲಿ ನಿಯೋಜನೆ ಮಾಡಿದ್ದಾರೆ. ಕರ್ನಾಟಕದಿಂದ ಒಟ್ಟು ನಾಲ್ವರನ್ನು ಕಳುಹಿಸಿದ್ದಾರೆ. ಈ ಪೈಕಿ ಮೂವರನ್ನು ಉಕ್ರೇನ್ ಬಾರ್ಡರ್ ನಲ್ಲಿ ನಿಯೋಜನೆ ಮಾಡಲಾಗಿದೆ. ಮತ್ತೊಬ್ಬ ಯುವಕನನ್ನು ಎಲ್ಲಿ ಹಾಕಿದ್ದಾರೆ ಅಂತಾ ಇದುವರೆಗೂ ಗೊತ್ತಾಗಿಲ್ಲ ಎಂದಿದ್ದಾರೆ.
ಕೆಲಸಕ್ಕಾಗಿ ಕಲಬುರಗಿಯ 4 ಯುವಕರು ಸೇರಿ ಭಾರತದ 12 ಯುವಕರು ಏಜೆಂಟ್ ಮೂಲಕ 2023 ಡಿಸೆಂಬರ್ 5 ರಂದು ರಷ್ಯಾಕ್ಕೆ ತೆರಳಿದ್ದರು. ಸೆಕ್ಯುರಿಟಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಕರು ಪ್ರತಿಯೊಬ್ಬ ಯುವಕರ ಬಳಿ ಹಣ ಪಡೆದುಕೊಂಡಿದ್ದ. ಆದರೆ, ಕೆಲಸ ಸಿಗುವ ಆಸೆಯಲ್ಲಿ ಉಕ್ರೇನ್ಗೆ ಹೋದ ಯುವಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕಲಬುರಗಿಯ ಆಳಂದ ತಾಲೂಕಿನ ನರೋಣದ ಮತ್ತು ಕಾಳಗಿ ಮೂಲದವರು ರಷ್ಯಾದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಕ್ರೇನ್ ನಲ್ಲಿರೋ ಹುಡುಗನ ತಂದೆ ನವಾಜ್ ಕಾಳಗಿ, ನನ್ನ ಮಗನಿಗೆ ಏಜೆಂಟ್ಗಳು ಮೋಸ ಮಾಡಿದ್ದಾರೆ. ಅವನು ಸಮಸ್ಯೆಯಲ್ಲಿದ್ದಾನೆ. ನನ್ನ ಮಕ್ಕಳಿಗೆ ಮೋಸ ಆಗಿದೆ ಭಾರತದ ಅನೇಕ ಜನರಿಗೆ ಮೋಸ ಆಗಿದೆ ಎಂದು ಕಣ್ಣೀರು ಹಾಕಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳ ಸುಮಾರು 12 ಮಂದಿ ಯುವಕರು ವಂಚನೆಯ ಜಾಲದಲ್ಲಿ ಸಿಲುಕಿ ರಷ್ಯಾ ಪರ ಬಂದೂಕು ಹಿಡಿಯುಂತಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಹೈದರಾಬಾದ್ ಸಂಸದ ಓವೈಸಿ, ಭಾರತೀಯರ ಸುರಕ್ಷಿತ ವಾಪಸಾತಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದ್ದು, ಇದರಲ್ಲಿ ಭಾರತೀಯರನ್ನು ಬಳಸಿಕೊಳ್ಳುತ್ತಿರುವ ಮಾಹಿತಿ ಕಳವಳ ಮೂಡಿಸಿದೆ. ಕರ್ನಾಟಕ, ತೆಲಂಗಾಣ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಯುವಕರನ್ನು ಕಳೆದ ವರ್ಷದ ಡಿಸೆಂಬರ್ನಲ್ಲಿ ರಷ್ಯಾಕ್ಕೆ ಕರೆದೊಯ್ಯಲಾಗಿದೆ ಎಂದು ಓವೈಸಿ ಹೇಳಿದ್ದಾರೆ.
ಬಾಬಾ ಏಜೆಂಟ್ ಮೂಲಕ ರಷ್ಯಾಕ್ಕೆ ತೆರಳಿದ್ದ ಕಲಬುರಗಿ ಯುವಕರು ಈಗ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಉಕ್ರೇನ್ ಗಡಿಯಿಂದಲೇ ವಿಡಿಯೋ ಮೂಲಕ ಪರಿಸ್ಥಿತಿಯನ್ನು ವಿವರಿಸಿರುವ ಯುವಕರು, ಸೆಕ್ಯುರಿಟಿ ಕೆಲಸ ಕೋಡಿಸುವುದಾಗಿ ಒಬ್ಬೊಬ್ಬರ ಬಳಿ ಮೂರು ಲಕ್ಷ ಹಣ ರೂಪಾಯಿ ಹಣ ಪಡೆದುಕೊಂಡು ಬಾಬಾ ಎಂಬ ಎಜೆಂಟ್ ಉಕ್ರೇನ್ ಬಾರ್ಡರ್ ನಲ್ಲಿ ನಮಗೆ ಯುದ್ದದಲ್ಲಿ ನಿಯೋಜನೆ ಮಾಡಿದ್ದಾರೆ. ಕರ್ನಾಟಕದಿಂದ ಒಟ್ಟು ನಾಲ್ವರನ್ನು ಕಳುಹಿಸಿದ್ದಾರೆ. ಈ ಪೈಕಿ ಮೂವರನ್ನು ಉಕ್ರೇನ್ ಬಾರ್ಡರ್ ನಲ್ಲಿ ನಿಯೋಜನೆ ಮಾಡಲಾಗಿದೆ. ಮತ್ತೊಬ್ಬ ಯುವಕನನ್ನು ಎಲ್ಲಿ ಹಾಕಿದ್ದಾರೆ ಅಂತಾ ಇದುವರೆಗೂ ಗೊತ್ತಾಗಿಲ್ಲ ಎಂದಿದ್ದಾರೆ.
ಕೆಲಸಕ್ಕಾಗಿ ಕಲಬುರಗಿಯ 4 ಯುವಕರು ಸೇರಿ ಭಾರತದ 12 ಯುವಕರು ಏಜೆಂಟ್ ಮೂಲಕ 2023 ಡಿಸೆಂಬರ್ 5 ರಂದು ರಷ್ಯಾಕ್ಕೆ ತೆರಳಿದ್ದರು. ಸೆಕ್ಯುರಿಟಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಕರು ಪ್ರತಿಯೊಬ್ಬ ಯುವಕರ ಬಳಿ ಹಣ ಪಡೆದುಕೊಂಡಿದ್ದ. ಆದರೆ, ಕೆಲಸ ಸಿಗುವ ಆಸೆಯಲ್ಲಿ ಉಕ್ರೇನ್ಗೆ ಹೋದ ಯುವಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕಲಬುರಗಿಯ ಆಳಂದ ತಾಲೂಕಿನ ನರೋಣದ ಮತ್ತು ಕಾಳಗಿ ಮೂಲದವರು ರಷ್ಯಾದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಕ್ರೇನ್ ನಲ್ಲಿರೋ ಹುಡುಗನ ತಂದೆ ನವಾಜ್ ಕಾಳಗಿ, ನನ್ನ ಮಗನಿಗೆ ಏಜೆಂಟ್ಗಳು ಮೋಸ ಮಾಡಿದ್ದಾರೆ. ಅವನು ಸಮಸ್ಯೆಯಲ್ಲಿದ್ದಾನೆ. ನನ್ನ ಮಕ್ಕಳಿಗೆ ಮೋಸ ಆಗಿದೆ ಭಾರತದ ಅನೇಕ ಜನರಿಗೆ ಮೋಸ ಆಗಿದೆ ಎಂದು ಕಣ್ಣೀರು ಹಾಕಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳ ಸುಮಾರು 12 ಮಂದಿ ಯುವಕರು ವಂಚನೆಯ ಜಾಲದಲ್ಲಿ ಸಿಲುಕಿ ರಷ್ಯಾ ಪರ ಬಂದೂಕು ಹಿಡಿಯುಂತಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಹೈದರಾಬಾದ್ ಸಂಸದ ಓವೈಸಿ, ಭಾರತೀಯರ ಸುರಕ್ಷಿತ ವಾಪಸಾತಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದ್ದು, ಇದರಲ್ಲಿ ಭಾರತೀಯರನ್ನು ಬಳಸಿಕೊಳ್ಳುತ್ತಿರುವ ಮಾಹಿತಿ ಕಳವಳ ಮೂಡಿಸಿದೆ. ಕರ್ನಾಟಕ, ತೆಲಂಗಾಣ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಯುವಕರನ್ನು ಕಳೆದ ವರ್ಷದ ಡಿಸೆಂಬರ್ನಲ್ಲಿ ರಷ್ಯಾಕ್ಕೆ ಕರೆದೊಯ್ಯಲಾಗಿದೆ ಎಂದು ಓವೈಸಿ ಹೇಳಿದ್ದಾರೆ.