ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್, ರತ್ನ ಖಚಿತ ಸಿಂಹಾಸನದಲ್ಲಿ ಯದುವೀರ್ ಒಡೆಯರ್
1462 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜಗಾಂಭೀರ್ಯದಿಂದ ಸಿಂಹಾನದ ಕಡೆ ಹೆಜ್ಜೆ ಇಡುತ್ತಿದ್ದಂತೆ ವಂಧಿ ಮಾಗಧರು ರಾಜಾಧಿರಾಜ, ರಾಜ ಮಾರ್ತಾಂಡ, ರಾಜ ಕುಲತಿಲಕ, ರಾಜ ಮಾರ್ತಾಂಡ, ಯದುವೀರ್ ಮಹಾರಾಜ್ ಕೀ ಬಹು ಪರಾಕ್, ಬಹು ಪರಾಕ್ ಎಂದು ಮೈಸೂರಿನ ಅಂಬಾ ವಿಲಾಸ ಅರಮನೆಯಲ್ಲಿ ಬಹುಪರಾಕ್ ಹೇಳಿದರು. ಇದಕ್ಕೆ ಅಲ್ಲಿದ್ದವರೂ ದನಿಗೂಡಿದರು. ನಂತರ ಮೈಸೂರು ರಾಜ್ಯ ಗೀತೆಯನ್ನು ನುಡಿಸಲಾಯಿತು. ಈ ವೇಳೆ ರತ್ನ ಖಚಿತ ಸಿಂಹಾಸನದ ಮೇಲೆ ನಿಂತ ಯದುವೀರ್ ಸೆಲ್ಯೂಟ್ ಮಾಡಿ ರಾಜ್ಯ ಗೀತೆಗೆ ಗೌರವ ಸಲ್ಲಿಸಲಿಸಿದರು.
ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರ್ ಮಾದರಿಯಲ್ಲೇ ಇಂದಿಗೂ ದಸರೆಯ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಅರಮನೆಯಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸುತ್ತಿದ್ದಾರೆ. ಸಿಂಹಾಸನದ ಬಳಿ ತೆರಳಿದ ಯದುವೀರ್ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಮಂಗಳಾರತಿ ಮಾಡಿದರು.
ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ, ನಂತರ ಅವರು ಸಿಂಹಾಸನಾರೂಢರಾದರು. ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿದ ಬಳಿಕ ದಿವಾನರು ಸಿಂಹಾಸನದ ಮುಂದೆ ನಿಂತು ನಡುಬಾಗಿಸಿ ವಂದಿಸುವ ಚಟುವಟಿಕೆಗಳೂ ನಡೆದವು.
ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಗತವೈಭವ ಮರುಕಳಿಸಿದೆ. ಮೈಸೂರು ಪ್ಯಾಲೇಸ್ನಲ್ಲಿ ಯದುವೀರ್ ಖಾಸಗಿ ದರ್ಬಾರ್ ಆರಂಭವಾಗಿದ್ದು, ಇಂದಿನಿಂದ 9 ದಿನಗಳ ಕಾಲ ವಿವಿಧ ಪೂಜೆ ಕೈಂಕರ್ಯ ನಡೆಸಲಾಗುತ್ತದೆ. 9 ದಿನವೂ ಶಕ್ತಿ ದೇವತೆಗಳನ್ನ ಆರಾಧಿಸಲಾಗುತ್ತದೆ.
ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರ್ ಮಾದರಿಯಲ್ಲೇ ಇಂದಿಗೂ ದಸರೆಯ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಅರಮನೆಯಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸುತ್ತಿದ್ದಾರೆ. ಸಿಂಹಾಸನದ ಬಳಿ ತೆರಳಿದ ಯದುವೀರ್ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಮಂಗಳಾರತಿ ಮಾಡಿದರು.
ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ, ನಂತರ ಅವರು ಸಿಂಹಾಸನಾರೂಢರಾದರು. ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿದ ಬಳಿಕ ದಿವಾನರು ಸಿಂಹಾಸನದ ಮುಂದೆ ನಿಂತು ನಡುಬಾಗಿಸಿ ವಂದಿಸುವ ಚಟುವಟಿಕೆಗಳೂ ನಡೆದವು.
ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಗತವೈಭವ ಮರುಕಳಿಸಿದೆ. ಮೈಸೂರು ಪ್ಯಾಲೇಸ್ನಲ್ಲಿ ಯದುವೀರ್ ಖಾಸಗಿ ದರ್ಬಾರ್ ಆರಂಭವಾಗಿದ್ದು, ಇಂದಿನಿಂದ 9 ದಿನಗಳ ಕಾಲ ವಿವಿಧ ಪೂಜೆ ಕೈಂಕರ್ಯ ನಡೆಸಲಾಗುತ್ತದೆ. 9 ದಿನವೂ ಶಕ್ತಿ ದೇವತೆಗಳನ್ನ ಆರಾಧಿಸಲಾಗುತ್ತದೆ.