ಇದೇ ದಿನ 2014ರಲ್ಲಿ ನನಗೆ ಟಿಕೆಟ್ ಘೋಷಣೆಯಾಗಿತ್ತು, ಈಗ ಟಿಕೆಟ್ ಸಿಗದಿದ್ರೂ ಕೆಲಸ ಮಾಡ್ತೀನಿ: ಪ್ರತಾಪ್ ಸಿಂಹ
1519 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ''ನಾನು ಸಾಯುವವರೆಗೂ ಮೋದಿ ಭಕ್ತ, ಕೊನೆಯವರೆಗೂ ಬಿಜೆಪಿ ಕಾರ್ಯಕರ್ತ. ಮೋದಿಜೀ ನನಗೆ ಸದಾ ಪ್ರೇರಣೆ ಮತ್ತು ಸ್ಫೂರ್ತಿ. ಮೋದಿ ಅವರು ಏನೇ ನಿರ್ಧಾರ ತೆಗೆದುಕೊಂಡರೂ ನಾನು ಅದನ್ನು ಸ್ವೀಕರಿಸುತ್ತೇನೆ'' ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಪ್ರತಾಪ್ ಸಿಂಹ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಇಲ್ಲಿ ಚುನಾವಣೆಗೆ ಅಭ್ಯರ್ಥಿಯಾಗಿ ಅವಕಾಶ ಮಾಡಿಕೊಟ್ಟರೂ ತೃಪ್ತಿ ಇದೆ, ಮಾಡಿಕೊಡದೇ ಇದ್ದರೂ ತೃಪ್ತಿ ಇದೆ. ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ಅವರನ್ನು ಎಳೆದು ತರಬೇಡಿ. ಯಡಿಯೂರಪ್ಪ ಅವರು ಪಕ್ಷ ಕಟ್ಟದೇ ಇದ್ದಿದ್ದರೇ ಕರ್ನಾಟಕದಲ್ಲಿ ಬಿಜೆಪಿ ಎಲ್ಲಿ ಇರುತ್ತಿತ್ತು? ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಯನ್ನು ಯಡಿಯೂರಪ್ಪ ಅವರು ಕಟ್ಟದೇ ಹೋಗಿದ್ದರೇ ನನ್ನಂಥವರು ಸಂಸದ ಆಗೋದಕ್ಕೆ ಆಗುತ್ತಿತ್ತಾ? ಕರ್ನಾಟಕಕ್ಕೆ ಯಡಿಯೂರಪ್ಪ ಅವರು ಮೋದಿ ಇದ್ದ ಹಾಗೆ'' ಎಂದು ಹೇಳಿದರು.
ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ತಪ್ಪುತ್ತಿದೆ ಎಂಬ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದರು. ''2018ರಲ್ಲಿ ಹೆಸರು ಕೆಡಿಸಿಕೊಂಡಿದ್ದಕ್ಕೆ ಸಿದ್ದರಾಮಯ್ಯ ಅವರು ಇಲ್ಲಿ ಸೋತು, ಬಾದಾಮಿಗೆ ಹೋದ್ರಾ? ನಂತರ ಬಾದಾಮಿಯಲ್ಲಿ ಹೆಸರು ಕೆಡಿಸಿಕೊಂಡಿದ್ದಕ್ಕೆ ಮತ್ತೆ ಇಲ್ಲಿಗೆ ಬಂದ್ರಾ? ಸಿದ್ದರಾಮಯ್ಯ ಹಿರಿಯ ನಾಯಕರು, ಅವರು ಈ ರೀತಿ ಮಾತನಾಡಬಾರದು. ಸಿದ್ದರಾಮಯ್ಯ ಅವರು ಎಷ್ಟು ಚುನಾವಣೆಯಲ್ಲಿ ಸೋತಿಲ್ಲ ಹೇಳಿ?'' ಎಂದು ಪ್ರಶ್ನಿಸಿದರು.
ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಪ್ರತಾಪ್ ಸಿಂಹ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಇಲ್ಲಿ ಚುನಾವಣೆಗೆ ಅಭ್ಯರ್ಥಿಯಾಗಿ ಅವಕಾಶ ಮಾಡಿಕೊಟ್ಟರೂ ತೃಪ್ತಿ ಇದೆ, ಮಾಡಿಕೊಡದೇ ಇದ್ದರೂ ತೃಪ್ತಿ ಇದೆ. ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ಅವರನ್ನು ಎಳೆದು ತರಬೇಡಿ. ಯಡಿಯೂರಪ್ಪ ಅವರು ಪಕ್ಷ ಕಟ್ಟದೇ ಇದ್ದಿದ್ದರೇ ಕರ್ನಾಟಕದಲ್ಲಿ ಬಿಜೆಪಿ ಎಲ್ಲಿ ಇರುತ್ತಿತ್ತು? ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಯನ್ನು ಯಡಿಯೂರಪ್ಪ ಅವರು ಕಟ್ಟದೇ ಹೋಗಿದ್ದರೇ ನನ್ನಂಥವರು ಸಂಸದ ಆಗೋದಕ್ಕೆ ಆಗುತ್ತಿತ್ತಾ? ಕರ್ನಾಟಕಕ್ಕೆ ಯಡಿಯೂರಪ್ಪ ಅವರು ಮೋದಿ ಇದ್ದ ಹಾಗೆ'' ಎಂದು ಹೇಳಿದರು.
ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ತಪ್ಪುತ್ತಿದೆ ಎಂಬ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದರು. ''2018ರಲ್ಲಿ ಹೆಸರು ಕೆಡಿಸಿಕೊಂಡಿದ್ದಕ್ಕೆ ಸಿದ್ದರಾಮಯ್ಯ ಅವರು ಇಲ್ಲಿ ಸೋತು, ಬಾದಾಮಿಗೆ ಹೋದ್ರಾ? ನಂತರ ಬಾದಾಮಿಯಲ್ಲಿ ಹೆಸರು ಕೆಡಿಸಿಕೊಂಡಿದ್ದಕ್ಕೆ ಮತ್ತೆ ಇಲ್ಲಿಗೆ ಬಂದ್ರಾ? ಸಿದ್ದರಾಮಯ್ಯ ಹಿರಿಯ ನಾಯಕರು, ಅವರು ಈ ರೀತಿ ಮಾತನಾಡಬಾರದು. ಸಿದ್ದರಾಮಯ್ಯ ಅವರು ಎಷ್ಟು ಚುನಾವಣೆಯಲ್ಲಿ ಸೋತಿಲ್ಲ ಹೇಳಿ?'' ಎಂದು ಪ್ರಶ್ನಿಸಿದರು.