ಕಾಂಗ್ರೆಸ್ ಅಭ್ಯರ್ಥಿ ಹೊಲಸು ಬಾಯಿಯ ಮನುಷ್ಯ, ಮೈಸೂರಿಗೆ ಸಭ್ಯ ಅಭ್ಯರ್ಥಿಯನ್ನು ನಿಲ್ಲಿಸಿ: ಪ್ರತಾಪ್ ಸಿಂಹ
1159 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ಎಚ್ಡಿ ದೇವೇಗೌಡ ಅವರು ಟಿಕೆಟ್ ತಪ್ಪಿಸಿದರು ಎಂಬ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಅನ್ನ ತಿನ್ನುವಂತಹ ಬಾಯಿಯಲ್ಲಿ ಏನೇನೋ ಮಾತನಾಡಬೇಡಿ. ದೇವೇಗೌಡರಿಗೆ ನಾಯಕರನ್ನು ಬೆಳೆಸಿ ಗೊತ್ತೇ ಹೊರತು, ತುಳಿದು ಗೊತ್ತಿಲ್ಲ. ನಿಮ್ಮನ್ನು ರಾಜಕೀಯವಾಗಿ ಬೆಳೆಸಿ ಶಕ್ತಿ ತುಂಬಿದ್ದು ಎಚ್ಡಿ ದೇವೇಗೌಡರು, ಮರೆಯಬೇಡಿ. ನನಗೆ ಟಿಕೆಟ್ ಕೊಡಿಸಬೇಕು ಎಂದು ಒಂದು ಗಂಟೆಗಳ ಕಾಲ ಕಾದು ಅಮಿತ್ ಶಾ ಅವರ ಜೊತೆ ಫೋನ್ನಲ್ಲಿ ಮಾತನಾಡಿದ್ದು ದೇವೇಗೌಡರು. ನನಗೆ ಟಿಕೆಟ್ ಕೊಡಿ ಎಂದು ಕೇಳಿದವರಲ್ಲಿ ದೇವೇಗೌಡರು ಪ್ರಮುಖರು, ಅಂತಹ ವ್ಯಕ್ತಿ ನನಗೆ ಟಿಕೆಟ್ ತಪ್ಪಿಸುತ್ತಾರೆ ಅಂತ ಹೇಳಿದರೆ ಹೇಗೆ..? ಎಂದು ಪ್ರಶ್ನಿಸಿದರು.
ವೆಂಕಟೇಶ್ ಅವರು ಇಂತಹ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಪ್ರತಾಪ್ ಸಿಂಹ ಕಿಡಿಕಾರಿದರು. ಕಾಂಗ್ರೆಸ್ನವರು ಮೊದಲು ಒಳ್ಳೆಯವರಿಗೆ ಟಿಕೆಟ್ ಕೊಡಲಿ. ನಾಮಪತ್ರ ಸಲ್ಲಿಕೆ ಮಾಡಲು ಇನ್ನು ಒಂದು ದಿನ ಅವಕಾಶ ಇದೆ. ಅಭ್ಯರ್ಥಿ ಬದಲಾಯಿಸಲು ಅವಕಾಶ ಇದೆ, ಅದನ್ನು ಬಳಸಿಕೊಳ್ಳಿ. ಚುನಾವಣೆ ಗೆಲ್ಲಲು ಮೊದಲು ಒಳ್ಳೆಯ ಅಭ್ಯರ್ಥಿ ಇರಬೇಕು. ನಿಮ್ಮ ಅಭ್ಯರ್ಥಿ ಒಕ್ಕಲಿಗ ಪ್ರಮಾಣ ಪತ್ರ ಹಿಡಿದುಕೊಂಡು ಬಂದಿದ್ದಾನೆ, ಆತ ಹಿಡಿದುಕೊಂಡು ಬಂದಿರುವ ಆ ಪ್ರಮಾಣ ಪತ್ರ ಯಾವುದು? ಹಿಂದೆ ಕೆಎಸ್ಒಯುನಲ್ಲಿ ಸಿಗುತ್ತಿತ್ತಲ್ಲ ಆ ಪ್ರಮಾಣ ಪತ್ರನಾ? ಎಂದು ಟೀಕಿಸಿದರು.
ಈ ಬಾರಿ ಪ್ರತಾಪ್ ಸಿಂಹಗೆ ಕೊನೆ ಹಂತದಲ್ಲಿ ಟಿಕೆಟ್ ಕೈತಪ್ಪಿತ್ತು. ಯದುವೀರ್ ಅಚ್ಚರಿ ಅಭ್ಯರ್ಥಿಯಾಗಿ ಎಂಟ್ರಿ ಕೊಟ್ಟಿದ್ರು. ಇದೇ ವಿಚಾರ 3-4 ದಿನ ಸಾಕಷ್ಟು ಸುದ್ದಿ ಮಾಡಿತ್ತು. ಪ್ರತಾಪ್ ಸಿಂಹಗೆ ಟಿಕೆಟ್ ನೀಡುವಂತೆ ಪ್ರತಿಭಟನೆ ಕೂಡ ನಡೆದಿತ್ತು. ಮಂಗಳವಾರ ಸಚಿವ ವೆಂಕಟೇಶ್ ಮಾತಾಡುವ ವೇಳೆ ಪ್ರತಾಪ್ ಸಿಂಹ ಗೆ ಟಿಕೆಟ್ ತಪ್ಪಿಸಿದ್ದು ದೇವೇಗೌಡ್ರು ಅಂತ ಹೇಳಿಕೆ ಕೊಟ್ಟಿದ್ದು , ಮೈತ್ರಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.
ವೆಂಕಟೇಶ್ ಅವರು ಇಂತಹ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಪ್ರತಾಪ್ ಸಿಂಹ ಕಿಡಿಕಾರಿದರು. ಕಾಂಗ್ರೆಸ್ನವರು ಮೊದಲು ಒಳ್ಳೆಯವರಿಗೆ ಟಿಕೆಟ್ ಕೊಡಲಿ. ನಾಮಪತ್ರ ಸಲ್ಲಿಕೆ ಮಾಡಲು ಇನ್ನು ಒಂದು ದಿನ ಅವಕಾಶ ಇದೆ. ಅಭ್ಯರ್ಥಿ ಬದಲಾಯಿಸಲು ಅವಕಾಶ ಇದೆ, ಅದನ್ನು ಬಳಸಿಕೊಳ್ಳಿ. ಚುನಾವಣೆ ಗೆಲ್ಲಲು ಮೊದಲು ಒಳ್ಳೆಯ ಅಭ್ಯರ್ಥಿ ಇರಬೇಕು. ನಿಮ್ಮ ಅಭ್ಯರ್ಥಿ ಒಕ್ಕಲಿಗ ಪ್ರಮಾಣ ಪತ್ರ ಹಿಡಿದುಕೊಂಡು ಬಂದಿದ್ದಾನೆ, ಆತ ಹಿಡಿದುಕೊಂಡು ಬಂದಿರುವ ಆ ಪ್ರಮಾಣ ಪತ್ರ ಯಾವುದು? ಹಿಂದೆ ಕೆಎಸ್ಒಯುನಲ್ಲಿ ಸಿಗುತ್ತಿತ್ತಲ್ಲ ಆ ಪ್ರಮಾಣ ಪತ್ರನಾ? ಎಂದು ಟೀಕಿಸಿದರು.
ಈ ಬಾರಿ ಪ್ರತಾಪ್ ಸಿಂಹಗೆ ಕೊನೆ ಹಂತದಲ್ಲಿ ಟಿಕೆಟ್ ಕೈತಪ್ಪಿತ್ತು. ಯದುವೀರ್ ಅಚ್ಚರಿ ಅಭ್ಯರ್ಥಿಯಾಗಿ ಎಂಟ್ರಿ ಕೊಟ್ಟಿದ್ರು. ಇದೇ ವಿಚಾರ 3-4 ದಿನ ಸಾಕಷ್ಟು ಸುದ್ದಿ ಮಾಡಿತ್ತು. ಪ್ರತಾಪ್ ಸಿಂಹಗೆ ಟಿಕೆಟ್ ನೀಡುವಂತೆ ಪ್ರತಿಭಟನೆ ಕೂಡ ನಡೆದಿತ್ತು. ಮಂಗಳವಾರ ಸಚಿವ ವೆಂಕಟೇಶ್ ಮಾತಾಡುವ ವೇಳೆ ಪ್ರತಾಪ್ ಸಿಂಹ ಗೆ ಟಿಕೆಟ್ ತಪ್ಪಿಸಿದ್ದು ದೇವೇಗೌಡ್ರು ಅಂತ ಹೇಳಿಕೆ ಕೊಟ್ಟಿದ್ದು , ಮೈತ್ರಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.