ಮಂಗಳೂರಿನಲ್ಲಿ ಮಳೆ ವಿಳಂಬದಿಂದ ನೀರಿಗಾಗಿ ಸಂಕಷ್ಟ
1069 views
ಮಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಮಂಗಳೂರು: ಮಂಗಳೂರಿನಲ್ಲಿ ಮಳೆ ವಿಳಂಬದಿಂದ ನೀರಿಗೆ ತ್ರೀವ ಸಂಕಷ್ಟ ಎದುರಾಗಿದ್ದು, ಈ ಬಗ್ಗೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮಾತನಾಡಿ, ದ.ಕ ಜಿಲ್ಲೆಯಲ್ಲಿ ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮಳೆ ಬರಬೇಕಿತ್ತು. ಆದರೆ, ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ, ಕಾಲೇಜು ಸೇರಿ ಎಲ್ಲಾ ಕಡೆ ನೀರು ಪೂರೈಸಲು ವ್ಯವಸ್ಥೆ ಮಾಡಿದೆ.
ಸದ್ಯ ತುಂಬೆ ಡ್ಯಾಂನಲ್ಲಿ 1.86 ಮೀ. ಮಟ್ಟಕ್ಕೆ ನೀರು ಇಳಿದಿದೆ. ಇದರಿಂದ ಮಂಗಳೂರು ನಗರಕ್ಕೆ ನೀರಿನ ಸಮಸ್ಯೆ ಇದೆ ಅಂತ ಪಾಲಿಕೆ ಕಮಿಷನರ್ ಹೇಳಿದರು.
ಹೀಗಾಗಿ ಎಎಂಆರ್ ಡ್ಯಾ ನಿಂದ ಈಗಾಗಲೇ ನೀರು ಬಿಡಲಾಗಿದೆ, ಸಂಜೆಯೊಳಗೆ ಆ ನೀರು ತುಂಬೆ ಡ್ಯಾಂ ಬಂದು ಸೇರಲಿದೆ. ತುಂಬೆ ಡ್ಯಾಂನಲ್ಲಿ 4 ಮೀ ನೀರು ತುಂಬಲಿದೆ. ಕಳೆದ ಎರಡು ದಿನ ಪೈಪ್ ಲೈನ್ ಹಾಗೂ ಮೋಟಾರ್ ರಿಪೇರಿ ಕೆಲಸ ಇತ್ತು ಹೀಗಾಗಿ ನೀರಿನ ಸಮಸ್ಯೆ ಮಂಗಳೂರಿನಲ್ಲಿ ಹೆಚ್ಚಾಗಿದೆ. ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ ಆಗದಂತೆ ನೋಡ್ತೇವೆ, ಪಾಲಿಕೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕವೂ ನೀರಿನ ಪೂರೈಕೆ ಆಗ್ತಿದೆ ಎಂದರು.
ಸದ್ಯ ತುಂಬೆ ಡ್ಯಾಂನಲ್ಲಿ 1.86 ಮೀ. ಮಟ್ಟಕ್ಕೆ ನೀರು ಇಳಿದಿದೆ. ಇದರಿಂದ ಮಂಗಳೂರು ನಗರಕ್ಕೆ ನೀರಿನ ಸಮಸ್ಯೆ ಇದೆ ಅಂತ ಪಾಲಿಕೆ ಕಮಿಷನರ್ ಹೇಳಿದರು.
ಹೀಗಾಗಿ ಎಎಂಆರ್ ಡ್ಯಾ ನಿಂದ ಈಗಾಗಲೇ ನೀರು ಬಿಡಲಾಗಿದೆ, ಸಂಜೆಯೊಳಗೆ ಆ ನೀರು ತುಂಬೆ ಡ್ಯಾಂ ಬಂದು ಸೇರಲಿದೆ. ತುಂಬೆ ಡ್ಯಾಂನಲ್ಲಿ 4 ಮೀ ನೀರು ತುಂಬಲಿದೆ. ಕಳೆದ ಎರಡು ದಿನ ಪೈಪ್ ಲೈನ್ ಹಾಗೂ ಮೋಟಾರ್ ರಿಪೇರಿ ಕೆಲಸ ಇತ್ತು ಹೀಗಾಗಿ ನೀರಿನ ಸಮಸ್ಯೆ ಮಂಗಳೂರಿನಲ್ಲಿ ಹೆಚ್ಚಾಗಿದೆ. ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ ಆಗದಂತೆ ನೋಡ್ತೇವೆ, ಪಾಲಿಕೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕವೂ ನೀರಿನ ಪೂರೈಕೆ ಆಗ್ತಿದೆ ಎಂದರು.