Lok Sabha Elections 2024: ರಾಜ್ಯದಲ್ಲಿ 18ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ; ಸಿಎಂ ಸಿದ್ದರಾಮಯ್ಯ
1665 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅಭಿವೃದ್ಧಿ ಆಗಿದ್ದರೆ ತಾನೇ ಟ್ರೇಲರ್. ಸುಳ್ಳಿನ ಪಿಕ್ಚರ್ ಅವರದ್ದು ಬಾಕಿ ಇರಬಹುದು. ಇಲ್ಲಿಯವರೆಗೆ ಅವರು ಹೇಳಿರುವುದೆಲ್ಲಾ ಬರೀ ಸುಳ್ಳು. ಅವರು 200ಕ್ಷೇತ್ರ ಮಾತ್ರ ಗೆಲ್ಲೋದು ಎಂದು ಭವಿಷ್ಯ ನುಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಕಡಿಮೆ ಸ್ಥಾನ ಬರುತ್ತವೆ ಎಂದು ಗೊತ್ತಾದ ಮೇಲೆಯೇ ಹೆಚ್ಚು ಸ್ಥಾನ ಬರುತ್ತವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಕೂಡ ಅವರ ತಂತ್ರಗಾರಿಕೆಯ ಒಂದು ಭಾಗ. ಕರ್ನಾಟಕದಲ್ಲಿ ಖಂಡಿತ ನನಗೆ ವಿಶ್ವಾಸ ಇದೆ 18ರಿಂದ 20 ಸ್ಥಾನ ಗೆಲ್ಲುತ್ತೇವೆ. ಅವರು ಸಹ ಸರ್ವೇ ಮಾಡಿಸಿದ್ದಾರೆ. ಅವರು ಗೆಲ್ಲೋದು 200 ಕ್ಷೇತ್ರ ಮಾತ್ರ. ಕರ್ನಾಟಕದಲ್ಲಿ 18ರಿಂದ 20 ಕ್ಷೇತ್ರಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿ ಬಿಜೆಪಿಯವರ ಸುಳ್ಳಿಗೆ ಯಾರು ಸಹ ಮರಳಾಗುವುದಿಲ್ಲ. ಮೋದಿಯೇ ಬಂದು ಪ್ರಚಾರ ಮಾಡಲಿ. ವಿಧಾನಸಭೆ ಚುನಾವಣೆಯಲ್ಲೂ ಮೋದಿ ಬಂದು ಪ್ರಚಾರ ಮಾಡಿದ್ರು, ಆಗ ಏನಾಯಿತು ಎಂಬುದು ಗೊತ್ತಿದೆ, ಈಗಲೂ ಮಾಡಲಿ ಬಿಡಿ ಎಂದು ಹೇಳಿದರು.
ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಜೊತೆ ನಾನು ಮಾತನಾಡಿಲ್ಲ, ಶ್ರೀನಿವಾಸಪ್ರಸಾದ್ ಅವರನ್ನು ನಾನು ಭೇಟಿಯಾಗಿಲ್ಲ. ದೂರವಾಣಿ ಮೂಲಕವೂ ಅವರೊಂದಿಗೆ ಮಾತನಾಡಿಲ್ಲ. ಡಾ ಮಹದೇವಪ್ಪ, ಕೆ ವೆಂಕಟೇಶ್ ಹೋಗಿ ಭೇಟಿ ಮಾಡಿದ್ದಾರೆ. ಅವರಿಗೆ ಏನು ಹೇಳಿದ್ದಾರೆಂದು ಅವರನ್ನೇ ಕೇಳಿ. ಕಾಂಗ್ರೆಸ್ ಪಕ್ಷಕ್ಕೆ ಅನೇಕರು ಬರುತ್ತಾರೆ. ಪಕ್ಷದ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದರು.
ಕೇಂದ್ರ ಸಚಿವ ಅಮಿತ್ ಶಾ ಗೂಂಡಾ ಎಂದು ಡಾ ಯತೀಂದ್ರ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಯತೀಂದ್ರ ಹೇಳಿರುವುದರಲ್ಲಿ ತಪ್ಪೇನಿದೆ. ಸಿಬಿಐ ಹೇಳಿರುವುದನ್ನು ಯತೀಂದ್ರ ಹೇಳಿದ್ದಾನೆ. ಅದು ಅವನು ಬಳಸಿರುವ ಪದವಲ್ಲ. ಸಿಬಿಐ ವರದಿಯಲ್ಲಿರುವ ಪದ. ಅದನ್ನೇ ಅವನು ಉಲ್ಲೇಖಿಸಿದ್ದಾನೆ.
ಬಿಜೆಪಿಯವರಿಗೆ ಸಂಸ್ಕಾರವೇ ಗೊತ್ತಿಲ್ಲ. ಅವರು ಯತೀಂದ್ರನಿಗೆ ಸಂಸ್ಕಾರ ಹೇಳಿಕೊಡಲು ಬಂದಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಗರ್ವ ಭಂಗವಾಗಬೇಕು ಎಂಬ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು, ನನಗೆ ಗರ್ವ ಇದ್ದರೆ ತಾನೇ ಭಂಗ ಆಗುವುದು. ದೇವೇಗೌಡರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಸತ್ಯ ಹೇಳಿದ್ದಕ್ಕೆ ನನಗೆ ಗರ್ವ ಎನ್ನುತ್ತಾರೆ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದವರು ಯಾರು?. ಮುಂದಿನ ಜನ್ಮ ಇದ್ದರೆ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದವರು ಯಾರು?.
ಅವರು ಹೇಳಿರುವುದನ್ನೇ ನಾನು ಹೇಳಿದ್ದಕ್ಕೆ ನನಗೆ ಗರ್ವ ಎನ್ನುತ್ತಾರೆ. ನನಗೆ ಗರ್ವ ಇಲ್ಲ ಎಂದು ತಿರುಗೇಟು ಕೊಟ್ಟರು.
ಮೈಸೂರಿನಲ್ಲಿ ಮಾತನಾಡಿದ ಅವರು, ಕಡಿಮೆ ಸ್ಥಾನ ಬರುತ್ತವೆ ಎಂದು ಗೊತ್ತಾದ ಮೇಲೆಯೇ ಹೆಚ್ಚು ಸ್ಥಾನ ಬರುತ್ತವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಕೂಡ ಅವರ ತಂತ್ರಗಾರಿಕೆಯ ಒಂದು ಭಾಗ. ಕರ್ನಾಟಕದಲ್ಲಿ ಖಂಡಿತ ನನಗೆ ವಿಶ್ವಾಸ ಇದೆ 18ರಿಂದ 20 ಸ್ಥಾನ ಗೆಲ್ಲುತ್ತೇವೆ. ಅವರು ಸಹ ಸರ್ವೇ ಮಾಡಿಸಿದ್ದಾರೆ. ಅವರು ಗೆಲ್ಲೋದು 200 ಕ್ಷೇತ್ರ ಮಾತ್ರ. ಕರ್ನಾಟಕದಲ್ಲಿ 18ರಿಂದ 20 ಕ್ಷೇತ್ರಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿ ಬಿಜೆಪಿಯವರ ಸುಳ್ಳಿಗೆ ಯಾರು ಸಹ ಮರಳಾಗುವುದಿಲ್ಲ. ಮೋದಿಯೇ ಬಂದು ಪ್ರಚಾರ ಮಾಡಲಿ. ವಿಧಾನಸಭೆ ಚುನಾವಣೆಯಲ್ಲೂ ಮೋದಿ ಬಂದು ಪ್ರಚಾರ ಮಾಡಿದ್ರು, ಆಗ ಏನಾಯಿತು ಎಂಬುದು ಗೊತ್ತಿದೆ, ಈಗಲೂ ಮಾಡಲಿ ಬಿಡಿ ಎಂದು ಹೇಳಿದರು.
ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಜೊತೆ ನಾನು ಮಾತನಾಡಿಲ್ಲ, ಶ್ರೀನಿವಾಸಪ್ರಸಾದ್ ಅವರನ್ನು ನಾನು ಭೇಟಿಯಾಗಿಲ್ಲ. ದೂರವಾಣಿ ಮೂಲಕವೂ ಅವರೊಂದಿಗೆ ಮಾತನಾಡಿಲ್ಲ. ಡಾ ಮಹದೇವಪ್ಪ, ಕೆ ವೆಂಕಟೇಶ್ ಹೋಗಿ ಭೇಟಿ ಮಾಡಿದ್ದಾರೆ. ಅವರಿಗೆ ಏನು ಹೇಳಿದ್ದಾರೆಂದು ಅವರನ್ನೇ ಕೇಳಿ. ಕಾಂಗ್ರೆಸ್ ಪಕ್ಷಕ್ಕೆ ಅನೇಕರು ಬರುತ್ತಾರೆ. ಪಕ್ಷದ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದರು.
ಕೇಂದ್ರ ಸಚಿವ ಅಮಿತ್ ಶಾ ಗೂಂಡಾ ಎಂದು ಡಾ ಯತೀಂದ್ರ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಯತೀಂದ್ರ ಹೇಳಿರುವುದರಲ್ಲಿ ತಪ್ಪೇನಿದೆ. ಸಿಬಿಐ ಹೇಳಿರುವುದನ್ನು ಯತೀಂದ್ರ ಹೇಳಿದ್ದಾನೆ. ಅದು ಅವನು ಬಳಸಿರುವ ಪದವಲ್ಲ. ಸಿಬಿಐ ವರದಿಯಲ್ಲಿರುವ ಪದ. ಅದನ್ನೇ ಅವನು ಉಲ್ಲೇಖಿಸಿದ್ದಾನೆ.
ಬಿಜೆಪಿಯವರಿಗೆ ಸಂಸ್ಕಾರವೇ ಗೊತ್ತಿಲ್ಲ. ಅವರು ಯತೀಂದ್ರನಿಗೆ ಸಂಸ್ಕಾರ ಹೇಳಿಕೊಡಲು ಬಂದಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಗರ್ವ ಭಂಗವಾಗಬೇಕು ಎಂಬ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು, ನನಗೆ ಗರ್ವ ಇದ್ದರೆ ತಾನೇ ಭಂಗ ಆಗುವುದು. ದೇವೇಗೌಡರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಸತ್ಯ ಹೇಳಿದ್ದಕ್ಕೆ ನನಗೆ ಗರ್ವ ಎನ್ನುತ್ತಾರೆ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದವರು ಯಾರು?. ಮುಂದಿನ ಜನ್ಮ ಇದ್ದರೆ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದವರು ಯಾರು?.
ಅವರು ಹೇಳಿರುವುದನ್ನೇ ನಾನು ಹೇಳಿದ್ದಕ್ಕೆ ನನಗೆ ಗರ್ವ ಎನ್ನುತ್ತಾರೆ. ನನಗೆ ಗರ್ವ ಇಲ್ಲ ಎಂದು ತಿರುಗೇಟು ಕೊಟ್ಟರು.