ಬಿಆರ್ ಪಾಟೀಲ್ಗೆ ಬಿಜೆಪಿ ಗಾಳ; ಬಿಜೆಪಿಗರು ನನಗೂ ಸಂಪರ್ಕ ಮಾಡಿದ್ದರು ಎಂದ ಕೈ ಶಾಸಕ
1079 views
ಕಲಬುರಗಿ ವಿಡಿಯೋಗಳಿಗೆ ಚಂದಾದಾರರಾಗಿಕಲಬುರಗಿ : ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಉಳಿದಿದ್ದು, ಪಕ್ಷಗಳು ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿವೆ. ಇದರ ನಡುವೆಯೇ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನೆಲೆಗೆ ಬಂದಿದೆ. ಕಲಬುರಗಿಯ ಹಿರಿಯ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ಗೆ ಬಿಜೆಪಿಯ ಪ್ರಭಾವಿ ವ್ಯಕ್ತಿಯೊಬ್ಬರು ಗಾಳ ಹಾಕಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಸ್ವತಃ ಆಳಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಬಿಆರ್ ಪಾಟೀಲ್ ಮಾಹಿತಿ ನೀಡಿದ್ದು, ನನಗೂ ಆಪರೇಶನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ನನಗೆ ಸಂಪರ್ಕ ಮಾಡಿ ಆಫರ್ ನೀಡಿದ್ದರು. ನನಗೆ ಚುನಾವಣೆ ಖರ್ಚು ಹಾಗು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುವುದಾಗಿ ಹೇಳಿದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನನ್ನಂತೆ ಇತರೆ ಮೂರು ಜನ ಶಾಸಕರಿಗೆ ಸಹ ಆಪರೇಶನ್ ಕಮಲ ಮಾಡಲು ಯತ್ನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲಾ ಮಾಹಿತಿಯನ್ನು ಕೊಟ್ಟಿದ್ದೇವೆ. ನಾನು ಯಾವುದೇ ಕಾರಣಕ್ಕೂ ಆಪರೇಶನ್ ಕಮಲಕ್ಕೆ ಒಳಗಾಗುವುದಿಲ್ಲ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೂ ಕೂಡ ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರೇ ನಮಗೆ ಬಹಿರಂಗವಾಗಿ ಹೇಳಿದ್ದರು ಎಂದು ಬಿಆರ್ ಪಾಟೀಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡುವಾಗ ಬಿಜೆಪಿ ನಾಯಕರ ವಿರುದ್ಧ ಆಪರೇಷನ್ ಕಮಲದ ಆರೋಪ ಮಾಡಿದ್ದರು. ಹಲವು ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸುತ್ತಿದ್ದು, ಪ್ರತಿಯೊಬ್ಬರಿಗೆ 50 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ. ಸಚಿವ ಸ್ಥಾನ ನೀಡುತ್ತೇವೆ ಎಂದು ಆಫರ್ ಮಾಡುತ್ತಿದ್ದಾರೆ ಬಹಿರಂಗವಾಗಿಯೇ ಹೇಳಿದ್ದರು. ಅದಲ್ಲದೇ ರಾಜ್ಯಸಭಾ ಚುನಾವಣೆ ವೇಳೆ ಕೂಡ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಪ್ರಯತ್ನಿಸಿದ್ದರು ಎಂದು ಹೇಳಲಾಗಿತ್ತು.
ಈ ಬಗ್ಗೆ ಸ್ವತಃ ಆಳಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಬಿಆರ್ ಪಾಟೀಲ್ ಮಾಹಿತಿ ನೀಡಿದ್ದು, ನನಗೂ ಆಪರೇಶನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ನನಗೆ ಸಂಪರ್ಕ ಮಾಡಿ ಆಫರ್ ನೀಡಿದ್ದರು. ನನಗೆ ಚುನಾವಣೆ ಖರ್ಚು ಹಾಗು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುವುದಾಗಿ ಹೇಳಿದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನನ್ನಂತೆ ಇತರೆ ಮೂರು ಜನ ಶಾಸಕರಿಗೆ ಸಹ ಆಪರೇಶನ್ ಕಮಲ ಮಾಡಲು ಯತ್ನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲಾ ಮಾಹಿತಿಯನ್ನು ಕೊಟ್ಟಿದ್ದೇವೆ. ನಾನು ಯಾವುದೇ ಕಾರಣಕ್ಕೂ ಆಪರೇಶನ್ ಕಮಲಕ್ಕೆ ಒಳಗಾಗುವುದಿಲ್ಲ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೂ ಕೂಡ ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರೇ ನಮಗೆ ಬಹಿರಂಗವಾಗಿ ಹೇಳಿದ್ದರು ಎಂದು ಬಿಆರ್ ಪಾಟೀಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡುವಾಗ ಬಿಜೆಪಿ ನಾಯಕರ ವಿರುದ್ಧ ಆಪರೇಷನ್ ಕಮಲದ ಆರೋಪ ಮಾಡಿದ್ದರು. ಹಲವು ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸುತ್ತಿದ್ದು, ಪ್ರತಿಯೊಬ್ಬರಿಗೆ 50 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ. ಸಚಿವ ಸ್ಥಾನ ನೀಡುತ್ತೇವೆ ಎಂದು ಆಫರ್ ಮಾಡುತ್ತಿದ್ದಾರೆ ಬಹಿರಂಗವಾಗಿಯೇ ಹೇಳಿದ್ದರು. ಅದಲ್ಲದೇ ರಾಜ್ಯಸಭಾ ಚುನಾವಣೆ ವೇಳೆ ಕೂಡ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಪ್ರಯತ್ನಿಸಿದ್ದರು ಎಂದು ಹೇಳಲಾಗಿತ್ತು.