ಖರ್ಗೆಯಂತಹ ಹಿರಿಯ ನಾಯಕರಿಂದ ಇಂಥ ದ್ವೇಷಪೂರಿತ ಮಾತುಗಳು ಬರಬಾರದು: ಪ್ರತಾಪ್ ಸಿಂಹ
1006 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ವರುಣ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ವಿಚಾರವಾಗಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಘಟನೆಗೆ ಸಿದ್ಧರಾಮಯ್ಯ ಹಾಗೂ ಅವರ ಬೆಂಬಲಿಗರು ಕಾರಣ ಎಂದು ಆರೋಪಿಸಿದರು.
''ಸಿದ್ಧರಾಮಯ್ಯ ಸೋಲಿನ ಹತಾಶೆ, ಭೀತಿಯಿಂದಾಗಿ ಈ ರೀತಿ ಮಾಡಿಸುತ್ತಿದ್ದಾರೆ. ಬಿಜೆಪಿಯಿಂದ ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆಂದು ಗೊತ್ತಾಗುತ್ತಿಲ್ಲ. ನಿನ್ನೆ ನಮ್ಮ ಚುನಾವಣಾ ಪ್ರಚಾರದ ಮೆರವಣಿಗೆ ಮೇಲೆ ಕಲ್ಲು ತೂರಿದ್ದಾರೆ, ಬಕೆಟ್ಗಳಲ್ಲಿ ಕಲ್ಲು ಇಟ್ಟು ಕೊಂಡಿದ್ದರು. ಗಲಾಟೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡು ಬಂದಿದ್ದರು.ಸಿದ್ಧರಾಮಯ್ಯನವರ ಸಹೋದರರ ಮನೆಯ ಬಳಿಯೇ ಈ ಘಟನೆ ನಡೆದಿದೆ'' ಎಂದರು.
ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆಯವರು ಹಿರಿಯ ರಾಜಕೀಯ, ಅಂಥವರ ಬಾಯಲ್ಲಿ ಇಂತಹ ಮಾತುಗಳು ಬರಬಾರದು. ಸಿದ್ಧರಾಮಯ್ಯ ಎಲ್ಲರನ್ನೂ ಏಕ ವಚನದಲ್ಲೇ ಟೀಕಿಸುತ್ತಾರೆ. ಸಿದ್ಧರಾಮಯ್ಯನವರ ಸಹವಾಸ ಮಾಡಿರುವ ಮಲ್ಲಿಕಾರ್ಜುನ ಖರ್ಗೆಯವರಿಗೂ ಅದೇ ಬುದ್ದಿ ಬಂದಿದೆ. ಸಿದ್ಧರಾಮಯ್ಯನವರ ಚಾಳಿ ಮಲ್ಲಿಕಾರ್ಜುನ ಖರ್ಗೆಯವರಿಗೂ ಅಂಟಿಕೊಂಡಿದೆ. ಇನ್ನು ಮುಂದೆ ಈ ರೀತಿ ಮಾತನಾಡದಂತೆ ಮನವಿ ಮಾಡುತ್ತೇನೆ ಎಂದರು.
''ಸಿದ್ಧರಾಮಯ್ಯ ಸೋಲಿನ ಹತಾಶೆ, ಭೀತಿಯಿಂದಾಗಿ ಈ ರೀತಿ ಮಾಡಿಸುತ್ತಿದ್ದಾರೆ. ಬಿಜೆಪಿಯಿಂದ ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆಂದು ಗೊತ್ತಾಗುತ್ತಿಲ್ಲ. ನಿನ್ನೆ ನಮ್ಮ ಚುನಾವಣಾ ಪ್ರಚಾರದ ಮೆರವಣಿಗೆ ಮೇಲೆ ಕಲ್ಲು ತೂರಿದ್ದಾರೆ, ಬಕೆಟ್ಗಳಲ್ಲಿ ಕಲ್ಲು ಇಟ್ಟು ಕೊಂಡಿದ್ದರು. ಗಲಾಟೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡು ಬಂದಿದ್ದರು.ಸಿದ್ಧರಾಮಯ್ಯನವರ ಸಹೋದರರ ಮನೆಯ ಬಳಿಯೇ ಈ ಘಟನೆ ನಡೆದಿದೆ'' ಎಂದರು.
ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆಯವರು ಹಿರಿಯ ರಾಜಕೀಯ, ಅಂಥವರ ಬಾಯಲ್ಲಿ ಇಂತಹ ಮಾತುಗಳು ಬರಬಾರದು. ಸಿದ್ಧರಾಮಯ್ಯ ಎಲ್ಲರನ್ನೂ ಏಕ ವಚನದಲ್ಲೇ ಟೀಕಿಸುತ್ತಾರೆ. ಸಿದ್ಧರಾಮಯ್ಯನವರ ಸಹವಾಸ ಮಾಡಿರುವ ಮಲ್ಲಿಕಾರ್ಜುನ ಖರ್ಗೆಯವರಿಗೂ ಅದೇ ಬುದ್ದಿ ಬಂದಿದೆ. ಸಿದ್ಧರಾಮಯ್ಯನವರ ಚಾಳಿ ಮಲ್ಲಿಕಾರ್ಜುನ ಖರ್ಗೆಯವರಿಗೂ ಅಂಟಿಕೊಂಡಿದೆ. ಇನ್ನು ಮುಂದೆ ಈ ರೀತಿ ಮಾತನಾಡದಂತೆ ಮನವಿ ಮಾಡುತ್ತೇನೆ ಎಂದರು.