ಸರ್ಕಾರ ಸುಭದ್ರ ; ನಮ್ಮ ಸಿಎಂ ಬಂದೋಬಸ್ತ್ ಆಗಿದ್ದಾರೆ ; ಕೆಎಚ್ ಮುನಿಯಪ್ಪ
1054 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: 224 ಶಾಸಕರಿಗೂ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ನಮ್ಮಲ್ಲಿ 136 ಶಾಸಕರು ಇದ್ದಾರೆ, ಎಲ್ಲರಿಗೂ ಆಸೆಗಳು ಸಹಜ. 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಅಸಂಬಂಧವಾದದ್ದು ಎಂದು ಕೆಎಚ್ ಮುನಿಯಪ್ಪ ಹೇಳಿದರು.
ಮೈಸೂರಲ್ಲಿ ಮಾತನಾಡಿದ ಅವರು, ಸರ್ಕಾರವೂ ಭದ್ರವಾಗಿದೆ. ಸಿಎಂ ಕೂಡ ಬಂದೋಬಸ್ತ್ ಆಗಿದ್ದಾರೆ, ಸಿದ್ದರಾಮಯ್ಯ ತಮ್ಮದೇ ಆದ ಚಾಕಚಕ್ಯತೆಯಿಂದ ಆಡಳಿತ ನಡೆಸುತ್ತಿದ್ದಾರೆ. ಉತ್ತಮ ಬಜೆಟ್ ಕೊಟ್ಟು ಒಳ್ಳೆಯ ಸರ್ಕಾರ ಮಾಡುತ್ತಿದ್ದಾರೆ. ನಾನು ಬೇರೆ ರೀತಿಯ ಪ್ರಶ್ನೆಗಳಿಗೆ ಉತ್ತರ ಕೊಡುವುದಿಲ್ಲ. ನನಗೆ ಬಡವರಿಗೆ ಅಕ್ಕಿ ಕೊಡುವ ಜವಾಬ್ದಾರಿ ಕೊಟ್ಟಿದ್ದಾರೆ. ಆ ಜವಾಬ್ದಾರಿಯನ್ನು ಮಾಡುತ್ತಿದ್ದೇನೆ. ಈ ಸಂಧರ್ಭದಲ್ಲಿ ಬೇರೆ ಪ್ರಶ್ನೆಗಳನ್ನು ಕೇಳಬೇಡಿ ಎಂದು ಹೇಳಿದ್ರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತ. ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ರೀತಿಯ ಅಪಾಯವಿಲ್ಲ. ಜನರಿಗೆ ಉತ್ತಮ ಆಡಳಿತ ನೀಡೋದೇ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದ ಆಯಾಯ ಭಾಗದ ಜಿಲ್ಲೆಗಳ ಜನರ ಆಹಾರ ಪದ್ದತಿಗೆ ಅನುಗುಣವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅಕ್ಕಿಯ ಜೊತೆಗೆ ರಾಗಿ ವಿತರಣೆ ಮಾಡಿದರೆ, ಮತ್ತೆ ಕೆಲವೆಡೆ ಜೋಳ ವಿತರಣೆ ಮಾಡಲಾಗುತ್ತಿದೆ. ಹತ್ತು ಕೆಜಿ ಉಚಿತ ಅಕ್ಕಿ ವಿತರಣೆ ಮಾಡುವ ಗುರಿಯಿದೆ. ಆದರೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡುತ್ತಿಲ್ಲ. ಹಾಗಾಗಿ 5ಕೆ ಜಿ ಅಕ್ಕಿ ಬದಲು ಹಣ ನೀಡುತ್ತಿದ್ದೇವೆ. ಶೀಘ್ರದಲ್ಲೇ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಇದಕ್ಕಾಗಿ ಆಂಧ್ರ, ತೆಲಂಗಾಣ, ಛತ್ತೀಸ್ ಘಡ ರಾಜ್ಯಗಳಿಂದ ಅಕ್ಕಿ ಪಡೆಯಲು ಮುಂದಾಗಿದ್ದೇವೆ ಅಂತ ಸಚಿವ ಕೆ ಎಚ್ ಮುನಿಯಪ್ಪ ವಿವರಣೆ ನೀಡಿದ್ರು.
ಮೈಸೂರಲ್ಲಿ ಮಾತನಾಡಿದ ಅವರು, ಸರ್ಕಾರವೂ ಭದ್ರವಾಗಿದೆ. ಸಿಎಂ ಕೂಡ ಬಂದೋಬಸ್ತ್ ಆಗಿದ್ದಾರೆ, ಸಿದ್ದರಾಮಯ್ಯ ತಮ್ಮದೇ ಆದ ಚಾಕಚಕ್ಯತೆಯಿಂದ ಆಡಳಿತ ನಡೆಸುತ್ತಿದ್ದಾರೆ. ಉತ್ತಮ ಬಜೆಟ್ ಕೊಟ್ಟು ಒಳ್ಳೆಯ ಸರ್ಕಾರ ಮಾಡುತ್ತಿದ್ದಾರೆ. ನಾನು ಬೇರೆ ರೀತಿಯ ಪ್ರಶ್ನೆಗಳಿಗೆ ಉತ್ತರ ಕೊಡುವುದಿಲ್ಲ. ನನಗೆ ಬಡವರಿಗೆ ಅಕ್ಕಿ ಕೊಡುವ ಜವಾಬ್ದಾರಿ ಕೊಟ್ಟಿದ್ದಾರೆ. ಆ ಜವಾಬ್ದಾರಿಯನ್ನು ಮಾಡುತ್ತಿದ್ದೇನೆ. ಈ ಸಂಧರ್ಭದಲ್ಲಿ ಬೇರೆ ಪ್ರಶ್ನೆಗಳನ್ನು ಕೇಳಬೇಡಿ ಎಂದು ಹೇಳಿದ್ರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತ. ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ರೀತಿಯ ಅಪಾಯವಿಲ್ಲ. ಜನರಿಗೆ ಉತ್ತಮ ಆಡಳಿತ ನೀಡೋದೇ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದ ಆಯಾಯ ಭಾಗದ ಜಿಲ್ಲೆಗಳ ಜನರ ಆಹಾರ ಪದ್ದತಿಗೆ ಅನುಗುಣವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅಕ್ಕಿಯ ಜೊತೆಗೆ ರಾಗಿ ವಿತರಣೆ ಮಾಡಿದರೆ, ಮತ್ತೆ ಕೆಲವೆಡೆ ಜೋಳ ವಿತರಣೆ ಮಾಡಲಾಗುತ್ತಿದೆ. ಹತ್ತು ಕೆಜಿ ಉಚಿತ ಅಕ್ಕಿ ವಿತರಣೆ ಮಾಡುವ ಗುರಿಯಿದೆ. ಆದರೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡುತ್ತಿಲ್ಲ. ಹಾಗಾಗಿ 5ಕೆ ಜಿ ಅಕ್ಕಿ ಬದಲು ಹಣ ನೀಡುತ್ತಿದ್ದೇವೆ. ಶೀಘ್ರದಲ್ಲೇ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಇದಕ್ಕಾಗಿ ಆಂಧ್ರ, ತೆಲಂಗಾಣ, ಛತ್ತೀಸ್ ಘಡ ರಾಜ್ಯಗಳಿಂದ ಅಕ್ಕಿ ಪಡೆಯಲು ಮುಂದಾಗಿದ್ದೇವೆ ಅಂತ ಸಚಿವ ಕೆ ಎಚ್ ಮುನಿಯಪ್ಪ ವಿವರಣೆ ನೀಡಿದ್ರು.