ಕೊಪ್ಪಳ: ನಾಲ್ಕು ಪಟ್ಟು ಏರಿದ ವಿದ್ಯುತ್ ಬಿಲ್, ಜನಾಕ್ರೋಶ
1079 views
ಕೊಪ್ಪಳ ವಿಡಿಯೋಗಳಿಗೆ ಚಂದಾದಾರರಾಗಿಕೊಪ್ಪಳ: 200 ಯೂನಿಟ್ ಉಚಿತ ವಿದ್ಯುತ್ ಉಚಿತ ನೀಡುವ ಭರವಸೆಯೊಂದಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ರಾಜ್ಯ ಕಾಂಗ್ರೆಸ್ ಸರಕಾರ ಈಗ ಶಾಕ್ ನೀಡುತ್ತಿದ್ದೆ. ಮೊದಲಿಗಿಂತಲೂ ದುಪ್ಪಟ್ಟು ವಿದ್ಯುತ್ ಬಿಲ್ ಬರುತ್ತಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.
ಹೀಗೆ ಜನರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಹಾಗೂ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ದೃಶ್ಯ ಕಂಡು ಬಂದಿದ್ದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ. ಇವರು ಹೀಗೆ ಮುತ್ತಿಗೆ ಹಾಕೋಕೆ ಕಾರಣವಾಗಿರೋದು ಈ ಬಾರಿ ವಿದ್ಯುತ್ ಬಿಲ್ ಹೆಚ್ಚು ಬಂದಿರೋದು. ಈ ಹಿಂದೆ 300 ರಿಂದ ನಾಲ್ಕು ನೂರು ರುಪಾಯಿ ಬರುತ್ತಿದ್ದ ವಿದ್ಯುತ್ ಬಿಲ್ ಈ ಬಾರಿ 1500 ರಿಂದ 1800 ರುಪಾಯಿ ಬಂದಿದೆ. ಇದರಿಂದ ಆಕ್ರೋಶಗೊಂಡ ಗ್ರಾಹಕರು ಗಂಗಾವತಿ ನಗರದಲ್ಲಿರುವ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬಿಲ್ ಹಿಡಿದು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಮಹಿಳೆಯರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಚಿತ ವಿದ್ಯುತ್ ಕೊಡ್ತೀವಿ ಅಂತಾ ಸರ್ಕಾರ ಅಕ್ರಮವಾಗಿ ಹಣ ವಸೂಲಿ ಮಾಡ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ನಾವು ಬಿಲ್ ಪಾವತಿಸಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಚುನಾವಣೆ ಸಂದರ್ಭದಲ್ಲಿ ಪ್ರತಿಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ನವರು ಭರವಸೆ ನೀಡಿದ್ದರು. ಇಂತಹ ಭರವಸೆ ನೀಡಿ ಅಧಿಕಾರ ಹಿಡಿದಿದ್ದಾರೆ. ಅವರು ಉಚಿತ ವಿದ್ಯುತ್ ನೀಡುತ್ತೇವೆ ಎಂಬುದು ಒತ್ತಟ್ಟಿಗಿರಲಿ. ಈಗ ವಿದ್ಯುತ್ ಬಿಲ್ ದುಪ್ಪಟ್ಟು, ಮೂರುಪಟ್ಟು, ನಾಲ್ಕುಪಟ್ಟಿನಷ್ಟು ಹೆಚ್ಚಾಗಿದೆ. ಈ ಮೂಲಕ ಸರಕಾರ ಜನರ ಸುಲಿಗೆಗೆ ಇಳಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹೀಗೆ ಜನರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಹಾಗೂ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ದೃಶ್ಯ ಕಂಡು ಬಂದಿದ್ದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ. ಇವರು ಹೀಗೆ ಮುತ್ತಿಗೆ ಹಾಕೋಕೆ ಕಾರಣವಾಗಿರೋದು ಈ ಬಾರಿ ವಿದ್ಯುತ್ ಬಿಲ್ ಹೆಚ್ಚು ಬಂದಿರೋದು. ಈ ಹಿಂದೆ 300 ರಿಂದ ನಾಲ್ಕು ನೂರು ರುಪಾಯಿ ಬರುತ್ತಿದ್ದ ವಿದ್ಯುತ್ ಬಿಲ್ ಈ ಬಾರಿ 1500 ರಿಂದ 1800 ರುಪಾಯಿ ಬಂದಿದೆ. ಇದರಿಂದ ಆಕ್ರೋಶಗೊಂಡ ಗ್ರಾಹಕರು ಗಂಗಾವತಿ ನಗರದಲ್ಲಿರುವ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬಿಲ್ ಹಿಡಿದು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಮಹಿಳೆಯರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಚಿತ ವಿದ್ಯುತ್ ಕೊಡ್ತೀವಿ ಅಂತಾ ಸರ್ಕಾರ ಅಕ್ರಮವಾಗಿ ಹಣ ವಸೂಲಿ ಮಾಡ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ನಾವು ಬಿಲ್ ಪಾವತಿಸಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಚುನಾವಣೆ ಸಂದರ್ಭದಲ್ಲಿ ಪ್ರತಿಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ನವರು ಭರವಸೆ ನೀಡಿದ್ದರು. ಇಂತಹ ಭರವಸೆ ನೀಡಿ ಅಧಿಕಾರ ಹಿಡಿದಿದ್ದಾರೆ. ಅವರು ಉಚಿತ ವಿದ್ಯುತ್ ನೀಡುತ್ತೇವೆ ಎಂಬುದು ಒತ್ತಟ್ಟಿಗಿರಲಿ. ಈಗ ವಿದ್ಯುತ್ ಬಿಲ್ ದುಪ್ಪಟ್ಟು, ಮೂರುಪಟ್ಟು, ನಾಲ್ಕುಪಟ್ಟಿನಷ್ಟು ಹೆಚ್ಚಾಗಿದೆ. ಈ ಮೂಲಕ ಸರಕಾರ ಜನರ ಸುಲಿಗೆಗೆ ಇಳಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.