ಮಂಡ್ಯ ಕಾಂಗ್ರೆಸ್ನಲ್ಲಿ ಭಿನ್ನಮತ ; ನಾನು ತಟಸ್ಥವಾಗಿರುತ್ತೇನೆ ಎಂದ ಕಾಂಗ್ರೆಸ್ ಎಂಎಲ್ಸಿ
1175 views
ಮಂಡ್ಯ ವಿಡಿಯೋಗಳಿಗೆ ಚಂದಾದಾರರಾಗಿಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ತಟಸ್ಥವಾಗಿರುತ್ತೇನೆ ಎಂದು ಕಾಂಗ್ರೆಸ್ ಎಂಎಲ್ಸಿ ಮಧು ಜಿ.ಮಾದೇಗೌಡ ಅಚ್ಚರಿ ಹೇಳಿಕೆಯನ್ನು ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಈ ಚುನಾವಣೆಯಲ್ಲಿ ತಟಸ್ಥವಾಗಿರಲು ನಿರ್ಧರಿಸಿದ್ದೇನೆ, ಸಾಕಷ್ಟು ಬೇರೆ ಬೇರೆ ವಿಚಾರಗಳಿವೆ. ಅದನ್ನು ಸೂಕ್ತ ಸಂದರ್ಭದಲ್ಲಿ ಮಾತನಾಡುತ್ತೇನೆ. ಮೊನ್ನೆ ನಮ್ಮ ಸಚಿವ ಎನ್.ಚಲುವರಾಯಸ್ವಾಮಿ ಸಹ ಸಭೆ ಕರೆದಿದ್ರು. ನಮ್ಮಲ್ಲಿ ಸ್ವಲ್ಪ ಗೊಂದಲಗಳಿದ್ದು, ಅವುಗಳು ನಿವಾರಣೆಯಾಗಬೇಕು ಎಂದು ಹೇಳಿದರು.
ಚಲುವರಾಯಸ್ವಾಮಿ ಜೊತೆ ಗೊಂದಲಗಳ ನಿವಾರಣೆ ಬಗ್ಗೆ ಮಾತನಾಡಿದ್ದೇನೆ. ನಿವಾರಣೆಯಾದ ಬಳಿಕ ನಾನು ಮಾತನಾಡುತ್ತೇನೆ. ಸಂಸದೆ ಸುಮಲತಾ ಕಾಂಗ್ರೆಸ್ಗೆ ಸೇರ್ಪಡೆ ವಿಚಾರಕ್ಕೆ ಮಾತನಾಡಿದ ಅವರು, ಬೇರೆಯವರು ಪಕ್ಷಕ್ಕೆ ಬರುವ ಬಗ್ಗೆ ನನಗೆ ಗೊತ್ತಿಲ್ಲ. ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಆದರೆ ಈ ಚುನಾವಣೆಯಲ್ಲಿ ತಟಸ್ಥವಾಗಿರಬೇಕೆಂದು ತೀರ್ಮಾನಿಸಿದ್ದೇನೆ, ಬೇರೆ ಬೇರೆ ಕಾರಣ ಇದ್ದಾವೆ, ಈ ಚುನಾವಣೆಯಲ್ಲಿ ತಟಸ್ಥವಾಗಿರ್ತೇನೆ. ಅದಕ್ಕೆ ಕಾರಣವನ್ನು ಮುಂದಿನ ದಿನದಲ್ಲಿ ಹೇಳುತ್ತೇನೆ ಎಂದು ಕುತೂಹಲ ಮೂಡಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಈ ಚುನಾವಣೆಯಲ್ಲಿ ತಟಸ್ಥವಾಗಿರಲು ನಿರ್ಧರಿಸಿದ್ದೇನೆ, ಸಾಕಷ್ಟು ಬೇರೆ ಬೇರೆ ವಿಚಾರಗಳಿವೆ. ಅದನ್ನು ಸೂಕ್ತ ಸಂದರ್ಭದಲ್ಲಿ ಮಾತನಾಡುತ್ತೇನೆ. ಮೊನ್ನೆ ನಮ್ಮ ಸಚಿವ ಎನ್.ಚಲುವರಾಯಸ್ವಾಮಿ ಸಹ ಸಭೆ ಕರೆದಿದ್ರು. ನಮ್ಮಲ್ಲಿ ಸ್ವಲ್ಪ ಗೊಂದಲಗಳಿದ್ದು, ಅವುಗಳು ನಿವಾರಣೆಯಾಗಬೇಕು ಎಂದು ಹೇಳಿದರು.
ಚಲುವರಾಯಸ್ವಾಮಿ ಜೊತೆ ಗೊಂದಲಗಳ ನಿವಾರಣೆ ಬಗ್ಗೆ ಮಾತನಾಡಿದ್ದೇನೆ. ನಿವಾರಣೆಯಾದ ಬಳಿಕ ನಾನು ಮಾತನಾಡುತ್ತೇನೆ. ಸಂಸದೆ ಸುಮಲತಾ ಕಾಂಗ್ರೆಸ್ಗೆ ಸೇರ್ಪಡೆ ವಿಚಾರಕ್ಕೆ ಮಾತನಾಡಿದ ಅವರು, ಬೇರೆಯವರು ಪಕ್ಷಕ್ಕೆ ಬರುವ ಬಗ್ಗೆ ನನಗೆ ಗೊತ್ತಿಲ್ಲ. ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಆದರೆ ಈ ಚುನಾವಣೆಯಲ್ಲಿ ತಟಸ್ಥವಾಗಿರಬೇಕೆಂದು ತೀರ್ಮಾನಿಸಿದ್ದೇನೆ, ಬೇರೆ ಬೇರೆ ಕಾರಣ ಇದ್ದಾವೆ, ಈ ಚುನಾವಣೆಯಲ್ಲಿ ತಟಸ್ಥವಾಗಿರ್ತೇನೆ. ಅದಕ್ಕೆ ಕಾರಣವನ್ನು ಮುಂದಿನ ದಿನದಲ್ಲಿ ಹೇಳುತ್ತೇನೆ ಎಂದು ಕುತೂಹಲ ಮೂಡಿಸಿದ್ದಾರೆ.