ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಸುನೀಲ್ ಕುಮಾರ್ ಹೆಸರು ; ಫಸ್ಟ್ ರಿಯಾಕ್ಷನ್
ಉಡುಪಿ: ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಡಿಯೋ ವೈರಲ್ ಅಗಿದ್ದು ಇದರಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರ ಹೆಸರು ಕೇಳಿ ಬಂದಿದೆ, ಹೀಗಾಗಿ ಪ್ರಕರಣ ಸಂಬಂಧ ಸುನಿಲ್ ಕುಮಾರ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.
ಬಿಜೆಪಿ ಹೆಸರಿನಲ್ಲಿ ಯಾರಿಗೆ ಯಾರೂ ಕೂಡ ಮೋಸ ಮಾಡಬಾರದು, ಸಿಸಿಬಿ ಅಧಿಕಾರಿಗಳು ಈಗಾಗಲೇ ಬಂಧಿಸಿರುವ ಯಾರ ಮುಖ ಪರಿಚಯ ನನಗೆ ಇಲ್ಲ, ನಾನು ಯಾರ ಜೊತೆಗೆ ನಾನು ಫೋನ್ನಲ್ಲಿ ಮಾತಾಡಿಲ್ಲ, ಆಕಸ್ಮಿಕವಾಗಿ ಶುಭ ಸಮಾರಂಭ ಕಾರ್ಯಕ್ರಮಗಳಲ್ಲೂ ಕೂಡ ಭೇಟಿ ಆಗಿಲ್ಲ, ಬಿಜೆಪಿಯಲ್ಲಿ ಹಣದಿಂದ ಟಿಕೆಟ್ ಸಿಗುತ್ತೆ ಅನ್ನೋದು ಒಂದು ಭ್ರಮೆ, ಹಣದಿಂದ ಟಿಕೆಟ್ ಸಿಗುತ್ತಿದ್ದರೆ ನಾನು ನಾಲ್ಕು ಬಾರಿ ಗೆದ್ದು ಬರುವುದಕ್ಕೆ ಸಾಧ್ಯ ಆಗುತ್ತಿರಲಿಲ್ಲ ಎಂದು ಹೇಳಿದರು.
ರಾಜಕಾರಣಿಗಳ ಹೆಸರು ಹೇಳಿ ಹಣದ ದುರುಪಯೋಗ ಮಾಡುತ್ತಾರೆ ಎಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು, ಈ ಘಟನೆಯನ್ನು ತಾರ್ಕಿಕ ಅಂತ್ಯಕ್ಕೆ ಪೊಲೀಸ್ ಇಲಾಖೆ ತೆಗೆದುಕೊಂಡು ಹೋಗಬೇಕು. ಘಟನೆಯ ಹಿಂದೆ ಯಾರಿದ್ದಾರೆ, ಯಾರು ದುರುಪಯೋಗ ಮಾಡುತ್ತಾರೆ ಅಂತವರನ್ನ ಸಂಪೂರ್ಣವಾಗಿ ಮಟ್ಟ ಹಾಕಬೇಕು, ರಾಜಕಾರಣಿಯ ಹೆಸರು ಹೇಳಿ ಪಕ್ಷದ ಹೆಸರು ಹೇಳಿ ಹಣ ಸಂಗ್ರಹ ಮಾಡುವುದು ಯಾವ ಪಕ್ಷಕ್ಕೂ ಶೋಭೆ ತರುವುದಿಲ್ಲ ಎಂದು ಹೇಳಿದರು.
ಈ ಘಟನೆಯೇ ಅಂತ್ಯ ಆಗಬೇಕು ಅಂಥ ಕ್ರಮವನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳಬೇಕು ನನಗೆ ಯಾವುದೇ ಸಂಬಂಧ ಇಲ್ಲದ ಘಟನೆ ಇದು, ಈ ಕುರಿತಂತೆ ಯಾವ ವಿಚಾರಣೆಗೂ ನಾನು ಸಿದ್ಧನಿದ್ದೇನೆ ಇದರ ಹಿಂದೆ ಯಾರು ಯಾರು ಫೋನ್ ಸಂಪರ್ಕ ಮಾಡಿದ್ದಾರೆ, ಅಂತವರನ್ನು ಮಟ್ಟ ಹಾಕಬೇಕು, ಬಿಜೆಪಿ ಹೆಸರು ಹೇಳಿ ಬಿಜೆಪಿಗೆ ಅವಮಾನ ಮಾಡುವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ಹೆಸರಿನಲ್ಲಿ ಯಾರಿಗೆ ಯಾರೂ ಕೂಡ ಮೋಸ ಮಾಡಬಾರದು, ಸಿಸಿಬಿ ಅಧಿಕಾರಿಗಳು ಈಗಾಗಲೇ ಬಂಧಿಸಿರುವ ಯಾರ ಮುಖ ಪರಿಚಯ ನನಗೆ ಇಲ್ಲ, ನಾನು ಯಾರ ಜೊತೆಗೆ ನಾನು ಫೋನ್ನಲ್ಲಿ ಮಾತಾಡಿಲ್ಲ, ಆಕಸ್ಮಿಕವಾಗಿ ಶುಭ ಸಮಾರಂಭ ಕಾರ್ಯಕ್ರಮಗಳಲ್ಲೂ ಕೂಡ ಭೇಟಿ ಆಗಿಲ್ಲ, ಬಿಜೆಪಿಯಲ್ಲಿ ಹಣದಿಂದ ಟಿಕೆಟ್ ಸಿಗುತ್ತೆ ಅನ್ನೋದು ಒಂದು ಭ್ರಮೆ, ಹಣದಿಂದ ಟಿಕೆಟ್ ಸಿಗುತ್ತಿದ್ದರೆ ನಾನು ನಾಲ್ಕು ಬಾರಿ ಗೆದ್ದು ಬರುವುದಕ್ಕೆ ಸಾಧ್ಯ ಆಗುತ್ತಿರಲಿಲ್ಲ ಎಂದು ಹೇಳಿದರು.
ರಾಜಕಾರಣಿಗಳ ಹೆಸರು ಹೇಳಿ ಹಣದ ದುರುಪಯೋಗ ಮಾಡುತ್ತಾರೆ ಎಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು, ಈ ಘಟನೆಯನ್ನು ತಾರ್ಕಿಕ ಅಂತ್ಯಕ್ಕೆ ಪೊಲೀಸ್ ಇಲಾಖೆ ತೆಗೆದುಕೊಂಡು ಹೋಗಬೇಕು. ಘಟನೆಯ ಹಿಂದೆ ಯಾರಿದ್ದಾರೆ, ಯಾರು ದುರುಪಯೋಗ ಮಾಡುತ್ತಾರೆ ಅಂತವರನ್ನ ಸಂಪೂರ್ಣವಾಗಿ ಮಟ್ಟ ಹಾಕಬೇಕು, ರಾಜಕಾರಣಿಯ ಹೆಸರು ಹೇಳಿ ಪಕ್ಷದ ಹೆಸರು ಹೇಳಿ ಹಣ ಸಂಗ್ರಹ ಮಾಡುವುದು ಯಾವ ಪಕ್ಷಕ್ಕೂ ಶೋಭೆ ತರುವುದಿಲ್ಲ ಎಂದು ಹೇಳಿದರು.
ಈ ಘಟನೆಯೇ ಅಂತ್ಯ ಆಗಬೇಕು ಅಂಥ ಕ್ರಮವನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳಬೇಕು ನನಗೆ ಯಾವುದೇ ಸಂಬಂಧ ಇಲ್ಲದ ಘಟನೆ ಇದು, ಈ ಕುರಿತಂತೆ ಯಾವ ವಿಚಾರಣೆಗೂ ನಾನು ಸಿದ್ಧನಿದ್ದೇನೆ ಇದರ ಹಿಂದೆ ಯಾರು ಯಾರು ಫೋನ್ ಸಂಪರ್ಕ ಮಾಡಿದ್ದಾರೆ, ಅಂತವರನ್ನು ಮಟ್ಟ ಹಾಕಬೇಕು, ಬಿಜೆಪಿ ಹೆಸರು ಹೇಳಿ ಬಿಜೆಪಿಗೆ ಅವಮಾನ ಮಾಡುವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
Curated by Shivamoorthi M|TimesXP Kannada|18 Sept 2023