ಹಾಸನಕ್ಕೆ ಹೋಗುತ್ತೇನೆ; ಪ್ರಜ್ವಲ್ ರೇವಣ್ಣನನ್ನು ಸೋಲಿಸಿಯೇ ಸೋಲಿಸುತ್ತೇನೆ; ಸಿದ್ದರಾಮಯ್ಯ ಶಪಥ
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿ
ಮೈಸೂರು: ನನಗೆ ಆತಂಕ ಇದ್ದರೆ ತಾನೇ ಟೆನ್ಷನ್ ಆಗೋದು, ನನಗೆ ಯಾವ ಆತಂಕವೂ ಇಲ್ಲ. ಹೀಗಾಗಿ ನಾನು ಕೂಲ್ ಆಗಿ ಇದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಅವರು, ಅದು ಕೂಡ ನನ್ನ ಆರೋಗ್ಯದ ಗುಟ್ಟು. ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳಿದರು. ಆದರೆ ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವಯಸ್ಸು ಆಗಿ ಬಿಡುತ್ತದೆ. 83 ವಯಸ್ಸು ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತೆ ಇದಕ್ಕೆ ಚುನಾವಣಾ ರಾಜಕಾರಣ ಸಾಕು ಎಂದಿಕೊಂಡಿದ್ದೇನೆ ಎಂದು ಹೇಳಿದರು.
ಮಂಡ್ಯದ ಸ್ಪರ್ಧೆ ದೇವರ ಇಚ್ಚೆ ಎಂದ ಎಚ್.ಡಿ.ಕೆ ಹೇಳಿಕೆಗೆ ಸಿಎಂ ವ್ಯಂಗ್ಯ ಮಾಡಿ, ಮಗನನ್ನ ನಿಲ್ಲಿಸುವಾಗ ಯಾರ ಇಚ್ಚೇ ಇತ್ತು. ಈಗ ದೇವರು ಎಂದರೆ ಆಗ ಯಾರಿದ್ದರು, ಸಿಎಂ ಆಗಿದ್ದಾಗಲೇ ಅವರ ಮಗ ಅಲ್ಲಿ ಸೋತ್ತಿದ್ದಾನೆ. ಈ ಬಾರಿ ಜೆಡಿಎಸ್ ನವರು ಮೂರು ಮೂರರಲ್ಲೂ ಸೋಲುತ್ತಾರೆ. ಕಳೆದ ಬಾರಿ ಮೈಸೂರಿನಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕಿದ್ದು ಯಾವ ಚೂರಿ. ಮೈತ್ರಿ ಧರ್ಮ ಎಂದರೆ ಎಲ್ಲಾ ಕ್ಷೇತ್ರಕ್ಕೂ ಒಂದೇ. ಮೈಸೂರಿನಲ್ಲಿ ಚೂರಿ ಹಾಕಿ ಈಗ ಮಂಡ್ಯದಲ್ಲಿ ನಮಗೆ ಚೂರಿ ಹಾಕಿದರು ಎಂದರೇ ಅದರಲ್ಲಿ ಯಾವ ನ್ಯಾಯ ಇದೆ ಹೇಳಿ. ಕಳೆದ ಬಾರಿ ನಾನು ಹೋಗಿದ್ದಕ್ಕೆ ಹಾಸನದಲ್ಲಿ ಪ್ರಜ್ವಲ್ ಗೆದಿದ್ದು. ಈ ಬಾರಿಯೂ ಹಾಸನಕ್ಕೆ ಹೋಗುತ್ತೇನೆ. ಪ್ರಜ್ವಲ್ ನನ್ನು ಸೋಲಿಸುತ್ತೇನೆ. ಪ್ರಜ್ವಲ್ ಸೋಲಿಸಲೇ ಬೇಕೆಂದು ನಮ್ಮವರು ಪಣ ತೊಟ್ಟಿದ್ದಾರೆ.
ಪ್ರಜ್ವಲ್ ಸೋಲುತ್ತಾನೆ ಎಂದು ಹೇಳಿದರು.
ವರುಣದಲ್ಲಿ ಭಾವನಾತ್ಮಕವಾಗಿ ಮತ ಕೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದೇನು ಭಾವನಾತ್ಮಕ ಏನು ಅಲ್ಲ. ಹೆಚ್ಚು ಲೀಡ್ ಬೇಕು ಎಂದು ಸ್ವಕ್ಷೇತ್ರದವರನ್ನ ಕೇಳಿದ್ದೇನೆ ಅಷ್ಟೇ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮಗೆ ಬರಿ 9 ಸಾವಿರ ಲೀಡ್ ಬಂದಿತ್ತು. ಈ ಬಾರಿ ಅದನ್ನ 60 ಸಾವಿರ ಮುಟ್ಟಿಸಿ ಎಂದು ಹೇಳಿದ್ದೇನೆ. ಅದಕ್ಕೆ ಬೇರೆ ರೀತಿಯ ವಿಶ್ಲೇಷಣೆ ಏನು ಇಲ್ಲ. ಅದು ನನ್ಮ ಸಹಜವಾದ ಮಾತುಗಳು ಅಷ್ಟೇ. ಮೈಸೂರು ಚಾಮರಾಜನಗರ ಮಾತ್ರವಲ್ಲ 28 ಕ್ಷೇತ್ರ ವಿಚಾರದಲ್ಲೂ ನಾನು ಗಂಭೀರವಾಗಿದ್ದೇನೆ. ಮತ್ತೊಂದು ಬಾರಿ ಈ ಕಡೆ ಭಾಗಕ್ಕೆ ಪ್ರವಾಸಕ್ಕೆ ಬರುತ್ತೇನೆ ಎಂದು ಹೇಳಿದರು.
ಮೈಸೂರಲ್ಲಿ ಮಾತನಾಡಿದ ಅವರು, ಅದು ಕೂಡ ನನ್ನ ಆರೋಗ್ಯದ ಗುಟ್ಟು. ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳಿದರು. ಆದರೆ ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವಯಸ್ಸು ಆಗಿ ಬಿಡುತ್ತದೆ. 83 ವಯಸ್ಸು ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತೆ ಇದಕ್ಕೆ ಚುನಾವಣಾ ರಾಜಕಾರಣ ಸಾಕು ಎಂದಿಕೊಂಡಿದ್ದೇನೆ ಎಂದು ಹೇಳಿದರು.
ಮಂಡ್ಯದ ಸ್ಪರ್ಧೆ ದೇವರ ಇಚ್ಚೆ ಎಂದ ಎಚ್.ಡಿ.ಕೆ ಹೇಳಿಕೆಗೆ ಸಿಎಂ ವ್ಯಂಗ್ಯ ಮಾಡಿ, ಮಗನನ್ನ ನಿಲ್ಲಿಸುವಾಗ ಯಾರ ಇಚ್ಚೇ ಇತ್ತು. ಈಗ ದೇವರು ಎಂದರೆ ಆಗ ಯಾರಿದ್ದರು, ಸಿಎಂ ಆಗಿದ್ದಾಗಲೇ ಅವರ ಮಗ ಅಲ್ಲಿ ಸೋತ್ತಿದ್ದಾನೆ. ಈ ಬಾರಿ ಜೆಡಿಎಸ್ ನವರು ಮೂರು ಮೂರರಲ್ಲೂ ಸೋಲುತ್ತಾರೆ. ಕಳೆದ ಬಾರಿ ಮೈಸೂರಿನಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕಿದ್ದು ಯಾವ ಚೂರಿ. ಮೈತ್ರಿ ಧರ್ಮ ಎಂದರೆ ಎಲ್ಲಾ ಕ್ಷೇತ್ರಕ್ಕೂ ಒಂದೇ. ಮೈಸೂರಿನಲ್ಲಿ ಚೂರಿ ಹಾಕಿ ಈಗ ಮಂಡ್ಯದಲ್ಲಿ ನಮಗೆ ಚೂರಿ ಹಾಕಿದರು ಎಂದರೇ ಅದರಲ್ಲಿ ಯಾವ ನ್ಯಾಯ ಇದೆ ಹೇಳಿ. ಕಳೆದ ಬಾರಿ ನಾನು ಹೋಗಿದ್ದಕ್ಕೆ ಹಾಸನದಲ್ಲಿ ಪ್ರಜ್ವಲ್ ಗೆದಿದ್ದು. ಈ ಬಾರಿಯೂ ಹಾಸನಕ್ಕೆ ಹೋಗುತ್ತೇನೆ. ಪ್ರಜ್ವಲ್ ನನ್ನು ಸೋಲಿಸುತ್ತೇನೆ. ಪ್ರಜ್ವಲ್ ಸೋಲಿಸಲೇ ಬೇಕೆಂದು ನಮ್ಮವರು ಪಣ ತೊಟ್ಟಿದ್ದಾರೆ.
ಪ್ರಜ್ವಲ್ ಸೋಲುತ್ತಾನೆ ಎಂದು ಹೇಳಿದರು.
ವರುಣದಲ್ಲಿ ಭಾವನಾತ್ಮಕವಾಗಿ ಮತ ಕೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದೇನು ಭಾವನಾತ್ಮಕ ಏನು ಅಲ್ಲ. ಹೆಚ್ಚು ಲೀಡ್ ಬೇಕು ಎಂದು ಸ್ವಕ್ಷೇತ್ರದವರನ್ನ ಕೇಳಿದ್ದೇನೆ ಅಷ್ಟೇ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮಗೆ ಬರಿ 9 ಸಾವಿರ ಲೀಡ್ ಬಂದಿತ್ತು. ಈ ಬಾರಿ ಅದನ್ನ 60 ಸಾವಿರ ಮುಟ್ಟಿಸಿ ಎಂದು ಹೇಳಿದ್ದೇನೆ. ಅದಕ್ಕೆ ಬೇರೆ ರೀತಿಯ ವಿಶ್ಲೇಷಣೆ ಏನು ಇಲ್ಲ. ಅದು ನನ್ಮ ಸಹಜವಾದ ಮಾತುಗಳು ಅಷ್ಟೇ. ಮೈಸೂರು ಚಾಮರಾಜನಗರ ಮಾತ್ರವಲ್ಲ 28 ಕ್ಷೇತ್ರ ವಿಚಾರದಲ್ಲೂ ನಾನು ಗಂಭೀರವಾಗಿದ್ದೇನೆ. ಮತ್ತೊಂದು ಬಾರಿ ಈ ಕಡೆ ಭಾಗಕ್ಕೆ ಪ್ರವಾಸಕ್ಕೆ ಬರುತ್ತೇನೆ ಎಂದು ಹೇಳಿದರು.