ಮುಂದಿನ ಲೋಕಸಭಾ ಎಲೆಕ್ಷನ್ನಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ ; ಎಚ್ಡಿಕೆ
1107 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ಮುಂದಿನ ಲೋಕಸಭಾ ಎಲೆಕ್ಷನ್ನಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ. ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಅಂತ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೂ ಮೈತ್ರಿಗೆ ಮುಂದೆ ಬಂದಿಲ್ಲ. ಯಾರೂ ಮುಂದೆ ಬಾರದೆ ಇದ್ದಾಗ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳೋದು?, ನಮ್ಮ ಪಕ್ಷದ ಸಂಘಟನೆಗೆ ವಿಶೇಷ ಒತ್ತು ನೀಡಬೇಕಿದೆ. ಇದಕ್ಕಾಗಿ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಮಾಡಿದ್ದೇವೆ ಎಂದು ಹೇಳಿದರು.
ಜಿಟಿ ದೇವೇಗೌಡರ ನೇತೃತ್ವದಲ್ಲಿ ನಾಲ್ಕು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಬೇಕಿದೆ. ಇದರ ಜತೆಗೆ ಲೋಕಸಭೆ ಚುನಾವಣೆಯೂ ಬರುತ್ತಿದೆ. ರಾಜಕೀಯ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅಂತ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕೊಟ್ಟರು.
ಹಿಂದೆ ನಮ್ಮ ನೀರು ನಮ್ಮ ಹಕ್ಕು ಅಂತಿದ್ದವರು. ಈಗ ನಮ್ಮ ನೀರು ತಮಿಳುನಾಡು ಹಕ್ಕು ಅನ್ನುತ್ತಿದ್ದಾರೆ. ಅಧಿಕಾರಕ್ಕೆ ಬರೋದಕ್ಕೂ ಮುಂಚೆ ಮೇಕೆದಾಟು ಹೋರಾಟ ಮಾಡಿದ್ದರು. ನೀರಿಗಾಗಿ ಹೋರಾಟ ಮಾಡಿದ್ದವರು ಈಗ ಏನು ಮಾಡುತ್ತಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ನಮ್ಮವರು ವಾದವನ್ನೇ ಮಾಡಿಲ್ಲ. ನನಗೆ ಒಂದು ಬಾರಿ ಪೆನ್ ಕೊಡಿ ಅಂತ ಕೇಳಿದ್ದು ಇದಕ್ಕ?, ಸರ್ಕಾರ ನಡೆಸುವವರಿಗೆ ರೈತರು, ಕುಡಿಯುವ ನೀರಿನ ಬಗ್ಗೆ ಸರಿಯಾದ ಮಾಹಿತಿ ಇರಬೇಕಿತ್ತು. ಬೆಂಗಳೂರಿಗೂ ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ. ನಮ್ಮ ಬೆಳೆಗೇ ನೀರಿಲ್ಲದೇ ಇದ್ದರೂ ತಮಿಳುನಾಡಿಗೆ ನೀರು ಹರಿಯುತ್ತಿದೆ ಎಂದ ಹೇಳಿದರು.
ಜಿಟಿ ದೇವೇಗೌಡರ ನೇತೃತ್ವದಲ್ಲಿ ನಾಲ್ಕು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಬೇಕಿದೆ. ಇದರ ಜತೆಗೆ ಲೋಕಸಭೆ ಚುನಾವಣೆಯೂ ಬರುತ್ತಿದೆ. ರಾಜಕೀಯ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅಂತ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕೊಟ್ಟರು.
ಹಿಂದೆ ನಮ್ಮ ನೀರು ನಮ್ಮ ಹಕ್ಕು ಅಂತಿದ್ದವರು. ಈಗ ನಮ್ಮ ನೀರು ತಮಿಳುನಾಡು ಹಕ್ಕು ಅನ್ನುತ್ತಿದ್ದಾರೆ. ಅಧಿಕಾರಕ್ಕೆ ಬರೋದಕ್ಕೂ ಮುಂಚೆ ಮೇಕೆದಾಟು ಹೋರಾಟ ಮಾಡಿದ್ದರು. ನೀರಿಗಾಗಿ ಹೋರಾಟ ಮಾಡಿದ್ದವರು ಈಗ ಏನು ಮಾಡುತ್ತಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ನಮ್ಮವರು ವಾದವನ್ನೇ ಮಾಡಿಲ್ಲ. ನನಗೆ ಒಂದು ಬಾರಿ ಪೆನ್ ಕೊಡಿ ಅಂತ ಕೇಳಿದ್ದು ಇದಕ್ಕ?, ಸರ್ಕಾರ ನಡೆಸುವವರಿಗೆ ರೈತರು, ಕುಡಿಯುವ ನೀರಿನ ಬಗ್ಗೆ ಸರಿಯಾದ ಮಾಹಿತಿ ಇರಬೇಕಿತ್ತು. ಬೆಂಗಳೂರಿಗೂ ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ. ನಮ್ಮ ಬೆಳೆಗೇ ನೀರಿಲ್ಲದೇ ಇದ್ದರೂ ತಮಿಳುನಾಡಿಗೆ ನೀರು ಹರಿಯುತ್ತಿದೆ ಎಂದ ಹೇಳಿದರು.