ಮಂಡ್ಯದ ಮಿಮ್ಸ್ನಲ್ಲಿ ದಾಖಲಾಗಿದ್ದ ವ್ಯಕ್ತಿಗೆ ಕೋವಿಡ್ ದೃಢ, ಕುಟುಂಬದ ನಾಲ್ವರಿಗೆ ನೆಗೆಟಿವ್
1099 views
ಮಂಡ್ಯ ವಿಡಿಯೋಗಳಿಗೆ ಚಂದಾದಾರರಾಗಿಮಂಡ್ಯ: ಕೋವಿಡ್ ಮುಕ್ತವಾಗಿದ್ದ ಜಿಲ್ಲೆಯಲ್ಲಿ ಹಲವು ತಿಂಗಳ ಬಳಿಕ ಒಂದು ಪ್ರಕರಣ ದೃಢಪಟ್ಟಿದೆ. ಮದ್ದೂರು ಪಟ್ಟಣದ 75 ವರ್ಷದ ವ್ಯಕ್ತಿಯೊಬ್ಬ ಕೋವಿಡ್ ಸೋಂಕಿಗೆ ಒಳಗಾಗಿದ್ದು, ಅವರಿಗೆ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕಿತನನ್ನು ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆ ನಿವಾಸಿ ಎಂದು ಗುರುತಿಸಲಾಗಿದೆ. ಜ್ವರ, ಉಸಿರಾಟದ ಸಮಸ್ಯೆ, ಮಲಬದ್ಧತೆ, ಹೊಟ್ಟೆನೋವು, ಜಠರ-ಕರುಳಿನ ತೊಂದರೆಯಿಂದಾಗಿ ಇವರು ಡಿ.12ರಂದು ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ(ಮಿಮ್ಸ್) ದಾಖಲಾಗಿದ್ದರು. 14ರಂದು ಇವರಿಗೆ ಕೋವಿಡ್ ರಾರಯಪಿಡ್ ಟೆಸ್ಟ್ ಮಾಡಿಸಲಾಗಿತ್ತು. ಅದರಂತೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಮಿಮ್ಸ್ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರ ಕುಟುಂಬದ ನಾಲ್ವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ವರದಿಗಳು ನೆಗೆಟಿವ್ ಎಂದು ಬಂದಿದೆ. ಆದಾಗ್ಯೂ ನಾಲ್ವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರ ಮನೆಯಲ್ಲೇ ಹೋಂ ಕ್ವಾರಂಟೈನ್ನಲ್ಲಿಇರಿಸಲಾಗಿದೆ. ಸೋಂಕಿತ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಆದರೂ ಸೋಂಕಿಗೆ ಒಳಗಾಗಿದ್ದಾರೆ.
75 ವರ್ಷದ ವ್ಯಕ್ತಿಗೆ ಸೋಂಕು ಬಂದಿರುವುದನ್ನು ಖಚಿತಪಡಿಸಿರುವ ಡಿಎಚ್ಒ ಡಾ.ಕೆ.ಮೋಹನ್, ‘‘ನೆರೆಯ ರಾಜ್ಯದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅಲರ್ಟ್ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಮಿಮ್ಸ್ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ವ್ಯವಸ್ಥೆ, ಆಕ್ಸಿಜನ್ ಫ್ಲಾಂಟ್ಗಳನ್ನು ಪರಿಶೀಲಿಸಲಾಗಿದೆ,’’ ಎಂದು ವಿಜಯ ಕರ್ನಾಟಕಕ್ಕೆ ತಿಳಿಸಿದರು.
‘‘ಜಿಲ್ಲಾಸ್ಪತ್ರೆಯಲ್ಲಿ 30 ಹಾಸಿಗೆಗಳ ಎರಡು ವಾರ್ಡ್ಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಲಾಗಿದೆ. ಪ್ರಕರಣಗಳಿಗೆ ಅನುಗುಣವಾಗಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಆಸ್ಪತ್ರೆಯನ್ನು ಸಹ ಸಜ್ಜುಗೊಳಿಸಲಾಗಿದೆ. ಜಿಲ್ಲೆಯ ಇತರ ಆರು ತಾಲೂಕುಗಳಲ್ಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ ಕನಿಷ್ಠ 10 ಹಾಸಿಗೆಗಳನ್ನು ಕಾಯ್ದಿರಿಸುವಂತೆ ಎಲ್ಲ ಆಡಳಿತ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ,’’ ಎಂದರು.
ಸೋಂಕಿತನನ್ನು ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆ ನಿವಾಸಿ ಎಂದು ಗುರುತಿಸಲಾಗಿದೆ. ಜ್ವರ, ಉಸಿರಾಟದ ಸಮಸ್ಯೆ, ಮಲಬದ್ಧತೆ, ಹೊಟ್ಟೆನೋವು, ಜಠರ-ಕರುಳಿನ ತೊಂದರೆಯಿಂದಾಗಿ ಇವರು ಡಿ.12ರಂದು ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ(ಮಿಮ್ಸ್) ದಾಖಲಾಗಿದ್ದರು. 14ರಂದು ಇವರಿಗೆ ಕೋವಿಡ್ ರಾರಯಪಿಡ್ ಟೆಸ್ಟ್ ಮಾಡಿಸಲಾಗಿತ್ತು. ಅದರಂತೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಮಿಮ್ಸ್ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರ ಕುಟುಂಬದ ನಾಲ್ವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ವರದಿಗಳು ನೆಗೆಟಿವ್ ಎಂದು ಬಂದಿದೆ. ಆದಾಗ್ಯೂ ನಾಲ್ವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರ ಮನೆಯಲ್ಲೇ ಹೋಂ ಕ್ವಾರಂಟೈನ್ನಲ್ಲಿಇರಿಸಲಾಗಿದೆ. ಸೋಂಕಿತ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಆದರೂ ಸೋಂಕಿಗೆ ಒಳಗಾಗಿದ್ದಾರೆ.
75 ವರ್ಷದ ವ್ಯಕ್ತಿಗೆ ಸೋಂಕು ಬಂದಿರುವುದನ್ನು ಖಚಿತಪಡಿಸಿರುವ ಡಿಎಚ್ಒ ಡಾ.ಕೆ.ಮೋಹನ್, ‘‘ನೆರೆಯ ರಾಜ್ಯದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅಲರ್ಟ್ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಮಿಮ್ಸ್ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ವ್ಯವಸ್ಥೆ, ಆಕ್ಸಿಜನ್ ಫ್ಲಾಂಟ್ಗಳನ್ನು ಪರಿಶೀಲಿಸಲಾಗಿದೆ,’’ ಎಂದು ವಿಜಯ ಕರ್ನಾಟಕಕ್ಕೆ ತಿಳಿಸಿದರು.
‘‘ಜಿಲ್ಲಾಸ್ಪತ್ರೆಯಲ್ಲಿ 30 ಹಾಸಿಗೆಗಳ ಎರಡು ವಾರ್ಡ್ಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಲಾಗಿದೆ. ಪ್ರಕರಣಗಳಿಗೆ ಅನುಗುಣವಾಗಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಆಸ್ಪತ್ರೆಯನ್ನು ಸಹ ಸಜ್ಜುಗೊಳಿಸಲಾಗಿದೆ. ಜಿಲ್ಲೆಯ ಇತರ ಆರು ತಾಲೂಕುಗಳಲ್ಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ ಕನಿಷ್ಠ 10 ಹಾಸಿಗೆಗಳನ್ನು ಕಾಯ್ದಿರಿಸುವಂತೆ ಎಲ್ಲ ಆಡಳಿತ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ,’’ ಎಂದರು.