ಮೈಸೂರಿನಲ್ಲಿ ಬ್ಯಾಂಕ್ ಬಸಪ್ಪನಿಂದ ಇಂದಿರಾ ಕ್ಯಾಂಟೀನ್ನಲ್ಲಿ ಹೋಳಿಗೆ ಊಟ!
1045 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಲು ಕ್ಷಣಗಣನೆ ಆರಂಭವಾಗಿದೆ. ಶನಿವಾರ ಪದಗ್ರಹಣ ಸಮಾರಂಭ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ ಸಂಭ್ರಮ ಮನೆಮಾಡಿದ್ದು, ಅಪರೂಪದ ಕ್ಷಣವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆ, ಮೈಸೂರಿನ ಇಂದಿರಾ ಕ್ಯಾಂಟಿನ್ನಲ್ಲಿ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಯ್ತು. ಮೈಸೂರು ಕಾಡಾ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ನಲ್ಲಿ ಅಭಿಮಾನಿಗಳು ಉಚಿತ ಹೋಳಿಗೆ ಊಟ ವಿತರಣೆ ಮಾಡಿದ್ರು .ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಅವರಿಂದ ಹೋಳಿಗೆ ಊಟ ವಿತರಣೆ ಮಾಡಲಾಯ್ತು.