'ನಮ್ಮಪ್ಪನ ಹೆಸರು ಸಿದ್ದರಾಮೇಗೌಡ, ತಮ್ಮಂದಿರ ಹೆಸರು ರಾಮೇಗೌಡ, ಸಿದ್ದೇಗೌಡ,..' ನಾವು ಹಿಂದೂಗಳಲ್ವಾ?; ಸಿಎಂ ಸಿದ್ದರಾಮಯ್ಯ
1327 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರಿಸಿದ್ದಾರೆ . ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರಕ್ಕೆ ಕೇಸರಿಪಾಳಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಯೋಧ್ಯೆಯಲ್ಲಿ ಸೀತೆಯಿಂದ ಶ್ರೀರಾಮನನ್ನು ಬಿಜೆಪಿ ದೂರ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಪಿರಿಯಾಪಟ್ಟಣದ ಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ''ಬಿಜೆಪಿಯವರು ಜನರನ್ನು ಮರಳು ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಅವರು ಅಧಿಕಾರ ಹಿಡಿದು ಕುಳಿತಿದ್ದಾರೆ. ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ, ವ್ರತ ಮಾಡುತ್ತಾರಂತೆ. ನಾವು ರಾಮನ ಪೂಜೆ ಮಾಡಲ್ವಾ..? ರಾಮನ ಭಜನೆ ಮಾಡಲ್ವಾ..? ಧನುರ್ ಮಾಸದಲ್ಲಿ ನಾನೂ ಬೆಳಗ್ಗೆ ಎದ್ದು ದೇವಸ್ಥಾನಕ್ಕೆ ಹೋಗಿ ರಾಮನ ಭಜನೆ ಹಾಡುತ್ತಿದ್ದೆ. ಮೊನ್ನೆ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದೆ. ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿಸಿದೆ. ನನ್ನ ಹೆಸರು ಸಿದ್ದರಾಮಯ್ಯ.. ನನ್ನ ಹೆಸರಲ್ಲೇ ರಾಮ ಇದ್ದಾನೆ. ನಮ್ಮಪ್ಪನ ಹೆಸರು ಸಿದ್ದರಾಮೇಗೌಡ, ತಮ್ಮಂದಿರ ಹೆಸರು ರಾಮೇಗೌಡ, ಸಿದ್ದೇಗೌಡ, ಸಿದ್ದರಾಮೇಗೌಡ.. ನಾವ್ಯಾರೂ ಹಿಂದೂಗಳು ಅಲ್ವಾ..?'' ಎಂದು ಪ್ರಶ್ನೆ ಮಾಡಿದರು.
''ಬಿಜೆಪಿಯವರು ಭಾವನೆಗಳ ಮೇಲೆ ಚುನಾವಣೆಯಲ್ಲಿ ಮತ ಕೇಳುತ್ತಾರೆ. ಅವರನ್ನು ನಂಬಬೇಡಿ. ಬಿಜೆಪಿಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಿಲ್ಲ. ಕಾಂಗ್ರೆಸ್ ನವರು ಕೊಟ್ಟ ಮಾತಿನಂತೆ ನಡೆಯುತ್ತೇವೆ. ರಾಜ್ಯದ 213 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಜನರು ಕಷ್ಟಕ್ಕೆ ಸಿಲುಕಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡಿದ್ದೇವೆ. ಕೇಂದ್ರ ಬರ ಅಧ್ಯಯನ ತಂಡದವರು ಸಮೀಕ್ಷೆ ಮಾಡಿಕೊಂಡು ಹೋದ್ರು. ಆದ್ರೆ, ಇದುವರೆಗೂ ರಾಜ್ಯಕ್ಕೆ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾರನ್ನು ಭೇಟಿ ಮಾಡಿ ಮನವಿ ಮಾಡಿದೆ. ಡಿ.23ಕ್ಕೆ ಸಭೆ ನಡೆಸುತ್ತೇವೆ ಅಂದ್ರು, ಈಗ ಜ.23 ಬಂದ್ರೂ ಸಭೆ ನಡೆಸಿಲ್ಲ. ಬಿಜೆಪಿಯವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದೆಯಾ..? ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತಾಡಿದ್ದೇ ಮಾತಾಡಿದ್ದು. ಮೈಸೂರಿಗೆ ಅದು ತಂದೇ ಇದು ತಂದೇ ಅನ್ನುತ್ತಾನೆ. ಏನಪ್ಪಾ ಮಾಡ್ತಾ ಇದ್ದೀಯಾ ಪ್ರತಾಪ್ ಸಿಂಹ ನೀನು..? ಎಂದರು.
ಪಿರಿಯಾಪಟ್ಟಣದ ಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ''ಬಿಜೆಪಿಯವರು ಜನರನ್ನು ಮರಳು ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಅವರು ಅಧಿಕಾರ ಹಿಡಿದು ಕುಳಿತಿದ್ದಾರೆ. ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ, ವ್ರತ ಮಾಡುತ್ತಾರಂತೆ. ನಾವು ರಾಮನ ಪೂಜೆ ಮಾಡಲ್ವಾ..? ರಾಮನ ಭಜನೆ ಮಾಡಲ್ವಾ..? ಧನುರ್ ಮಾಸದಲ್ಲಿ ನಾನೂ ಬೆಳಗ್ಗೆ ಎದ್ದು ದೇವಸ್ಥಾನಕ್ಕೆ ಹೋಗಿ ರಾಮನ ಭಜನೆ ಹಾಡುತ್ತಿದ್ದೆ. ಮೊನ್ನೆ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದೆ. ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿಸಿದೆ. ನನ್ನ ಹೆಸರು ಸಿದ್ದರಾಮಯ್ಯ.. ನನ್ನ ಹೆಸರಲ್ಲೇ ರಾಮ ಇದ್ದಾನೆ. ನಮ್ಮಪ್ಪನ ಹೆಸರು ಸಿದ್ದರಾಮೇಗೌಡ, ತಮ್ಮಂದಿರ ಹೆಸರು ರಾಮೇಗೌಡ, ಸಿದ್ದೇಗೌಡ, ಸಿದ್ದರಾಮೇಗೌಡ.. ನಾವ್ಯಾರೂ ಹಿಂದೂಗಳು ಅಲ್ವಾ..?'' ಎಂದು ಪ್ರಶ್ನೆ ಮಾಡಿದರು.
''ಬಿಜೆಪಿಯವರು ಭಾವನೆಗಳ ಮೇಲೆ ಚುನಾವಣೆಯಲ್ಲಿ ಮತ ಕೇಳುತ್ತಾರೆ. ಅವರನ್ನು ನಂಬಬೇಡಿ. ಬಿಜೆಪಿಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಿಲ್ಲ. ಕಾಂಗ್ರೆಸ್ ನವರು ಕೊಟ್ಟ ಮಾತಿನಂತೆ ನಡೆಯುತ್ತೇವೆ. ರಾಜ್ಯದ 213 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಜನರು ಕಷ್ಟಕ್ಕೆ ಸಿಲುಕಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡಿದ್ದೇವೆ. ಕೇಂದ್ರ ಬರ ಅಧ್ಯಯನ ತಂಡದವರು ಸಮೀಕ್ಷೆ ಮಾಡಿಕೊಂಡು ಹೋದ್ರು. ಆದ್ರೆ, ಇದುವರೆಗೂ ರಾಜ್ಯಕ್ಕೆ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾರನ್ನು ಭೇಟಿ ಮಾಡಿ ಮನವಿ ಮಾಡಿದೆ. ಡಿ.23ಕ್ಕೆ ಸಭೆ ನಡೆಸುತ್ತೇವೆ ಅಂದ್ರು, ಈಗ ಜ.23 ಬಂದ್ರೂ ಸಭೆ ನಡೆಸಿಲ್ಲ. ಬಿಜೆಪಿಯವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದೆಯಾ..? ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತಾಡಿದ್ದೇ ಮಾತಾಡಿದ್ದು. ಮೈಸೂರಿಗೆ ಅದು ತಂದೇ ಇದು ತಂದೇ ಅನ್ನುತ್ತಾನೆ. ಏನಪ್ಪಾ ಮಾಡ್ತಾ ಇದ್ದೀಯಾ ಪ್ರತಾಪ್ ಸಿಂಹ ನೀನು..? ಎಂದರು.