ಪ್ರಧಾನಿ ಮೋದಿ ಐಷಾರಾಮಿ ಫ್ಲೈಟ್ನಲ್ಲಿ ತಿರುಗಾಡೋಲ್ವಾ? ಬಿಜೆಪಿಯವರು ಮೊದಲು ಅದಕ್ಕೆ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ
1117 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮಹದಾಯಿ, ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆಯ ಬಗ್ಗೆ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಲಾಗಿದೆ. ಬರಗಾಲದ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದರು.
''ಲೋಕಸಭೆ, ರಾಜ್ಯಸಭಾ ಸದಸ್ಯರನ್ನು ಇಷ್ಟು ದೊಡ್ಡ ಮಟ್ಟದಲ್ಲಿ ಅಮಾನತು ಮಾಡಿರುವುದು ಇದೇ ಮೊದಲು. ಇದು ಪ್ರಜಾಪ್ರಭುತ್ವದ ಕೊಲೆಯಾಗಿದೆ. ಇದೊಂದು ಸರ್ವಾಧಿಕಾರಿ ಧೋರಣೆಯಾಗಿದೆ. ಎಲ್ಲ ಸದಸ್ಯರನ್ನೂ ಹೊರಗಿಟ್ಟು ಕಾನೂನುಗಳಿಗೆ ತಿದ್ದುಪಡಿ ಮಾಡಲಾಗಿದೆ. ವಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳಲ್ಲ ಅಂದರೆ ಅರ್ಥ ಏನು?'' ಎಂದು ಕೇಂದ್ರ ಸರಕಾರದ ವಿರುದ್ಧ ಟೀಕಿಸಿದರು.
ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳ ಮೇಲೆ ನಿಯಂತ್ರಣ ಹೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ''ಜನರು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಹಾಕಿಕೊಳ್ಳಬೇಕು, ನಿರ್ಬಂಧದ ಅವಶ್ಯಕತೆ ಇಲ್ಲ'' ಎಂದು ಹೇಳಿದರು.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಬಳಿಕ ಬೆಂಗಳೂರಿಗೆ ವಾಪಸ್ ಆಗುವ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಖಾಸಗಿ ವಿಶೇಷ ವಿಮಾನದಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿರುವುದು, ಸಚಿವರು ಹಾಗೂ ಮುಖ್ಯಮಂತ್ರಿ ವಿಶೇಷ ವಿಮಾನದಲ್ಲಿ ಪ್ರಯಾಣಿಸಿರುವ ಬಗ್ಗೆ ಬಿಜೆಪಿ ಟೀಕಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ''ಪ್ರಧಾನಿ ನರೇಂದ್ರ ಮೋದಿ ಅವರು ಯಾವುದರಲ್ಲಿ ತಿರುಗಾಡುತ್ತಾರೆ. ಅದನ್ನು ಮೊದಲು ಬಿಜೆಪಿಗೆ ಕೇಳಿ'' ಎಂದರು.
''ಲೋಕಸಭೆ, ರಾಜ್ಯಸಭಾ ಸದಸ್ಯರನ್ನು ಇಷ್ಟು ದೊಡ್ಡ ಮಟ್ಟದಲ್ಲಿ ಅಮಾನತು ಮಾಡಿರುವುದು ಇದೇ ಮೊದಲು. ಇದು ಪ್ರಜಾಪ್ರಭುತ್ವದ ಕೊಲೆಯಾಗಿದೆ. ಇದೊಂದು ಸರ್ವಾಧಿಕಾರಿ ಧೋರಣೆಯಾಗಿದೆ. ಎಲ್ಲ ಸದಸ್ಯರನ್ನೂ ಹೊರಗಿಟ್ಟು ಕಾನೂನುಗಳಿಗೆ ತಿದ್ದುಪಡಿ ಮಾಡಲಾಗಿದೆ. ವಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳಲ್ಲ ಅಂದರೆ ಅರ್ಥ ಏನು?'' ಎಂದು ಕೇಂದ್ರ ಸರಕಾರದ ವಿರುದ್ಧ ಟೀಕಿಸಿದರು.
ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳ ಮೇಲೆ ನಿಯಂತ್ರಣ ಹೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ''ಜನರು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಹಾಕಿಕೊಳ್ಳಬೇಕು, ನಿರ್ಬಂಧದ ಅವಶ್ಯಕತೆ ಇಲ್ಲ'' ಎಂದು ಹೇಳಿದರು.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಬಳಿಕ ಬೆಂಗಳೂರಿಗೆ ವಾಪಸ್ ಆಗುವ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಖಾಸಗಿ ವಿಶೇಷ ವಿಮಾನದಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿರುವುದು, ಸಚಿವರು ಹಾಗೂ ಮುಖ್ಯಮಂತ್ರಿ ವಿಶೇಷ ವಿಮಾನದಲ್ಲಿ ಪ್ರಯಾಣಿಸಿರುವ ಬಗ್ಗೆ ಬಿಜೆಪಿ ಟೀಕಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ''ಪ್ರಧಾನಿ ನರೇಂದ್ರ ಮೋದಿ ಅವರು ಯಾವುದರಲ್ಲಿ ತಿರುಗಾಡುತ್ತಾರೆ. ಅದನ್ನು ಮೊದಲು ಬಿಜೆಪಿಗೆ ಕೇಳಿ'' ಎಂದರು.