ಖಾಸಗಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಗೆ ವಿದ್ಯಾರ್ಥಿ ಬಲಿ, ರಸ್ತೆ ತಡೆದು ನಾಗರಿಕರ ಅಕ್ರೋಶ
1085 views
ಮಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಮಂಗಳೂರು: ಖಾಸಗಿ ಬಸ್ ಬೈಕ್ಗೆ ಡಿಕ್ಕಿಯಾಗಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಜೂನ್ 5ರಂದು ಸ್ಥಳದಲ್ಲೇ ಸಾವಿಗೀಡಾಗಿದ್ದು, ಖಾಸಗಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯ ವಿರುದ್ಧ ನಾಗರೀಕ ಹಿತರಕ್ಷಣಾ ಸಮಿತಿ ಎಡಪದವು - ಮಿಜಾರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಇಂದು ಎಡಪದವಿನ ಜಂಕ್ಷನ್ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ನಾಗರೀಕ ಹಿತರಕ್ಷಣಾ ವೇದಿಕೆಯ ಸುಧಾಕರ ಪೂಂಜಾ ಅವರು, ಖಾಸಗಿ ಬಸ್ನ ಮಿತಿ ಮೀರಿದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಕಾಲೇಜು ವಿದ್ಯಾರ್ಥಿಯ ಸಾವು ಸಂಭವಿಸಿದೆ. ಅಜಾಗರೂಕತೆಯ ಚಾಲನೆಯನ್ನು ಮಾಡಿದ ಬಸ್ ಚಾಲಕನ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಿತಿ ಮೀರಿದ ಖಾಸಗಿ ಬಸ್ಗಳ ಧಾವಂತದಿಂದ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿದ್ದು, ಲಘು, ದ್ವಿಚಕ್ರ ಹಾಗೂ ಪಾದಚಾರಿಗಳಿಗೆ ಇದರಿಂದ ಭಯದ ವಾತವರಣ ಸೃಷ್ಟಿಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ನಾಗರೀಕ ಹಿತರಕ್ಷಣಾ ವೇದಿಕೆಯ ಸುಧಾಕರ ಪೂಂಜಾ ಅವರು, ಖಾಸಗಿ ಬಸ್ನ ಮಿತಿ ಮೀರಿದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಕಾಲೇಜು ವಿದ್ಯಾರ್ಥಿಯ ಸಾವು ಸಂಭವಿಸಿದೆ. ಅಜಾಗರೂಕತೆಯ ಚಾಲನೆಯನ್ನು ಮಾಡಿದ ಬಸ್ ಚಾಲಕನ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಿತಿ ಮೀರಿದ ಖಾಸಗಿ ಬಸ್ಗಳ ಧಾವಂತದಿಂದ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿದ್ದು, ಲಘು, ದ್ವಿಚಕ್ರ ಹಾಗೂ ಪಾದಚಾರಿಗಳಿಗೆ ಇದರಿಂದ ಭಯದ ವಾತವರಣ ಸೃಷ್ಟಿಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.