ಕೊಪ್ಪಳ: ಕಟಾವು ಮಾಡಬೇಕಿದ್ದ ಭತ್ತಕ್ಕೆ ಹಾನಿ, ಮಧ್ಯಂತರ ಪರಿಹಾರಕ್ಕೆ ನಿಯಮ ಅಡ್ಡಿ
1076 views
ಕೊಪ್ಪಳ ವಿಡಿಯೋಗಳಿಗೆ ಚಂದಾದಾರರಾಗಿಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ ಭೀಕರ ಬರ. ಬರದ ಮಧ್ಯೆ ಅಕಾಲಿಕ ಮಳೆಯೂ ಸಹ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ನವಂಬರ್ ಎರಡನೆಯ ವಾರದಲ್ಲಿ ಸುರಿದ ಮಳೆಗೆ ಅಪಾರ ಪ್ರಮಾಣದ ಭತ್ತದ ಬೆಳೆಯು ಹಾಳಾಗಿದೆ. ಭತ್ತಕ್ಕೆ ಬೆಳೆ ವಿಮೆ ಮಾಡಿಸಿದ್ದರೂ, ಹಾಳಾದ ಬೆಳೆಗೆ ವಿಮೆ ನೀಡಲು ನಿಯಮಾವಳಿಗಳು ಅಡ್ಡಿಯಾಗಿವೆ. ಈ ನಿಯಮವನ್ನು ಬದಲಾಯಿಸಿ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ ನೀಡಬೇಕೆಂದು ಕೃಷಿ ಇಲಾಖೆಯು ವಿಮಾ ಕಂಪನಿಗೆ ಪತ್ರ ಬರೆದಿದೆ.
ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಾಗೂ ಮುಂಗಾರು ಎರಡೂ ಮಳೆಗಳು ಕೈಕೊಟ್ಟು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಬರ ಆವರಿಸಿದೆ. ಈ ಮಧ್ಯೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಸುಮಾರು 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಪ್ರತಿ ಹೆಕ್ಟೇರ್ಗೆ ಸುಮಾರು 50 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದ ರೈತರು ಇನ್ನೇನು ಭತ್ತ ಕಟಾವು ಮಾಡಬಹುದಾಗಿತ್ತು. ಆದರೆ, ನವಂಬರ್ 10 ಮತ್ತು 11 ರಂದು ಸುರಿದ ಅಕಾಲಿಕ ಮಳೆಗೆ ಭತ್ತ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ರೈತರಿಗೆ ಕೈಗೆ ಬಂದು ತುತ್ತು ಬಾಯಿಗೆ ಬಾರದಂತಾಗಿದೆ.
ಮಳೆಯಿಂದಾಗಿ ಜಿಲ್ಲೆಯಲ್ಲಿ ಕಾರಟಗಿ, ಗಂಗಾವತಿ ಹಾಗೂ ಕೊಪ್ಪಳ ತಾಲೂಕಿನಲ್ಲಿ ಸುಮಾರು 7,600 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಳಾಗಿದೆ. ಹಾಳಾಗಿರುವ ಭತ್ತದ ಬೆಳೆಗಾರರಲ್ಲಿ ಸುಮಾರು 3 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ಮಾಡಿಸಿದ್ದಾರೆ. ಈ ರೈತರಿಗೆ ಬೆಳೆ ವಿಮೆ ಮಾಡಿಸಿಕೊಂಡಿರುವ ಫ್ಯೂಚರ್ ಜನರಲ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಮಧ್ಯಂತರ ಪರಿಹಾರ ನೀಡಬೇಕಾಗಿದೆ. ಆದರೆ ಮಧ್ಯಂತರ ಪರಿಹಾರ ನೀಡಲು ಈಗಿರುವ ನಿಯಮಾವಳಿಗಳು ಅಡ್ಡಿಯಾಗಿವೆ. ನೀರಿನಲ್ಲಿ ಬೆಳೆಯುವ ಭತ್ತಕ್ಕೆ ಮಳೆ ಹಾನಿ ಪರಿಹಾರ ನೀಡಲು ಬರುವುದಿಲ್ಲ. ಅಂತಿಮವಾಗಿ ಕಟಾವು ಮಾಡಿದ ನಂತರ ಇಳುವರಿ ಕಡಿಮೆಯಾದರೆ ಮಾತ್ರ ಪರಿಹಾರ ನೀಡಬಹುದಾಗಿದೆ.
ಮಳೆ ಹಾನಿಯಿಂದ ತತ್ತರಿಸಿದ ರೈತರಿಗೆ ಬೆಳೆ ವಿಮೆಯ ಹಣವಾದರೂ ಬರಬಹುದು ಎಂದುಕೊಂಡಿದ್ದಾರೆ. ಆದರೆ ಈಗಿರುವ ನಿಯಮಗಳು ಅಡ್ಡಿಯಾಗಿವೆ. ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬೆಳೆ ವಿಮೆಯಿಂದ ಪರಿಹಾರ ಸಿಗಬೇಕು, ಇಲ್ಲವಾದರೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಪರಿಹಾರ ಒದಗಿಸಬೇಕಿದೆ. ಇಲ್ಲವಾದಲ್ಲಿ ರೈತ ಬೆಳೆಯುವ
ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಾಗೂ ಮುಂಗಾರು ಎರಡೂ ಮಳೆಗಳು ಕೈಕೊಟ್ಟು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಬರ ಆವರಿಸಿದೆ. ಈ ಮಧ್ಯೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಸುಮಾರು 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಪ್ರತಿ ಹೆಕ್ಟೇರ್ಗೆ ಸುಮಾರು 50 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದ ರೈತರು ಇನ್ನೇನು ಭತ್ತ ಕಟಾವು ಮಾಡಬಹುದಾಗಿತ್ತು. ಆದರೆ, ನವಂಬರ್ 10 ಮತ್ತು 11 ರಂದು ಸುರಿದ ಅಕಾಲಿಕ ಮಳೆಗೆ ಭತ್ತ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ರೈತರಿಗೆ ಕೈಗೆ ಬಂದು ತುತ್ತು ಬಾಯಿಗೆ ಬಾರದಂತಾಗಿದೆ.
ಮಳೆಯಿಂದಾಗಿ ಜಿಲ್ಲೆಯಲ್ಲಿ ಕಾರಟಗಿ, ಗಂಗಾವತಿ ಹಾಗೂ ಕೊಪ್ಪಳ ತಾಲೂಕಿನಲ್ಲಿ ಸುಮಾರು 7,600 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಳಾಗಿದೆ. ಹಾಳಾಗಿರುವ ಭತ್ತದ ಬೆಳೆಗಾರರಲ್ಲಿ ಸುಮಾರು 3 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ಮಾಡಿಸಿದ್ದಾರೆ. ಈ ರೈತರಿಗೆ ಬೆಳೆ ವಿಮೆ ಮಾಡಿಸಿಕೊಂಡಿರುವ ಫ್ಯೂಚರ್ ಜನರಲ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಮಧ್ಯಂತರ ಪರಿಹಾರ ನೀಡಬೇಕಾಗಿದೆ. ಆದರೆ ಮಧ್ಯಂತರ ಪರಿಹಾರ ನೀಡಲು ಈಗಿರುವ ನಿಯಮಾವಳಿಗಳು ಅಡ್ಡಿಯಾಗಿವೆ. ನೀರಿನಲ್ಲಿ ಬೆಳೆಯುವ ಭತ್ತಕ್ಕೆ ಮಳೆ ಹಾನಿ ಪರಿಹಾರ ನೀಡಲು ಬರುವುದಿಲ್ಲ. ಅಂತಿಮವಾಗಿ ಕಟಾವು ಮಾಡಿದ ನಂತರ ಇಳುವರಿ ಕಡಿಮೆಯಾದರೆ ಮಾತ್ರ ಪರಿಹಾರ ನೀಡಬಹುದಾಗಿದೆ.
ಮಳೆ ಹಾನಿಯಿಂದ ತತ್ತರಿಸಿದ ರೈತರಿಗೆ ಬೆಳೆ ವಿಮೆಯ ಹಣವಾದರೂ ಬರಬಹುದು ಎಂದುಕೊಂಡಿದ್ದಾರೆ. ಆದರೆ ಈಗಿರುವ ನಿಯಮಗಳು ಅಡ್ಡಿಯಾಗಿವೆ. ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬೆಳೆ ವಿಮೆಯಿಂದ ಪರಿಹಾರ ಸಿಗಬೇಕು, ಇಲ್ಲವಾದರೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಪರಿಹಾರ ಒದಗಿಸಬೇಕಿದೆ. ಇಲ್ಲವಾದಲ್ಲಿ ರೈತ ಬೆಳೆಯುವ