ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆ ಖಂಡಿಸಿ ಬಿಜೆಪಿ ಕಿಚ್ಚು; ಧಿಕ್ಕಾರ ಕೂಗಿ ಆಕ್ರೋಶ
1089 views
ಕೋಲಾರ ವಿಡಿಯೋಗಳಿಗೆ ಚಂದಾದಾರರಾಗಿಕೋಲಾರ: ಗೋ ಹತ್ಯೆ ನಿಷೇಧ ಕಾಯ್ದೆ ಬಗ್ಗೆ ಪಶುಸಂಗೋಪನಾ ಸಚಿವ ವೆಂಕಟೇಶ್ ನೀಡಿರುವ ಹೇಳಿಕೆಯನ್ನು ಖಂಡಿಸಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಯ್ತು. ಗೋ ಮಾಂಸ ಭಕ್ಷಕ ಸಿದ್ದರಾಮಯ್ಯ, ನಿರುದ್ಯೋಗಿ ಸಿದ್ದರಾಮಯ್ಯ ಹಾಗೂ ಪಶುಸಂಗೋಪನಾ ಸಚಿವ ವೆಂಕಟೇಶ್ಗೆ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕೋಲಾರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ಮಾಡಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅವರು, ಗೋ ಹತ್ಯೆ ಕಾಯ್ದೆ ನಿಷೇಧ ಸಂಬಂಧ ಸಚಿವ ವೆಂಕಟೇಶ್ ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ. 1964ರಲ್ಲೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಯಿತು. ಅದರಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಜಾರಿಗೆ ತಂದಿದೆ ಎಂದರು.
ನಮ್ಮ ದೇಶದಲ್ಲಿ ಗೋವನ್ನು ತಾಯಿಗೆ ಹೋಲಿಕೆ ಮಾಡಲಾಗುತ್ತದೆ. ಹಾಗಾಗಿ ಗೋವನ್ನು ಪೂಜೆ ಮಾಡುತ್ತಿದ್ದೇವೆ. ಇಂತಹ ಪೂಜ್ಯ ಸ್ಥಾನದಲ್ಲಿರುವ ಗೋವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದಕ್ಕಾಗಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದ್ರೆ ಈಗ ಕಾಂಗ್ರೆಸ್ ಸರ್ಕಾರ ಅದನ್ನು ವಾಪಸ್ ಪಡೆದುಕೊಳ್ಳುತ್ತಿರುವುದು ಬಹುಸಂಖ್ಯಾತ ಹಿಂದೂಗಳ ವಿರೋಧ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋಲಾರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ಮಾಡಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅವರು, ಗೋ ಹತ್ಯೆ ಕಾಯ್ದೆ ನಿಷೇಧ ಸಂಬಂಧ ಸಚಿವ ವೆಂಕಟೇಶ್ ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ. 1964ರಲ್ಲೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಯಿತು. ಅದರಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಜಾರಿಗೆ ತಂದಿದೆ ಎಂದರು.
ನಮ್ಮ ದೇಶದಲ್ಲಿ ಗೋವನ್ನು ತಾಯಿಗೆ ಹೋಲಿಕೆ ಮಾಡಲಾಗುತ್ತದೆ. ಹಾಗಾಗಿ ಗೋವನ್ನು ಪೂಜೆ ಮಾಡುತ್ತಿದ್ದೇವೆ. ಇಂತಹ ಪೂಜ್ಯ ಸ್ಥಾನದಲ್ಲಿರುವ ಗೋವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದಕ್ಕಾಗಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದ್ರೆ ಈಗ ಕಾಂಗ್ರೆಸ್ ಸರ್ಕಾರ ಅದನ್ನು ವಾಪಸ್ ಪಡೆದುಕೊಳ್ಳುತ್ತಿರುವುದು ಬಹುಸಂಖ್ಯಾತ ಹಿಂದೂಗಳ ವಿರೋಧ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.