ಸಂವಿಧಾನ ಜಾಗೃತಿಗೆ ಟಾಂಗಾ ಗಾಡಿಮೈಸೂರಿನಲ್ಲಿ ಟಾಂಗಾ ಗಾಡಿಗಳ ಮೂಲಕ ಸಂವಿಧಾನ ಜಾಗೃತಿ ಅಭಿಯಾನ ನಡೆಸಲಾಗಿದೆ. ಪ್ರವಾಸೋದ್ಯಮ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯ್ತು. ಮೈಸೂರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಕಾರ್ಯಕ್ರಮ ಆರಂಭವಾಯ್ತು. ಸಂವಿಧಾನ ಜಾಗೃತಿ ಜಾಥಾಗೆ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಚಾಲನೆ ನೀಡಿದರು.