ಗಂಗಾವತಿ: ರೈತರೊಂದಿಗೆ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ IAS ಅಧಿಕಾರಿ
1077 views
ಕೊಪ್ಪಳ ವಿಡಿಯೋಗಳಿಗೆ ಚಂದಾದಾರರಾಗಿಕೊಪ್ಪಳ: 'ರೈತರೊಂದಿಗೆ ಒಂದು ದಿನ' ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಮರಳಿ ಹೋಬಳಿಯ ಕೋಟಯ್ಯ ಕ್ಯಾಂಪಿನಲ್ಲಿ ರೈತರೊಂದಿಗೆ ಭತ್ತದ ಗದ್ದೆಗಿಳಿದು, ಸಸಿಗಳನ್ನು ನಾಟಿ ಮಾಡಿದ್ದಾರೆ.
ರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅಧಿಕಾರಿ, ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದರು. ಇದಕ್ಕೂ ಮೊದಲು ಹೊಸಕೇರಿ ಗ್ರಾಮದ ಬೀಜ ಸಂಸ್ಕರಣಾ ಕೇಂದ್ರ, ಕೋಟಯ್ಯ ಕ್ಯಾಂಪಿನ ಅನ್ನಪೂರ್ಣ ಮಹಿಳಾ ಸಂಘದ ಕಿರು ಆಹಾರ ಉತ್ಪಾದನಾ ಘಟಕ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತ ಶೇಷಗಿರಿ ಅವರ ಹೊಲಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ತುಂಗಭದ್ರ್ರಾ ನದಿಯಿಂದ ಎಡದಂಡೆ ಕಾಲುವೆಗೆ ನೀರು ಬಿಟ್ಟ ಹಿನ್ನಲೆೆಯಲ್ಲಿ ನೀರಾವರಿ ಪ್ರದೇಶದಲ್ಲಿ ರೈತರು ಸಸಿ ನಾಟಿ ಕಾರ್ಯದಲ್ಲಿ ತೊಡಗಿದ್ದು, ಗಂಗಾವತಿ ತಾಲೂಕಿನ ಕೊಟಯ್ಯ ಕ್ಯಾಂಪ್ಗೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿದರು. ಬಳಿಕ ರೈತರೊಂದಿಗೆ ಗದ್ದೆಗಿಳಿದು ನಾಟಿ ಮಾಡಿದ್ದಾರೆ. ಇವರ ಜತೆ ಗ್ರಾಮದ ಕಾಲೇಜು ವಿದ್ಯಾರ್ಥಿನಿಯರು, ಮಹಿಳೆಯರು ಹುಮ್ಮಸ್ಸಿನಿಂದ ಸಸಿ ನಾಟಿ ಮಾಡಿದರು. ಜೊತೆಗೆ ರೈತರಿಗೆ ಭತ್ತನಾಟಿ ಯಂತ್ರ ಪರಿಚಯಿಸಲು ಸಿಇಒ ಅವರೇ ಪ್ರಾಯೋಗಿಕವಾಗಿ ಕೆಲವೊತ್ತು ಯಂತ್ರ ಚಲಾಯಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಹಳೆಯ ಕೃಷಿ ಪದ್ಧತಿಯನ್ನು ಬಿಟ್ಟು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಕೃಷಿ ಸಂಬಂಧಿ ಅನೇಕ ಸರಳ ಯಂತ್ರಗಳು ಲಭ್ಯವಿದ್ದು, ಅವುಗಳನ್ನು ಬಳಸುವ ಮೂಲಕ ಸಮಯವನ್ನು ಉಳಿಸಿಕೊಳ್ಳಬಹುದು ಮತ್ತು ಹೆಚ್ಚು ಆದಾಯವನ್ನು ಪಡೆಯಬಹುದು ಎಂದು ಸಲಹೆ ನೀಡಿದರು.
ರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅಧಿಕಾರಿ, ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದರು. ಇದಕ್ಕೂ ಮೊದಲು ಹೊಸಕೇರಿ ಗ್ರಾಮದ ಬೀಜ ಸಂಸ್ಕರಣಾ ಕೇಂದ್ರ, ಕೋಟಯ್ಯ ಕ್ಯಾಂಪಿನ ಅನ್ನಪೂರ್ಣ ಮಹಿಳಾ ಸಂಘದ ಕಿರು ಆಹಾರ ಉತ್ಪಾದನಾ ಘಟಕ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತ ಶೇಷಗಿರಿ ಅವರ ಹೊಲಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ತುಂಗಭದ್ರ್ರಾ ನದಿಯಿಂದ ಎಡದಂಡೆ ಕಾಲುವೆಗೆ ನೀರು ಬಿಟ್ಟ ಹಿನ್ನಲೆೆಯಲ್ಲಿ ನೀರಾವರಿ ಪ್ರದೇಶದಲ್ಲಿ ರೈತರು ಸಸಿ ನಾಟಿ ಕಾರ್ಯದಲ್ಲಿ ತೊಡಗಿದ್ದು, ಗಂಗಾವತಿ ತಾಲೂಕಿನ ಕೊಟಯ್ಯ ಕ್ಯಾಂಪ್ಗೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿದರು. ಬಳಿಕ ರೈತರೊಂದಿಗೆ ಗದ್ದೆಗಿಳಿದು ನಾಟಿ ಮಾಡಿದ್ದಾರೆ. ಇವರ ಜತೆ ಗ್ರಾಮದ ಕಾಲೇಜು ವಿದ್ಯಾರ್ಥಿನಿಯರು, ಮಹಿಳೆಯರು ಹುಮ್ಮಸ್ಸಿನಿಂದ ಸಸಿ ನಾಟಿ ಮಾಡಿದರು. ಜೊತೆಗೆ ರೈತರಿಗೆ ಭತ್ತನಾಟಿ ಯಂತ್ರ ಪರಿಚಯಿಸಲು ಸಿಇಒ ಅವರೇ ಪ್ರಾಯೋಗಿಕವಾಗಿ ಕೆಲವೊತ್ತು ಯಂತ್ರ ಚಲಾಯಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಹಳೆಯ ಕೃಷಿ ಪದ್ಧತಿಯನ್ನು ಬಿಟ್ಟು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಕೃಷಿ ಸಂಬಂಧಿ ಅನೇಕ ಸರಳ ಯಂತ್ರಗಳು ಲಭ್ಯವಿದ್ದು, ಅವುಗಳನ್ನು ಬಳಸುವ ಮೂಲಕ ಸಮಯವನ್ನು ಉಳಿಸಿಕೊಳ್ಳಬಹುದು ಮತ್ತು ಹೆಚ್ಚು ಆದಾಯವನ್ನು ಪಡೆಯಬಹುದು ಎಂದು ಸಲಹೆ ನೀಡಿದರು.