ವಿತ್ ಔಟ್ ಮೋದಿ ಪ್ರತಾಪ್ ಸಿಂಹ ಶೂನ್ಯ; ಮೋದಿ ಹೆಸರೇಳೆ ಚುನಾವಣೆ ಗೆದ್ದಿದ್ದೇನೆ; ಪ್ರತಾಪ್ ಸಿಂಹ
1897 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: 2014ರಲ್ಲಿ ನಾನು ಒಬ್ಬ ಪತ್ರಕರ್ತ, ಮೈಸೂರು ಚುನಾವಣೆ ಬಗ್ಗೆ ಯೋಚನೆ ಮಾಡುವ ಸ್ಥಿತಿಯಲ್ಲೂ ನಾನು ಇರಲಿಲ್ಲ. ಆಗ ಸಂಘದ ಆಶೀರ್ವಾದ, ಪಕ್ಷದ ಬಲದಿಂದ ಗೆದ್ದಿದ್ದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಅವರು, ಚುನಾವಣೆ ಅಂದರೆ ಆಕಾಂಕ್ಷಿಗಳು ಇರುತ್ತಾರೆ. ಅಂತಿಮವಾಗಿ ಯಡಿಯೂರಪ್ಪ, ರಾಜ್ಯಾಧ್ಯಕ್ಷರು, ನಮ್ಮ ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಒಳ್ಳೆಯ ಕೆಲಸ ಮಾಡಿದ್ದೇನೆ, ಪಕ್ಷ ನನ್ನ ಕೈ ಬಿಡುವುದಿಲ್ಲ ಎಂಬ ಅಚಲ ನಂಬಿಕೆ ಇದೆ. ಪ್ರತಾಪ್ ಸಿಂಹ ವಿತೌಟ್ ಮೋದಿ ಶೂನ್ಯ. ನಾನು ಮೊದಲ ಬಾರಿಯೂ ಮೋದಿ ಹೆಸರಿನಲ್ಲಿ ಗೆದ್ದೆ, ಎರಡನೇ ಬಾರಿಯೂ ಅವರ ಹೆಸರಿನಲ್ಲೇ ಗೆದ್ದೆ, ಮೂರನೇ ಬಾರಿಯೂ ಅವರ ಹೆಸರಿನಲ್ಲೇ ಗೆಲ್ತೀನಿ ಎಂದು ಹೇಳಿದರು.
ಪಕ್ಷದ ವಿಶ್ವಾಸ ನನ್ನ ಮೇಲಿದೆ, ನನಗೆ ಮತ್ತೊಂದು ಅವಕಾಶ ಸಿಗುತ್ತದೆ. ಮೋದಿ ಅವರ ಪುಸ್ತಕ ಬರೆದವನು ನಾನು. ನನ್ನ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಮೋದಿ ಅವರು ನನಗೆ ಆಶೀರ್ವಾದ ಮಾಡುತ್ತಾರೆ. ಕಾಂಗ್ರೆಸ್ ನಲ್ಲಿ ಸೋಲಿನ ಟಿಕೆಟ್ ಗಾಗಿಯೇ ಹೊಡೆದಾಟವಿದೆ. ಇನ್ನೂ ಬಿಜೆಪಿಯಲ್ಲಿ ಗೆಲುವಿನ ಟಿಕೆಟ್ ಗಾಗಿ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದರೆ ಏರಲು ಎಲ್ಲರೂ ಪ್ರಯತ್ನ ಪಡುತ್ತಾ ಇರುತ್ತಾರೆ. ಮೋದಿ ಅವರ ಕೃಪೆಯಿಂದ ಕೆಲಸ ಮಾಡಿ ಮೈಸೂರಿನಲ್ಲಿ ಬಿಜೆಪಿ ಗೆಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ, ನನಗೆ ತಾಯಿ ಚಾಮುಂಡಿ, ಕಾವೇರಿ ತಾಯಿ, ಮೋದಿಯವರ ಆಶೀರ್ವಾದ ಇದೆ.ನನಗೇ ಟಿಕೆಟ್ ಸಿಗಲಿದ್ದು, ಮೂರನೇ ಬಾರಿಯೂ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು, 28ಕ್ಕೆ 28 ಕ್ಷೇತ್ರ ಗೆಲ್ಲಬೇಕು ಇದೆ ನಮ್ಮ ಉದ್ದೇಶ, ಮೋದಿ ಹೆಸರಲ್ಲಿ ಗೆದ್ದೋನು ನಾನು, ನಾನೇ ಊರಿಗೆಲ್ಲ ಪಟೇಲ ಅಂತ ಹೇಳೋಕೆ ಆಗುತ್ತಾ..?, ನಮ್ಮ ಪಾಲಿಗೆ ಮೋದಿಯವರೇ ದೇವರು ಎಂದು ಹೇಳಿದರು. ಮೋದಿ, ಚಾಮುಂಡೇಶ್ವರಿ, ಕಾವೇರಿ ತಾಯಿಯ ಆಶೀರ್ವಾದ ನನಗೆ ಇದೆ ಎಂದು ಹೇಳಿದರು.
ಮೈಸೂರಲ್ಲಿ ಮಾತನಾಡಿದ ಅವರು, ಚುನಾವಣೆ ಅಂದರೆ ಆಕಾಂಕ್ಷಿಗಳು ಇರುತ್ತಾರೆ. ಅಂತಿಮವಾಗಿ ಯಡಿಯೂರಪ್ಪ, ರಾಜ್ಯಾಧ್ಯಕ್ಷರು, ನಮ್ಮ ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಒಳ್ಳೆಯ ಕೆಲಸ ಮಾಡಿದ್ದೇನೆ, ಪಕ್ಷ ನನ್ನ ಕೈ ಬಿಡುವುದಿಲ್ಲ ಎಂಬ ಅಚಲ ನಂಬಿಕೆ ಇದೆ. ಪ್ರತಾಪ್ ಸಿಂಹ ವಿತೌಟ್ ಮೋದಿ ಶೂನ್ಯ. ನಾನು ಮೊದಲ ಬಾರಿಯೂ ಮೋದಿ ಹೆಸರಿನಲ್ಲಿ ಗೆದ್ದೆ, ಎರಡನೇ ಬಾರಿಯೂ ಅವರ ಹೆಸರಿನಲ್ಲೇ ಗೆದ್ದೆ, ಮೂರನೇ ಬಾರಿಯೂ ಅವರ ಹೆಸರಿನಲ್ಲೇ ಗೆಲ್ತೀನಿ ಎಂದು ಹೇಳಿದರು.
ಪಕ್ಷದ ವಿಶ್ವಾಸ ನನ್ನ ಮೇಲಿದೆ, ನನಗೆ ಮತ್ತೊಂದು ಅವಕಾಶ ಸಿಗುತ್ತದೆ. ಮೋದಿ ಅವರ ಪುಸ್ತಕ ಬರೆದವನು ನಾನು. ನನ್ನ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಮೋದಿ ಅವರು ನನಗೆ ಆಶೀರ್ವಾದ ಮಾಡುತ್ತಾರೆ. ಕಾಂಗ್ರೆಸ್ ನಲ್ಲಿ ಸೋಲಿನ ಟಿಕೆಟ್ ಗಾಗಿಯೇ ಹೊಡೆದಾಟವಿದೆ. ಇನ್ನೂ ಬಿಜೆಪಿಯಲ್ಲಿ ಗೆಲುವಿನ ಟಿಕೆಟ್ ಗಾಗಿ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದರೆ ಏರಲು ಎಲ್ಲರೂ ಪ್ರಯತ್ನ ಪಡುತ್ತಾ ಇರುತ್ತಾರೆ. ಮೋದಿ ಅವರ ಕೃಪೆಯಿಂದ ಕೆಲಸ ಮಾಡಿ ಮೈಸೂರಿನಲ್ಲಿ ಬಿಜೆಪಿ ಗೆಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ, ನನಗೆ ತಾಯಿ ಚಾಮುಂಡಿ, ಕಾವೇರಿ ತಾಯಿ, ಮೋದಿಯವರ ಆಶೀರ್ವಾದ ಇದೆ.ನನಗೇ ಟಿಕೆಟ್ ಸಿಗಲಿದ್ದು, ಮೂರನೇ ಬಾರಿಯೂ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು, 28ಕ್ಕೆ 28 ಕ್ಷೇತ್ರ ಗೆಲ್ಲಬೇಕು ಇದೆ ನಮ್ಮ ಉದ್ದೇಶ, ಮೋದಿ ಹೆಸರಲ್ಲಿ ಗೆದ್ದೋನು ನಾನು, ನಾನೇ ಊರಿಗೆಲ್ಲ ಪಟೇಲ ಅಂತ ಹೇಳೋಕೆ ಆಗುತ್ತಾ..?, ನಮ್ಮ ಪಾಲಿಗೆ ಮೋದಿಯವರೇ ದೇವರು ಎಂದು ಹೇಳಿದರು. ಮೋದಿ, ಚಾಮುಂಡೇಶ್ವರಿ, ಕಾವೇರಿ ತಾಯಿಯ ಆಶೀರ್ವಾದ ನನಗೆ ಇದೆ ಎಂದು ಹೇಳಿದರು.