ಕೋಲಾರ: ಬಿಜೆಪಿ ಅಧಿಕಾರದಲ್ಲಿರುವ ಎಷ್ಟು ರಾಜ್ಯಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದೆ?- ಡಾ.ಎಂ.ಸಿ.ಸುಧಾಕರ್
ಕೋಲಾರ ವಿಡಿಯೋಗಳಿಗೆ ಚಂದಾದಾರರಾಗಿ
ಕೋಲಾರ: ಎಚ್.ಡಿ.ಕುಮಾರಸ್ವಾಮಿ ಹಿರಿಯರು. ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ಏನೇನು ನಡೆಯುತ್ತೆ ಎಂದು ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರಿಂದ ಕಲಿಯುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪಕ್ಕೆ ಕೋಲಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಪ್ರತಿಕ್ರಿಯೆ ನೀಡಿದರು.
ಕೋಲಾರ ನಗರದ ರಾಷ್ಟ್ರೀಯ ಹೆದ್ದಾರಿ 75ರ ನಂದಿನಿ ಫ್ಯಾಲೇಸ್ ನಲ್ಲಿ ನಡೆದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 3ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ಭಾಗಿಯಾಗಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರದ ಕುರಿತು ನಾವು ಟೀಕೆ ಮಾಡಿದ್ವಿ. ಹೀಗಾಗಿ ನಾವು ಬಹಳ ಜವಾಬ್ದಾರಿಯಿಂದ ಸರ್ಕಾರ ನಡೆಸುತ್ತಿದ್ದೇವೆ. ಕುಮಾರಸ್ವಾಮಿ ಹೇಳಿದ ರೀತಿಯ ವ್ಯವಸ್ಥೆ ನಮ್ಮ ಸರ್ಕಾರದಲ್ಲಿ ಇಲ್ಲ, ಬಹುಶಃ ಅವರು ರಾಜಕೀಯ ಹೇಳಿಕೆ ಕೊಟ್ಟಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದರು.
ದೇಶದಲ್ಲಿ ಎಷ್ಟು ಬಿಜೆಪಿ ಆಡಳಿತ ಇರುವ ರಾಜ್ಯಗಳು ಇವೆ. ಎಷ್ಟು ಜಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನ ಜಾರಿ ತರುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ವಿದ್ಯಾರ್ಥಿಗಳು ಎರಡು ವರ್ಷ ವ್ಯಾಸಾಂಗ ಮಾಡಿದ್ದಾರೆ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಬಹಳ ಯೋಚನೆ ಮಾಡಿ ನಾವು ತೀರ್ಮಾನ ತೆಗೆದುಕೊಳ್ಳಬೇಕು. ಹೀಗಾಗಿ ಇದರ ಬಗ್ಗೆ ಶಿಕ್ಷಣ ತಜ್ಞರೊಂದಿಗೆ ಬಹಳಷ್ಟು ಚರ್ಚೆ ಮಾಡುತ್ತಿದ್ದೇವೆ. ನಾವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯನ್ನು ಗಮನದಲ್ಲಿ ಇರಿಸಿಕೊಂಡು, ಬದಲಾವಣೆ ಯಾವ ರೀತಿ ತರಬೇಕೆಂದು ತೀರ್ಮಾನಿಸಲಾಗುವುದು ಎಂದರು.
ಕೋಲಾರ ನಗರದ ರಾಷ್ಟ್ರೀಯ ಹೆದ್ದಾರಿ 75ರ ನಂದಿನಿ ಫ್ಯಾಲೇಸ್ ನಲ್ಲಿ ನಡೆದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 3ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ಭಾಗಿಯಾಗಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರದ ಕುರಿತು ನಾವು ಟೀಕೆ ಮಾಡಿದ್ವಿ. ಹೀಗಾಗಿ ನಾವು ಬಹಳ ಜವಾಬ್ದಾರಿಯಿಂದ ಸರ್ಕಾರ ನಡೆಸುತ್ತಿದ್ದೇವೆ. ಕುಮಾರಸ್ವಾಮಿ ಹೇಳಿದ ರೀತಿಯ ವ್ಯವಸ್ಥೆ ನಮ್ಮ ಸರ್ಕಾರದಲ್ಲಿ ಇಲ್ಲ, ಬಹುಶಃ ಅವರು ರಾಜಕೀಯ ಹೇಳಿಕೆ ಕೊಟ್ಟಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದರು.
ದೇಶದಲ್ಲಿ ಎಷ್ಟು ಬಿಜೆಪಿ ಆಡಳಿತ ಇರುವ ರಾಜ್ಯಗಳು ಇವೆ. ಎಷ್ಟು ಜಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನ ಜಾರಿ ತರುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ವಿದ್ಯಾರ್ಥಿಗಳು ಎರಡು ವರ್ಷ ವ್ಯಾಸಾಂಗ ಮಾಡಿದ್ದಾರೆ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಬಹಳ ಯೋಚನೆ ಮಾಡಿ ನಾವು ತೀರ್ಮಾನ ತೆಗೆದುಕೊಳ್ಳಬೇಕು. ಹೀಗಾಗಿ ಇದರ ಬಗ್ಗೆ ಶಿಕ್ಷಣ ತಜ್ಞರೊಂದಿಗೆ ಬಹಳಷ್ಟು ಚರ್ಚೆ ಮಾಡುತ್ತಿದ್ದೇವೆ. ನಾವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯನ್ನು ಗಮನದಲ್ಲಿ ಇರಿಸಿಕೊಂಡು, ಬದಲಾವಣೆ ಯಾವ ರೀತಿ ತರಬೇಕೆಂದು ತೀರ್ಮಾನಿಸಲಾಗುವುದು ಎಂದರು.