ಇಷ್ಟು ದಿನ ಗ್ಯಾರಂಟಿ ಜಾರಿಗೆ ಕೆಲಸ; ಇನ್ಮೇಲೆ ಬಿಜೆಪಿ ಸರ್ಕಾರದ ಹಗರಣ ತನಿಖೆ ಮಾಡ್ತೀವಿ: ಎಂಬಿ ಪಾಟೀಲ್
1096 views
ಕೊಪ್ಪಳ ವಿಡಿಯೋಗಳಿಗೆ ಚಂದಾದಾರರಾಗಿಕೊಪ್ಪಳ: ಪಿಎಸ್ಐ ನೇಮಕಾತಿ ಅಕ್ರಮ, 40% ಕಮಿಷನ್ ಹಗರಣ ಹಾಗೂ ಕೊರೊನಾ ಹಗರಣ ಸೇರಿ ಹಿಂದಿನ ಸರಕಾರದ ಹಗರಣಗಳ ತನಿಖೆ ಮಾಡಲಾಗುವುದು ಎಂದು ಬೃಹತ್ ಹಾಗು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು,.ಇಲ್ಲಿಯವರೆಗೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಕೆಲಸ ಮಾಡಲಾಗುತ್ತಿತ್ತು. ಇನ್ನೂ ಮೇಲೆ ಎಲ್ಲಾ ಹಗರಣಗಳ ತನಿಖೆ ಮಾಡಲಾಗುವುದು ಎಂದರು.
ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿಯವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು. ಜಗದೀಶ್ ಶೆಟ್ಟರ್ ಲೋಕಸಭೆಗೆ ಸ್ಪರ್ಧಿಸುವ ಕುರಿತು ಹೈಕಮಾಂಡ ನಿರ್ಧರಿಸಲಿದೆ ಎಂದ ಅವರು, ಗೃಹಜ್ಯೋತಿ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ. ವಿರೋಧ ಪಕ್ಷಗಳಿಗೆ ಕೆಲಸವಿಲ್ಲ. ಹೀಗಾಗಿ ಗೊಂದಲ ಸೃಷ್ಠಿಸುತ್ತಿದ್ದಾರೆ. ರಾಜ್ಯದಲ್ಲಿ ಕೈಗಾರಿಕೆ ಉದ್ದೇಶದಿಂದ ಸ್ವಾದೀನ ಪಡಿಸಿಕೊಂಡ ಭೂಮಿ ಬಳಕೆ ಮಾಡದೆ ಇದ್ದರೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿಯವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು. ಜಗದೀಶ್ ಶೆಟ್ಟರ್ ಲೋಕಸಭೆಗೆ ಸ್ಪರ್ಧಿಸುವ ಕುರಿತು ಹೈಕಮಾಂಡ ನಿರ್ಧರಿಸಲಿದೆ ಎಂದ ಅವರು, ಗೃಹಜ್ಯೋತಿ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ. ವಿರೋಧ ಪಕ್ಷಗಳಿಗೆ ಕೆಲಸವಿಲ್ಲ. ಹೀಗಾಗಿ ಗೊಂದಲ ಸೃಷ್ಠಿಸುತ್ತಿದ್ದಾರೆ. ರಾಜ್ಯದಲ್ಲಿ ಕೈಗಾರಿಕೆ ಉದ್ದೇಶದಿಂದ ಸ್ವಾದೀನ ಪಡಿಸಿಕೊಂಡ ಭೂಮಿ ಬಳಕೆ ಮಾಡದೆ ಇದ್ದರೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.