ಮತ್ತೆ ತಾರಕಕ್ಕೇರಿದ ಹಳ್ಳಿಕಾರ್ ವಿವಾದ; ವರ್ತೂರು ಸಂತೋಷ್ ವಿರುದ್ಧ ಹಳ್ಳಿಕಾರ್ ಸಂರಕ್ಷಕರ ಕಾನೂನು ಸಮರ!
ಮಂಡ್ಯ: ಮತ್ತೆ ಹಳ್ಳಿಕಾರ್ ಒಡೆಯ ವಿವಾದ ತಾರಕ್ಕಕ್ಕೇರಿದೆ, ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ವಿರುದ್ದ ಹಳ್ಳಿಕಾರ್ ಸಂರಕ್ಷಕರು ಸಿಡಿದೆದ್ದಿದ್ದಾರೆ. ವರ್ತೂರ್ ಸಂತೋಷ್ ವಿರುದ್ದ ಕಾನೂನು ಸಮರಕ್ಕೆ ನಿರ್ಧಾರ ಮಾಡಿದ್ದಾರೆ. ಬಿಗ್ಬಾಸ್ ಮನೆಯಲ್ಲಿದ್ದಾಗ ಹಳ್ಳಿಕಾರ್ ಒಡೆಯ ಬಿರುದು ವಿವಾದ ಸೃಷ್ಟಿಯಾಗಿತ್ತು, ಹಿಂದೆ ವರ್ತೂರು ಬೆಂಬಲಿಗರಿಗೆ ತಿಳುವಳಿಕೆ ಹೇಳಲು ಚರ್ಚಾಗೋಷ್ಠಿ ಹಳ್ಳಿಕಾರ್ ತಳಿ ಸಂರಕ್ಷಕರು ಏರ್ಪಡಿಸಿದ್ದರು.
ಅಂದು ವರ್ತೂರು ಸಂತೋಷ್ ಬೆಂಬಲಿಗರು ಹಾಗೂ ತಲಾತಲಾಂತರಿಂದ ಹಳ್ಳಿಕಾರ್ ತಳಿ ಸಂರಕ್ಷಕರ ನಡುವೆ ಜಟಾಪಟಿ ನಡೆದಿತ್ತು, ವಾಗ್ವಾದದಿಂದ ಕಾರ್ಯಕ್ರಮದ ಅರ್ಧದಲ್ಲೆ ಸಂತೋಷ್ ಬೆಂಬಲಿಗರನ್ನ ಪೊಲೀಸರು ಕಳಿಸಿದ್ದರು, ಇದೀಗ ಬಿಗ್ ಬಾಸ್ ಮನೆಯಿಂದ ಹೊರ ಬರ್ತಿದ್ದಂತೆ ವಿರೋಧಿಗಳಿಗೆ ಸಂತೋಷ್ ಟಾಂಗ್ ಕೊಟ್ಟಿದ್ದಾರೆ. ಏಕವಚನದಲ್ಲಿ ಹಿರಿಯ ಹಳ್ಳಿಕಾರ್ ಸಂರಕ್ಷಕರ ವಿರುದ್ದ ವರ್ತೂರ್ ಸಂತೋಷ್ ಹರಿಹಾಯ್ದಿದ್ದರು, ವರ್ತೂರ್ ಮಾತಿಗೆ ಮತ್ತೆ ಹಳ್ಳಿಕಾರ್ ಸಂರಕ್ಷಕರು ಸಿಡಿದೆದ್ದಿದ್ದಾರೆ.
ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ. ತಲಾತಲಾಂತರಿಂದ ಹಳ್ಳಿಕಾರ್ ಸಂರಕ್ಷಣೆ ಮಾಡ್ತಿರುವ ರೈತರಿಗೂ ಭಾವನೆಗೂ ಧಕ್ಕೆ, ಅವಮಾನ, ಗೂಗಲ್ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಜರ್ವೇಷನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ. ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡ್ತೇನೆ. ಎಲ್ಲಾ ದಾಖಲಾತಿಗಳನ್ನ ಸಂಗ್ರಹಿಸುತ್ತಿದ್ದು ಶೀಘ್ರ ಕಾನೂನು ಸಮರ ಸಾರುತ್ತೇವೆ.
ಗೂಗಲ್ ವಿರುದ್ದ ಕಾನೂನು ಹೋರಾಡ ಮಾಡ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿಪಟೇಲ್ ಸವಾಲು ಹಾಕಿದ್ದಾರೆ.
- cities
- mandya
- Hallikar Conservation Leaders Lash Out Against Bigg Boss Varthur Santosh