Mysuru School: ಮೈಸೂರಿನ ಗಂಗಡಹೊಸಹಳ್ಳಿಯ ಶಾಲಾ ಕಟ್ಟಡ ಶಿಥಿಲ; ಜೀವಭಯದಲ್ಲಿ ವಿದ್ಯಾರ್ಥಿಗಳು
1003 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ಒಂದು ಕಡೆ ಯಾವಾಗ ಬೀಳುತ್ತೋ ಎಂಬಂತೆ ಇರುವ ಶಾಲೆ.. ಮತ್ತೊಂದು ಕಡೆ ಶಾಲೆಯ ದುರಸ್ಥಿಗೆ ಆಗ್ರಹಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ.. ಈ ದೃಶ್ಯಗಳು ಕಂಡುಬಂದಿದ್ದರು ಮೈಸೂರು ಜಿಲ್ಲೆಯ ಎಚ್ಡಿ ಕೋಟೆ ತಾಲೂಕಿನ ಗಂಗಡಹೊಸಹಳ್ಳಿ ಗ್ರಾಮದಲ್ಲಿ.. ಹೌದು, ಶಾಲೆಯ ಕಟ್ಟಡದ ಪರಿಸ್ಥಿತಿಯನ್ನು ನೋಡಿದರೆ ಈ ಶಾಲೆಗೆ ಮಕ್ಕಳು ವಾಪಸ್ ಬರ್ತಾರಾ ಎಂಬ ಆತಂಕ ನಿಮ್ಮನ್ನು ಕಾಡದಿರದು.
ಶಿಥಿಲಾವಸ್ಥೆ ತಲುಪಿರುವ ಶಾಲಾ ಕಟ್ಟಡದಲ್ಲಿ ಜೀವ ಭಯದಲ್ಲೇ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಒಟ್ಟು 7 ಕೊಠಡಿಗಳಿರುವ ಗಂಗಡಹೊಸಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಿತಿ ಅಯೋಮಯವಾಗಿದೆ. 7 ಕೊಠಡಿಗಳ ಪೈಕಿ 5 ಕೊಠಡಿಗಳು ಶಿಥಿಲಾವಸ್ಥೆ ತಲುಪಿದೆ. ಕೇವಲ ಎರಡು ಕೊಠಡಿಗಳಲ್ಲಿ ಕುಳಿತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಾವಕಾಶದ ಕೊರತೆಯಿಂದ ಶಾಲೆಯ ಹೊರ ಆವರಣದಲ್ಲೂ ಕುಳಿತು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ.
1 ರಿಂದ 7 ನೇ ತರಗತಿಯವರೆಗೆ ಒಟ್ಟು 111 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಾಲೆಯಲ್ಲಿ ಮೂಲಸೌಕರ್ಯದ ಕೊರತೆ ಎದ್ದು ಕಾಣ್ತಿದೆ. 111 ವಿದ್ಯಾರ್ಥಿಗಳಿಗೆ ಐವರು ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಶಿಕ್ಷಕರ ಕೊರತೆಯನ್ನೂ ಎದುರಿಸುತ್ತಿರುವ ಶಾಲೆ ಬಗ್ಗೆ ಜನಪ್ರತಿನಿಧಿಗಳು ತಲೆ ಕೆಡಿಸಿಕೊಳ್ತಿಲ್ಲ. ಇದೀಗ ಉಳಿದ ಎರಡು ಕೊಠಡಿಗಳು ಕುಸಿದು ಬೀಳುವ ಆತಂಕ ಎದುರಾಗಿದೆ.
ಈ ಕುರಿತು ಎಚ್ಡಿ ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಶಾಸಕರು, ಸರ್ಕಾರ ಇತ್ತ ಗಮನ ನೀಡಿ ಶಾಲಾ ಕಟ್ಟಡದ ದುರಸ್ತಿಗೆ ಮುಂದಾಗಬೇಕಿದೆ ಅನ್ನೋದು ಸ್ಥಳೀಯರ ಒತ್ತಾಯವಾಗಿದ್ದು, ಪ್ರತಿಭಟನೆಯ ಹಾದಿ ತುಳಿದಿದ್ದಾರೆ.
ಶಿಥಿಲಾವಸ್ಥೆ ತಲುಪಿರುವ ಶಾಲಾ ಕಟ್ಟಡದಲ್ಲಿ ಜೀವ ಭಯದಲ್ಲೇ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಒಟ್ಟು 7 ಕೊಠಡಿಗಳಿರುವ ಗಂಗಡಹೊಸಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಿತಿ ಅಯೋಮಯವಾಗಿದೆ. 7 ಕೊಠಡಿಗಳ ಪೈಕಿ 5 ಕೊಠಡಿಗಳು ಶಿಥಿಲಾವಸ್ಥೆ ತಲುಪಿದೆ. ಕೇವಲ ಎರಡು ಕೊಠಡಿಗಳಲ್ಲಿ ಕುಳಿತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಾವಕಾಶದ ಕೊರತೆಯಿಂದ ಶಾಲೆಯ ಹೊರ ಆವರಣದಲ್ಲೂ ಕುಳಿತು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ.
1 ರಿಂದ 7 ನೇ ತರಗತಿಯವರೆಗೆ ಒಟ್ಟು 111 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಾಲೆಯಲ್ಲಿ ಮೂಲಸೌಕರ್ಯದ ಕೊರತೆ ಎದ್ದು ಕಾಣ್ತಿದೆ. 111 ವಿದ್ಯಾರ್ಥಿಗಳಿಗೆ ಐವರು ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಶಿಕ್ಷಕರ ಕೊರತೆಯನ್ನೂ ಎದುರಿಸುತ್ತಿರುವ ಶಾಲೆ ಬಗ್ಗೆ ಜನಪ್ರತಿನಿಧಿಗಳು ತಲೆ ಕೆಡಿಸಿಕೊಳ್ತಿಲ್ಲ. ಇದೀಗ ಉಳಿದ ಎರಡು ಕೊಠಡಿಗಳು ಕುಸಿದು ಬೀಳುವ ಆತಂಕ ಎದುರಾಗಿದೆ.
ಈ ಕುರಿತು ಎಚ್ಡಿ ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಶಾಸಕರು, ಸರ್ಕಾರ ಇತ್ತ ಗಮನ ನೀಡಿ ಶಾಲಾ ಕಟ್ಟಡದ ದುರಸ್ತಿಗೆ ಮುಂದಾಗಬೇಕಿದೆ ಅನ್ನೋದು ಸ್ಥಳೀಯರ ಒತ್ತಾಯವಾಗಿದ್ದು, ಪ್ರತಿಭಟನೆಯ ಹಾದಿ ತುಳಿದಿದ್ದಾರೆ.