ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಮುಸ್ಲಿಂ ಸಮಾಜಕ್ಕೆ ಮಾತ್ರವಲ್ಲ, ಎಲ್ಲ ಸಮುದಾಯಕ್ಕೂ ಅವಮಾನ ; ರಮಾನಾಥ ರೈ
ಮಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ದಕ್ಷಿಣ ಕನ್ನಡ: ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಭಟ್ ಅವರನ್ನು ಬಂಧಿಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಲ್ಲಿ ಮಾತನಾಡಿದ ಅವರು, ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿದ್ರೆ ಮಂಗಳೂರಲ್ಲಿ ಕೋಮು ಸಂಘರ್ಷ ಆಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ, ಅವರ ಬಂಧನವಾದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸುವುದಿಲ್ಲ, ಈ ಬಗ್ಗೆ ದ.ಕ.ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸರ್ವ ಸನ್ನದ್ದರಾಗಿದ್ದಾರೆ ಎಂದು ಹೇಳಿದರು.
ಪ್ರಭಾಕರ್ ಭಟ್ ಹೇಳಿಕೆಯನ್ನು ಯಾವ ಸಮುದಾಯದ ಮಹಿಳೆಯರು ಒಪ್ಪಲು ಸಾಧ್ಯವಿಲ್ಲ. ಮುಸ್ಲಿಂ ಮಹಿಳಾ ವರ್ಗಕ್ಕೆ ಮಾತ್ರವಲ್ಲ ಎಲ್ಲಾ ಸಮುದಾಯದ ಮಹಿಳೆಯರಿಗೆ ಅವಮಾನವಾಗಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರಿಗೆ ಏನು ಮಾಡಬೇಕೆಂದು ತೋಚುತ್ತಿಲ್ಲ. ಆದ್ದರಿಂದ ಕೋಮು ಪ್ರಚೋದನೆಯ ಭಾಷಣ ಮಾಡುತ್ತಿದ್ದಾರೆ. ಕಲ್ಲಡ್ಕ ಭಟ್ ಬಂಧಿಸಬೇಕೆಂಬ ಆಗ್ರಹಕ್ಕೆ ದ.ಕ.ಜಿಲ್ಲೆಯ ಜನರೂ ಸಹಮತ ವ್ಯಕ್ತಪಡಿಸುತ್ತಾರೆ ಎಂದರು.
ಕೋಮು ದ್ವೇಷ ಹರಡಿ ರಾಜಕೀಯ ಲಾಭ ಪಡೆಯಲು ಭಟ್ರು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಈಗಾಗಲೇ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಸರ್ಕಾರ ತಕ್ಷಣ ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಬಂಧನ ಮಾಡಬೇಕು. ಸರ್ಕಾರ ಈ ವಿಚಾರದಲ್ಲಿ ವಿಳಂಬ ಮಾಡಬಾರದು. ಸರ್ಕಾರದ ಜೊತೆಗೆ ಸಮಾಜ ಇರಲಿದೆ ಎಂದು ಬಿ.ರಮಾನಾಥ್ ರೈ ಹೇಳಿದರು.
ಮಂಗಳೂರಲ್ಲಿ ಮಾತನಾಡಿದ ಅವರು, ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿದ್ರೆ ಮಂಗಳೂರಲ್ಲಿ ಕೋಮು ಸಂಘರ್ಷ ಆಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ, ಅವರ ಬಂಧನವಾದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸುವುದಿಲ್ಲ, ಈ ಬಗ್ಗೆ ದ.ಕ.ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸರ್ವ ಸನ್ನದ್ದರಾಗಿದ್ದಾರೆ ಎಂದು ಹೇಳಿದರು.
ಪ್ರಭಾಕರ್ ಭಟ್ ಹೇಳಿಕೆಯನ್ನು ಯಾವ ಸಮುದಾಯದ ಮಹಿಳೆಯರು ಒಪ್ಪಲು ಸಾಧ್ಯವಿಲ್ಲ. ಮುಸ್ಲಿಂ ಮಹಿಳಾ ವರ್ಗಕ್ಕೆ ಮಾತ್ರವಲ್ಲ ಎಲ್ಲಾ ಸಮುದಾಯದ ಮಹಿಳೆಯರಿಗೆ ಅವಮಾನವಾಗಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರಿಗೆ ಏನು ಮಾಡಬೇಕೆಂದು ತೋಚುತ್ತಿಲ್ಲ. ಆದ್ದರಿಂದ ಕೋಮು ಪ್ರಚೋದನೆಯ ಭಾಷಣ ಮಾಡುತ್ತಿದ್ದಾರೆ. ಕಲ್ಲಡ್ಕ ಭಟ್ ಬಂಧಿಸಬೇಕೆಂಬ ಆಗ್ರಹಕ್ಕೆ ದ.ಕ.ಜಿಲ್ಲೆಯ ಜನರೂ ಸಹಮತ ವ್ಯಕ್ತಪಡಿಸುತ್ತಾರೆ ಎಂದರು.
ಕೋಮು ದ್ವೇಷ ಹರಡಿ ರಾಜಕೀಯ ಲಾಭ ಪಡೆಯಲು ಭಟ್ರು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಈಗಾಗಲೇ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಸರ್ಕಾರ ತಕ್ಷಣ ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಬಂಧನ ಮಾಡಬೇಕು. ಸರ್ಕಾರ ಈ ವಿಚಾರದಲ್ಲಿ ವಿಳಂಬ ಮಾಡಬಾರದು. ಸರ್ಕಾರದ ಜೊತೆಗೆ ಸಮಾಜ ಇರಲಿದೆ ಎಂದು ಬಿ.ರಮಾನಾಥ್ ರೈ ಹೇಳಿದರು.