ಪ್ರತಾಪ್ ಸಿಂಹ ನಿಮ್ಮ ಕೊಡುಗೆ ಏನು, ಸೋಮಣ್ಣನ ಬಲಿ ಕಾ ಬಕ್ರಾ ಮಾಡಿದ್ರಿ: ಎಂ ಲಕ್ಷ್ಮಣ್
1092 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಾಗ್ದಾಳಿ ಮುಂದುವರೆಸಿದ್ದಾರೆ. ಸಂಸದ ಪ್ರತಾಪ್ ಸಿಂಹ 2014ರಲ್ಲಿ ನೀವು ನೀಡಿದ ಭರವಸೆಗಳು ಏನಾದವೂ? ಜೂನ್ 1ಕ್ಕೆ ನಿಮ್ಮ ಕಚೇರಿಗೆ ಬರುತ್ತೇನೆ. ಈ ಭರವಸೆಗಳಿಗೆ ಉತ್ತರ ಕೊಡಲೇಬೇಕು. ಬೆಂಕಿ ಹಚ್ಚುವುದು ಬಿಟ್ಟರೆ ಮೈಸೂರಿಗೆ ನಿಮ್ಮ ಕೊಡುಗೆ ಏನು? ಎಂದು ಲಕ್ಷ್ಮಣ್ ಪ್ರಶ್ನೆ ಮಾಡಿದ್ರು. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ವಿ.ಸೋಮಣ್ಣ ಅವರನ್ನು ಬಲಿಕಾ ಬಕ್ರಾ ಮಾಡಿದಿರಿ. ಆ ಸಮುದಾಯವು ಈಗಲಾದರೂ ಅರ್ಥ ಮಾಡಿಕೊಳ್ಳಬೇಕು. ಲಿಂಗಾಯತ ನಾಯಕರನ್ನು ಸೈಡ್ ಲೈನ್ ಮಾಡಿದ್ದೆ ಪ್ರತಾಪ್ ಸಿಂಹ ಸಾಧನೆ ಅಂತ ಕಿಡಿಕಾರಿದರು.
ಸಂಸದ ಪ್ರತಾಪಸಿಂಹ ಚುನಾವಣೆ ವೇಳೆ ಎಲ್ಲಿ ಹೋಗಿದ್ದರು? ವರುಣದಲ್ಲಿ ತೊಡೆ ತಟ್ಟಿಕೊಂಡು ಬೆಂಕಿ ಹಚ್ಚಲು ಹೋಗಿದ್ದರು. ನಿಮ್ಮ ಜಿಲ್ಲೆಯ 8 ಕ್ಷೇತ್ರದ ಕಥೆ ಏನು ಆಯ್ತು? ಕ್ಷೇತ್ರಗಳಿಗೆ ಹೋದರೆ ಸಂಸದ ಪ್ರತಾಪ್ ಸಿಂಹಗೆ ಕಲ್ಲು ಹೊಡೆಯುತ್ತಾರೆ. ಓಡಿಸಿಕೊಂಡು ಬಂದು ಕಲ್ಲು ಹೊಡೆಯುತ್ತಾರೆ. ನಿಮಗೆ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಸಂಸದ ಪ್ರತಾಪಸಿಂಹ ಚುನಾವಣೆ ವೇಳೆ ಎಲ್ಲಿ ಹೋಗಿದ್ದರು? ವರುಣದಲ್ಲಿ ತೊಡೆ ತಟ್ಟಿಕೊಂಡು ಬೆಂಕಿ ಹಚ್ಚಲು ಹೋಗಿದ್ದರು. ನಿಮ್ಮ ಜಿಲ್ಲೆಯ 8 ಕ್ಷೇತ್ರದ ಕಥೆ ಏನು ಆಯ್ತು? ಕ್ಷೇತ್ರಗಳಿಗೆ ಹೋದರೆ ಸಂಸದ ಪ್ರತಾಪ್ ಸಿಂಹಗೆ ಕಲ್ಲು ಹೊಡೆಯುತ್ತಾರೆ. ಓಡಿಸಿಕೊಂಡು ಬಂದು ಕಲ್ಲು ಹೊಡೆಯುತ್ತಾರೆ. ನಿಮಗೆ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಎಚ್ಚರಿಕೆ ನೀಡಿದರು.