ಚಾರ್ಮಾಡಿಯಲ್ಲಿ ಚಾರಣಕ್ಕೆ ಹೊರಟಿದ್ದ ಬೆಂಗಳೂರಿನ ಟೆಕ್ಕಿ, ದಾರಿ ಕಾಣದೆ ಹೈರಾಣು
1146 views
ಮಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಮಂಗಳೂರು: ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಚಾರಣಕ್ಕಾಗಿ ಹೋಗಿದ್ದ ಮಹಾರಾಷ್ಟ್ರದ ನಾಗಪುರ ನಿವಾಸಿ, ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪರೇಶ್ ಕಿಶನ್ಲಾಲ್ ಅಗರ್ವಾಲ್ ಅವರನ್ನು ಅಹೋರಾತ್ರಿ ಕಾರ್ಯಾಚರಣೆಯ ಬಳಿಕ ಸ್ಥಳೀಯರ ತಂಡ ಪತ್ತೆಹಚ್ಚಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿಝರಿ ಫಾಲ್ಸ್ ಕಡೆಯಿಂದ ಬಂಡಾಜೆ ಎರ್ಮಾಯಿ ಫಾಲ್ಸ್ ಅರಣ್ಯದ ಕಡೆಗೆ ಇಳಿದು, ರಾತ್ರಿಯಾಗುತ್ತಿದ್ದಂತೆ ಹಸಿವಿನಿಂದ ನಿತ್ರಾಣಕ್ಕೊಳಗಾಗಿ ದಾರಿ ಕಾಣದೆ ಅರಣ್ಯದಲ್ಲಿ ಬಾಕಿಯಾಗಿದ್ದ ಟೆಕ್ಕಿ ದಾರಿ ಕಾಣದೇ ಬೆಂಗಳೂರಿನ ಸಹೋದ್ಯೋಗಳಿಗೆ ತಾನಿರುವ ಲೊಕೇಶನ್ ಕಳಿಸಿದ್ದ. ಅವರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಲ್ಲದೇ ಆ ಸಂದೇಶವನ್ನು ಬೆಂಗಳೂರಿನ ಗ್ರೂಪಿನಲ್ಲಿ ಹಂಚಿಕೊಂಡಿದ್ದರು. ಅದು ಸಂಜೆ ವೇಳೆಗೆ ಚಾರ್ಮಾಡಿಯ ಹೊಟೇಲ್ ಹನೀಫ್ ಅವರಿಗೆ ಗೊತ್ತಾಗಿ ಅವರು ಚಾರ್ಮಾಡಿಯ ಗ್ರೂಪಿಗೆ ಹಾಕಿದ್ದರು. ಇದನ್ನು ನೋಡಿದ ಸಿನಾನ್ ಚಾರ್ಮಾಡಿ ಅವರು ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಚಾರ್ಮಾಡಿ ವ್ಯಾಪ್ತಿಯ ಸ್ಥಳೀಯರಾದ ಮುಬಶ್ಶಿರ್, ಕಾಜೂರಿನ ಎರ್ಮಾಲ್ಪಲ್ಕೆ,ಅಶ್ರಫ್, ಕಾಜೂರಿನ ಶಂಸು, ನಾಸೀರ್ ಇವರ ತಂಡ ಸೇರಿ ಹುಡುಕಾಟ ಕಾರ್ಯಾಚರಣೆ ನಡೆಸಿದರು.