ಮಂಡ್ಯ ವಿಚಾರದಲ್ಲಿ ಎಚ್ಡಿ ಕುಮಾರಸ್ವಾಮಿ ಮೇಲುಗೈ! ಮತ್ತೆ ಪಕ್ಷೇತರೆಯಾಗಿ ಸ್ಪರ್ಧಿಸ್ತಾರಾ ಸುಮಲತಾ ಅಂಬರೀಶ್?
1207 views
ಮಂಡ್ಯ ವಿಡಿಯೋಗಳಿಗೆ ಚಂದಾದಾರರಾಗಿಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದ್ದು, ಕರ್ನಾಟಕದಲ್ಲಿ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಗಮನ ಸೆಳೆಯುತ್ತಿದೆ. ಆದರೆ, ಈಗ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದೆ ಎಂಬ ಮಾಹಿತಿ ಸಿಕ್ಕಿದ್ದು, ಅಮಿತ್ ಶಾ ಅವರ ಜೊತೆ ಎಚ್ಡಿ ಕುಮಾರಸ್ವಾಮಿ ಕ್ಷೇತ್ರ ಹಂಚಿಕೆಯನ್ನು ಬಹುತೇಕ ಫೈನಲ್ ಮಾಡಿದ್ದಾರೆ ಎನ್ನಲಾಗಿದೆ. ಈಗ ಹಾಲಿ ಸಂಸದೆ ಸುಮಲತಾ ಅಂಬರೀಶ್ ಈಗ ಏನ್ಮಾಡ್ತಾರೆ ಎಂಬುದೇ ಕುತೂಹಲ ಸೃಷ್ಟಿಸಿದೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ಚಾಣಕ್ಯ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯುಳಿದಿದೆ. ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆದಿದ್ದು, ಮಂಡ್ಯ ವಿಚಾರದಲ್ಲಿ ಎಚ್ಡಿಕೆ ಮೇಲುಗೈ ಸಾಧಿಸಿದ್ದಾರೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಬಗ್ಗೆ ಮತ್ತೊಂದು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಮಂಡ್ಯದಲ್ಲಿ ಕಳೆದ ಬಾರಿ ಪಕ್ಷೇತರೆಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್, ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಆದರೆ, ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಕ್ಷೇತ್ರ ಜೆಡಿಎಸ್ ಪಾಲಾಗುವುದು ಖಚಿತವಾಗಿದೆ. ಈ ಹಿನ್ನೆಲೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.
ಈಗಾಗಲೇ ಮಂಡ್ಯವನ್ನು ನಾನು ಬಿಡುವುದಿಲ್ಲ ಎಂದು ಹಲವು ಸಲ ಸುಮಲತಾ ಹೇಳಿರುವುದು ಮಂಡ್ಯ ಕದನ ಕಣ ಮತ್ತೊಂದು ಬಾರಿ ರೋಚಕತೆಯನ್ನು ಹುಟ್ಟು ಹಾಕಿದೆ. ಸುಮಲತಾ ಅಂಬರೀಶ್ ಅವರು ಮತ್ತೆ ಪಕ್ಷೇತರರಾಗಿ ನಿಲ್ತಾರಾ ಎಂಬ ಪ್ರಶ್ನೆಯೂ ಬರುತ್ತಿದೆ. ಇಲ್ಲವೆಂದರೆ ಸುಮಲತಾ ಅವರು ಕಾಂಗ್ರೆಸ್ಗೆ ಹೋಗುವ ಸಾಧ್ಯತೆಯ ಬಗ್ಗೆಯೂ ಚರ್ಚೆಯಾಗುತ್ತಿದೆ. ಆದರೆ, ಸುಮಲತಾ ಅಂಬರೀಶ್ ಏನು ಮಾಡುತ್ತಾರೆ ಎಂಬುದೇ ಈಗಿನ ಕೌತುಕ.
ಮಂಡ್ಯದಲ್ಲಿ ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರು ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಮಂಜುನಾಥ್ ಸ್ಪರ್ಧಿಸಿದರೆ ಗೆಲುವು ಸುಲಭವಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಮೈತ್ರಿ ನಾಯಕರು ಇದ್ದಾರೆ. ಮಂಜುನಾಥ್ ಅವರ ಮೂಲಕ ಸುಮಲತಾಗೆ ಜೆಡಿಎಸ್ ನಾಯಕರು ಠಕ್ಕರ್ ನೀಡಿದ್ದಾರೆ ಎನ್ನಲಾಗಿದೆ. ಇದರ ಜೊತೆ ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಕೋಲಾರದಿಂದ ನಿಸರ್ಗ ನಾರಾಯಣಸ್ವಾಮಿ ಹೆಸರು ಕೇಳಿಬರ್ತಿದೆ.
ಒಟ್ಟಿನಲ್ಲಿ, ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಆದರೆ, ಸುಮಲತಾ ಅಂಬರೀಶ್ ಅವರು ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದೇ ಸದ್ಯದ ಕುತೂಹಲ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ಚಾಣಕ್ಯ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯುಳಿದಿದೆ. ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆದಿದ್ದು, ಮಂಡ್ಯ ವಿಚಾರದಲ್ಲಿ ಎಚ್ಡಿಕೆ ಮೇಲುಗೈ ಸಾಧಿಸಿದ್ದಾರೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಬಗ್ಗೆ ಮತ್ತೊಂದು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಮಂಡ್ಯದಲ್ಲಿ ಕಳೆದ ಬಾರಿ ಪಕ್ಷೇತರೆಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್, ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಆದರೆ, ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಕ್ಷೇತ್ರ ಜೆಡಿಎಸ್ ಪಾಲಾಗುವುದು ಖಚಿತವಾಗಿದೆ. ಈ ಹಿನ್ನೆಲೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.
ಈಗಾಗಲೇ ಮಂಡ್ಯವನ್ನು ನಾನು ಬಿಡುವುದಿಲ್ಲ ಎಂದು ಹಲವು ಸಲ ಸುಮಲತಾ ಹೇಳಿರುವುದು ಮಂಡ್ಯ ಕದನ ಕಣ ಮತ್ತೊಂದು ಬಾರಿ ರೋಚಕತೆಯನ್ನು ಹುಟ್ಟು ಹಾಕಿದೆ. ಸುಮಲತಾ ಅಂಬರೀಶ್ ಅವರು ಮತ್ತೆ ಪಕ್ಷೇತರರಾಗಿ ನಿಲ್ತಾರಾ ಎಂಬ ಪ್ರಶ್ನೆಯೂ ಬರುತ್ತಿದೆ. ಇಲ್ಲವೆಂದರೆ ಸುಮಲತಾ ಅವರು ಕಾಂಗ್ರೆಸ್ಗೆ ಹೋಗುವ ಸಾಧ್ಯತೆಯ ಬಗ್ಗೆಯೂ ಚರ್ಚೆಯಾಗುತ್ತಿದೆ. ಆದರೆ, ಸುಮಲತಾ ಅಂಬರೀಶ್ ಏನು ಮಾಡುತ್ತಾರೆ ಎಂಬುದೇ ಈಗಿನ ಕೌತುಕ.
ಮಂಡ್ಯದಲ್ಲಿ ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರು ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಮಂಜುನಾಥ್ ಸ್ಪರ್ಧಿಸಿದರೆ ಗೆಲುವು ಸುಲಭವಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಮೈತ್ರಿ ನಾಯಕರು ಇದ್ದಾರೆ. ಮಂಜುನಾಥ್ ಅವರ ಮೂಲಕ ಸುಮಲತಾಗೆ ಜೆಡಿಎಸ್ ನಾಯಕರು ಠಕ್ಕರ್ ನೀಡಿದ್ದಾರೆ ಎನ್ನಲಾಗಿದೆ. ಇದರ ಜೊತೆ ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಕೋಲಾರದಿಂದ ನಿಸರ್ಗ ನಾರಾಯಣಸ್ವಾಮಿ ಹೆಸರು ಕೇಳಿಬರ್ತಿದೆ.
ಒಟ್ಟಿನಲ್ಲಿ, ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಆದರೆ, ಸುಮಲತಾ ಅಂಬರೀಶ್ ಅವರು ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದೇ ಸದ್ಯದ ಕುತೂಹಲ.