ಸಿದ್ದರಾಮಯ್ಯರಿಗೆ RSS ಮಾತ್ರ ಕಾಣಿಸುತ್ತಿದೆ! ಅದಕ್ಕಾಗಿ ಅದರ ಬಗ್ಗೆ ಮಾತ್ರ ಮಾತಾಡ್ತಾರೆ: ಡಿವಿ ಸದಾನಂದಗೌಡ
1002 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ಸಿದ್ದರಾಮಯ್ಯ ಅವರಿಗೆ ಬೇರೆ ವಿಚಾರಗಳು ಇಲ್ಲ. ಮಂಗಳವಾರದಿಂದ ಕುಮಾರಸ್ವಾಮಿ VS ಸಿದ್ದರಾಮಯ್ಯ ಎಂಬಂತೆ ಆಗಿದೆ. ಅವರಿಗೆ ಸದಾ ಆರ್ಎಸ್ಎಸ್ ಮಾತ್ರ ಕಾಣಿಸುತ್ತಿದೆ ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಕಿಡಿಕಾರಿದರು. ಆರ್ಎಸ್ಎಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಂತರ ವಾಗ್ದಾಳಿ ನಡೆಸುತ್ತಿರುವ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಸದಾ ಆರ್ಎಸ್ಎಸ್ ಮಾತ್ರ ಕಾಣಿಸುತ್ತಿದೆ. ಹಾಗಾಗಿ, ಆರ್ಎಸ್ಎಸ್ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವ ಭೀತಿ ಇರುವ ಹಿನ್ನೆಲೆ ಸಿದ್ದರಾಮಯ್ಯ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.
ಇನ್ನು, ಪಠ್ಯ ಪುಸ್ತಕದಲ್ಲಿ ಏನಾದರೂ ತಪ್ಪುಗಳಿದ್ದರೇ ಹೇಳಿ ಅದನ್ನು ಸರಿಪಡಿಸುತ್ತೇವೆ. ಮುಖ್ಯಮಂತ್ರಿಗಳು ಕೂಡಾ ಇದೇ ಭರವಸೆಯನ್ನು ನೀಡಿದ್ದಾರೆ. ರಾಷ್ಟ್ರಕವಿ ಕುವೆಪುರವರಿಗೆ ನಾವು ಯಾವುದೇ ರೀತಿಯ ಅವಮಾನ ಮಾಡಿಲ್ಲ. ಅವರ ಎರಡು ಗೀತೆಗಳನ್ನು ನಾಡಗೀತೆಗಳನ್ನಾಗಿ ಮಾಡಿದ್ದೇ ಬಿಜೆಪಿ ಸರ್ಕಾರ. ಪ್ರತಿಪಕ್ಷ ನಾಯಕರು ಹಳೆಯ ವಿಚಾರಗಳನ್ನು ಹಿಡಿದು ನೇತಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು, ಪಠ್ಯ ಪುಸ್ತಕದಲ್ಲಿ ಏನಾದರೂ ತಪ್ಪುಗಳಿದ್ದರೇ ಹೇಳಿ ಅದನ್ನು ಸರಿಪಡಿಸುತ್ತೇವೆ. ಮುಖ್ಯಮಂತ್ರಿಗಳು ಕೂಡಾ ಇದೇ ಭರವಸೆಯನ್ನು ನೀಡಿದ್ದಾರೆ. ರಾಷ್ಟ್ರಕವಿ ಕುವೆಪುರವರಿಗೆ ನಾವು ಯಾವುದೇ ರೀತಿಯ ಅವಮಾನ ಮಾಡಿಲ್ಲ. ಅವರ ಎರಡು ಗೀತೆಗಳನ್ನು ನಾಡಗೀತೆಗಳನ್ನಾಗಿ ಮಾಡಿದ್ದೇ ಬಿಜೆಪಿ ಸರ್ಕಾರ. ಪ್ರತಿಪಕ್ಷ ನಾಯಕರು ಹಳೆಯ ವಿಚಾರಗಳನ್ನು ಹಿಡಿದು ನೇತಾಡುತ್ತಿದ್ದಾರೆ ಎಂದು ಕಿಡಿಕಾರಿದರು.