ಸದ್ಯಕ್ಕೆ ಮೋದಿಯವರೇ ಪ್ರಧಾನಿಯಾಗೋಕೆ ಸೂಕ್ತ ವ್ಯಕ್ತಿ, ದೇಶವನ್ನು ಮುನ್ನಡೆಸೋಕೆ ಅವರೇ ಸರಿ: ಜಿಟಿ ದೇವೇಗೌಡ
1283 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿ''ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಆಸೆ ತೋರಿಸಿ ಹೆಣ್ಣು ಮಕ್ಕಳು ಕಣ್ಣೀರು ಹಾಕುವಂತೆ ಮಾಡಿದ್ದಾರೆ'' ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಮೈಸೂರಿನಲ್ಲಿ ವಾಗ್ದಾಳಿ ನಡೆಸಿದರು.
''21ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಮೋದಿ ಅವರಿಂದ ಮಾತ್ರ ಸಾಧ್ಯ. ಸದ್ಯಕ್ಕೆ ಪ್ರಧಾನಿ ಮೋದಿಯವರನ್ನು ಸರಿಗಟ್ಟುವ ನಾಯಕ ಬೇರೆ ಯಾರೂ ಇಲ್ಲ. ಇನ್ಯಾರೂ ಅವರಿಗೆ ಸಮಾನರಿಲ್ಲ, ಅವರು ಮತ್ತೆ ಪ್ರಧಾನಿಯಾಗಬೇಕು. ಮೋದಿಯವರನ್ನು ಸರಿಗಟ್ಟುವ ನಾಯಕರು ಇಂಡಿಯಾ ಮೈತ್ರಿಕೂಟದಲ್ಲೂ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಕೂಡ ಮೋದಿಯನ್ನು ಸರಿಗಟ್ಟುವ ನಾಯಕರಲ್ಲ. ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ I.N.D.I.A ನಾಯಕರು NDAಗೆ ಬರ್ತಾರೆ. ರಾಜ್ಯದಲ್ಲಿ ನಮಗೆ ಎಷ್ಟು ಸ್ಥಾನ ಬೇಕು ಬೇಡ ಅನ್ನೋದು ಮುಖ್ಯ ಅಲ್ಲ. ಈ ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರ ನೇತೃತ್ವ ಬೇಕು ಅಷ್ಟೇ. ನಾವು ನಮಗೆ ಇಷ್ಟೇ ಸೀಟು ಬೇಕು, ಆ ಕ್ಷೇತ್ರ ಬೇಡ ಅಂತ ಬೇಡಿಕೆ ಇಟ್ಟಿಲ್ಲ. JDSಗೆ 5 ಕ್ಷೇತ್ರ ಬಿಟ್ಟುಕೊಡಲು ಬಿಜೆಪಿಯವರು ಒಪ್ಪಿಗೆ ಸೂಚಿಸಿದ್ದು, ನಮ್ಮ ಪಕ್ಷ ಎಲ್ಲೆಲ್ಲಿ ಶಕ್ತಿಯುತವಾಗಿದೆಯೋ ಅಲ್ಲಿ ಮಾತ್ರ ಸ್ಪರ್ಧಿಸುತ್ತಿದ್ದೇವೆ. ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದಷ್ಟೇ ನಮ್ಮ ಏಕೈಕ ಗುರಿ'' ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಮಾಧ್ಯಮಗಳ ಜೊತೆ ಮಾತಾಡಿದ ಅವರು, ಇದೀಗ ಗ್ಯಾರಂಟಿ ಯೋಜನೆಗಳ ಕಥೆ ಏನಾಗಿದೆ? ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿ ಮಹಿಳೆಯರಿಗೆ 2 ಸಾವಿರ ರೂಪಾಯಿ ಹಣ ತಲುಪುತ್ತಿಲ್ಲ. ಈ ಕುರಿತು ಹೋದಲ್ಲಿ ಬಂದಲ್ಲಿ ಮಹಿಳೆಯರು ಅಳಲು ತೊಡಿಕೊಳ್ಳುತ್ತಿದ್ದಾರೆ. ತಂತ್ರಾಂಶ ಸಮಸ್ಯೆಯಿಂದ ಹಣ ತಲುಪಿಲ್ಲ ಎನ್ನುತ್ತಿದ್ದಾರೆ. ಆಸೆ ತೋರಿಸಿ ಹೆಣ್ಣು ಮಕ್ಕಳ ಕಣ್ಣೀರು ಹಾಕಿಸುತ್ತಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣ ಆಗಿದೆ. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ. 38 ಸಾವಿರ ಕೋಟಿ ನಷ್ಟವಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಆದರೂ ರಾಜ್ಯ ಸರ್ಕಾರದಿಂದ ಬರ ಪರಿಹಾರಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ದೂರುತ್ತಿರುವ ರಾಜ್ಯ ಸರ್ಕಾರ ಮೊದಲು ತನ್ನ ಪಾಲಿನ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಜಿಟಿ ದೇವೇಗೌಡ ಆಗ್ರಹಿಸಿದರು.
''21ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಮೋದಿ ಅವರಿಂದ ಮಾತ್ರ ಸಾಧ್ಯ. ಸದ್ಯಕ್ಕೆ ಪ್ರಧಾನಿ ಮೋದಿಯವರನ್ನು ಸರಿಗಟ್ಟುವ ನಾಯಕ ಬೇರೆ ಯಾರೂ ಇಲ್ಲ. ಇನ್ಯಾರೂ ಅವರಿಗೆ ಸಮಾನರಿಲ್ಲ, ಅವರು ಮತ್ತೆ ಪ್ರಧಾನಿಯಾಗಬೇಕು. ಮೋದಿಯವರನ್ನು ಸರಿಗಟ್ಟುವ ನಾಯಕರು ಇಂಡಿಯಾ ಮೈತ್ರಿಕೂಟದಲ್ಲೂ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಕೂಡ ಮೋದಿಯನ್ನು ಸರಿಗಟ್ಟುವ ನಾಯಕರಲ್ಲ. ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ I.N.D.I.A ನಾಯಕರು NDAಗೆ ಬರ್ತಾರೆ. ರಾಜ್ಯದಲ್ಲಿ ನಮಗೆ ಎಷ್ಟು ಸ್ಥಾನ ಬೇಕು ಬೇಡ ಅನ್ನೋದು ಮುಖ್ಯ ಅಲ್ಲ. ಈ ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರ ನೇತೃತ್ವ ಬೇಕು ಅಷ್ಟೇ. ನಾವು ನಮಗೆ ಇಷ್ಟೇ ಸೀಟು ಬೇಕು, ಆ ಕ್ಷೇತ್ರ ಬೇಡ ಅಂತ ಬೇಡಿಕೆ ಇಟ್ಟಿಲ್ಲ. JDSಗೆ 5 ಕ್ಷೇತ್ರ ಬಿಟ್ಟುಕೊಡಲು ಬಿಜೆಪಿಯವರು ಒಪ್ಪಿಗೆ ಸೂಚಿಸಿದ್ದು, ನಮ್ಮ ಪಕ್ಷ ಎಲ್ಲೆಲ್ಲಿ ಶಕ್ತಿಯುತವಾಗಿದೆಯೋ ಅಲ್ಲಿ ಮಾತ್ರ ಸ್ಪರ್ಧಿಸುತ್ತಿದ್ದೇವೆ. ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದಷ್ಟೇ ನಮ್ಮ ಏಕೈಕ ಗುರಿ'' ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಮಾಧ್ಯಮಗಳ ಜೊತೆ ಮಾತಾಡಿದ ಅವರು, ಇದೀಗ ಗ್ಯಾರಂಟಿ ಯೋಜನೆಗಳ ಕಥೆ ಏನಾಗಿದೆ? ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿ ಮಹಿಳೆಯರಿಗೆ 2 ಸಾವಿರ ರೂಪಾಯಿ ಹಣ ತಲುಪುತ್ತಿಲ್ಲ. ಈ ಕುರಿತು ಹೋದಲ್ಲಿ ಬಂದಲ್ಲಿ ಮಹಿಳೆಯರು ಅಳಲು ತೊಡಿಕೊಳ್ಳುತ್ತಿದ್ದಾರೆ. ತಂತ್ರಾಂಶ ಸಮಸ್ಯೆಯಿಂದ ಹಣ ತಲುಪಿಲ್ಲ ಎನ್ನುತ್ತಿದ್ದಾರೆ. ಆಸೆ ತೋರಿಸಿ ಹೆಣ್ಣು ಮಕ್ಕಳ ಕಣ್ಣೀರು ಹಾಕಿಸುತ್ತಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣ ಆಗಿದೆ. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ. 38 ಸಾವಿರ ಕೋಟಿ ನಷ್ಟವಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಆದರೂ ರಾಜ್ಯ ಸರ್ಕಾರದಿಂದ ಬರ ಪರಿಹಾರಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ದೂರುತ್ತಿರುವ ರಾಜ್ಯ ಸರ್ಕಾರ ಮೊದಲು ತನ್ನ ಪಾಲಿನ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಜಿಟಿ ದೇವೇಗೌಡ ಆಗ್ರಹಿಸಿದರು.