ಕೆಎಸ್ಆರ್ಟಿಸಿ ಉದ್ಯೋಗಿ ಆತ್ಮಹತ್ಯೆ ಯತ್ನ ಕೇಸ್ ; ಸಚಿವ ಚಲುವರಾಯಸ್ವಾಮಿ ವಜಾ ಮಾಡುವಂತೆ ಎಚ್ಡಿಕೆ ಆಗ್ರಹ
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿ
ಮೈಸೂರು: ನಾಗಮಂಗಲದಲ್ಲಿ ಕೆಎಸ್ಆರ್ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಕುಮಾರಸ್ವಾಮಿ ಫುಲ್ ಗರಂ ಆಗಿದ್ದಾರೆ. ಪ್ರಕರಣ ಸಂಬಂಧ ಸಚಿವ ಎನ್ ಚಲುವರಾಯಸ್ವಾಮಿ ವಜಾಗೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸರ್ಕಾರ ಬಂದು ಒಂದು ತಿಂಗಳಾಗುವಷ್ಟರಲ್ಲೇ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಕೂಡಲೇ ಸಚಿವ ಚಲುವರಾಯಸ್ವಾಮಿಯನ್ನು ವಜಾ ಮಾಡಿ, ಪ್ರಕರಣದ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಮಂತ್ರಿಗಳು ಹದ್ದುಬಸ್ತಿನಲ್ಲಿ ಕೆಲಸ ಮಾಡುವಂತೆ ಮಾಡಿ. ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಒಂದು ವರ್ಗಾವಣೆ ಮಾಡಿಲ್ಲ. ರಾಜ್ಯದಲ್ಲಿ ಎಲ್ಲಾ ಕಡೆ ದ್ವೆಷದ ರಾಜಕಾರಣ ಶುರುವಾಗಿಬಿಟ್ಟಿದೆ. ಕಾಂಗ್ರೆಸ್ ಶಾಸಕರ ಹಣೆ ಬರಹ ಏನಾಗಿದೆ ಅಂತಲೂ ಗೊತ್ತು. ಹಣ ಕೊಡದಿದ್ದರೇ ಅವರ ಕೆಲಸವೂ ಆಗುತ್ತಿಲ್ಲ. ದುಡ್ಡು ಬೇಕಾದರೆ ಮಾಡಿಕೊಳ್ಳಲಿ, ಜೀವದ ಜೊತೆ ಚೆಲ್ಲಾಟವಾಡುವುದು ಬೇಡ, ಸದನದಲ್ಲಿ ಇದೇ ವಿಚಾರ ಇಟ್ಟು ಹೋರಾಟ ಮಾಡುತ್ತೇನೆ ಎಂದು ಕಿಡಿಕಾರಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿರುವ ಜಗದೀಶ್ ಸದ್ಯಕ್ಕೆ ವೆಂಟಿಲೇಟರ್ನಲ್ಲಿ ಇದ್ದಾರೆ. ಸರ್ಕಾರ ಬಂದು ಐವತ್ತು ದಿನ ಆಗಿಲ್ಲ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ. ಆದರೆ ಈ ರೀತಿ ಮಾಡುವುದು ಸರಿಯಲ್ಲ. ಆಗಲೇ ದ್ವೇಷ ರಾಜಕಾರಣ ಆರಂಭಿಸಿದ್ದಾರೆ. ಊರಿನಲ್ಲಿರುವ ರೌಡಿ, ಚೇಲಾ ಮಹದೇವ ಎಂಬಾತ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಈ ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಹೇರಿದ್ದಾನೆ, ಮತ್ತೊಂದೆಡೆ ಜಗದೀಶ್ಗೆ ಅಧಿಕಾರಿಗಳ ಮೂಲಕ ಕಿರುಕುಳ ಕೊಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ಪತ್ರದಲ್ಲಿ ಜಗದೀಶ್ ಅವರು ಇದನ್ನು ಸ್ಪಷ್ಟವಾಗಿ ಬರೆದಿದ್ದಾರೆ. ಸಚಿವರ ಆದೇಶ ಇದೆ, ಒತ್ತಡ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಲಿ, ಮಂತ್ರಿ ಸ್ಥಾನ ಏನು ಶಾಶ್ವತಾನಾ?, ಘಟನೆ ಸಂಬಂಧ ಅಧಿಕಾರಿಗಳನ್ನು ಕೇಳಿದರೆ ಇನ್ನೂ ವ್ಯಕ್ತಿ ಸತ್ತಿಲ್ಲ. ಆ ಕಾರಣಕ್ಕೆ ಎಫ್ ಐ ಆರ್ ಹಾಕಿಲ್ಲ ಅಂತಾರೆ. ಇವರಿಗೆ ಮತ ಹಾಕಿದ್ದು ಜನರ ಜೀವದ ಜೊತೆ ಚೆಲ್ಲಾಟ ಆಡಲು ಅಲ್ಲ ಎಂದು ಕಿಡಿಕಾರಿದರು.
ಸರ್ಕಾರ ಬಂದು ಒಂದು ತಿಂಗಳಾಗುವಷ್ಟರಲ್ಲೇ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಕೂಡಲೇ ಸಚಿವ ಚಲುವರಾಯಸ್ವಾಮಿಯನ್ನು ವಜಾ ಮಾಡಿ, ಪ್ರಕರಣದ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಮಂತ್ರಿಗಳು ಹದ್ದುಬಸ್ತಿನಲ್ಲಿ ಕೆಲಸ ಮಾಡುವಂತೆ ಮಾಡಿ. ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಒಂದು ವರ್ಗಾವಣೆ ಮಾಡಿಲ್ಲ. ರಾಜ್ಯದಲ್ಲಿ ಎಲ್ಲಾ ಕಡೆ ದ್ವೆಷದ ರಾಜಕಾರಣ ಶುರುವಾಗಿಬಿಟ್ಟಿದೆ. ಕಾಂಗ್ರೆಸ್ ಶಾಸಕರ ಹಣೆ ಬರಹ ಏನಾಗಿದೆ ಅಂತಲೂ ಗೊತ್ತು. ಹಣ ಕೊಡದಿದ್ದರೇ ಅವರ ಕೆಲಸವೂ ಆಗುತ್ತಿಲ್ಲ. ದುಡ್ಡು ಬೇಕಾದರೆ ಮಾಡಿಕೊಳ್ಳಲಿ, ಜೀವದ ಜೊತೆ ಚೆಲ್ಲಾಟವಾಡುವುದು ಬೇಡ, ಸದನದಲ್ಲಿ ಇದೇ ವಿಚಾರ ಇಟ್ಟು ಹೋರಾಟ ಮಾಡುತ್ತೇನೆ ಎಂದು ಕಿಡಿಕಾರಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿರುವ ಜಗದೀಶ್ ಸದ್ಯಕ್ಕೆ ವೆಂಟಿಲೇಟರ್ನಲ್ಲಿ ಇದ್ದಾರೆ. ಸರ್ಕಾರ ಬಂದು ಐವತ್ತು ದಿನ ಆಗಿಲ್ಲ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ. ಆದರೆ ಈ ರೀತಿ ಮಾಡುವುದು ಸರಿಯಲ್ಲ. ಆಗಲೇ ದ್ವೇಷ ರಾಜಕಾರಣ ಆರಂಭಿಸಿದ್ದಾರೆ. ಊರಿನಲ್ಲಿರುವ ರೌಡಿ, ಚೇಲಾ ಮಹದೇವ ಎಂಬಾತ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಈ ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಹೇರಿದ್ದಾನೆ, ಮತ್ತೊಂದೆಡೆ ಜಗದೀಶ್ಗೆ ಅಧಿಕಾರಿಗಳ ಮೂಲಕ ಕಿರುಕುಳ ಕೊಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ಪತ್ರದಲ್ಲಿ ಜಗದೀಶ್ ಅವರು ಇದನ್ನು ಸ್ಪಷ್ಟವಾಗಿ ಬರೆದಿದ್ದಾರೆ. ಸಚಿವರ ಆದೇಶ ಇದೆ, ಒತ್ತಡ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಲಿ, ಮಂತ್ರಿ ಸ್ಥಾನ ಏನು ಶಾಶ್ವತಾನಾ?, ಘಟನೆ ಸಂಬಂಧ ಅಧಿಕಾರಿಗಳನ್ನು ಕೇಳಿದರೆ ಇನ್ನೂ ವ್ಯಕ್ತಿ ಸತ್ತಿಲ್ಲ. ಆ ಕಾರಣಕ್ಕೆ ಎಫ್ ಐ ಆರ್ ಹಾಕಿಲ್ಲ ಅಂತಾರೆ. ಇವರಿಗೆ ಮತ ಹಾಕಿದ್ದು ಜನರ ಜೀವದ ಜೊತೆ ಚೆಲ್ಲಾಟ ಆಡಲು ಅಲ್ಲ ಎಂದು ಕಿಡಿಕಾರಿದರು.