ಸಂಕಷ್ಟ ಸೂತ್ರ ಅನುಸರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ; ಸಿದ್ದರಾಮಯ್ಯ
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿ
ಮೈಸೂರು: ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರದವರು ಸಭೆ ನಡೆಸಿದ್ದಾರೆ. 15 ದಿನಗಳವರೆಗೆ ನೀರು ಹರಿಸುವಂತೆ ಮೊದಲು ಹೇಳಿದ್ದರು. ಹಿಂದಿನ ಸಭೆಯಲ್ಲಿ ಹತ್ತು ಸಾವಿರ ಬಿಡುವಂತೆ ತಿಳಿಸಿದ್ದರು. ಆಗಸ್ಟ್ 31ರವರೆಗೆ 86 ಟಿಎಂಸಿ ನೀರು ನೀಡಬೇಕಿತ್ತು ಎಂದು ಕೆಡಿಪಿ ಸಭೆ ಬಳಿಕ ಸಿದ್ದರಾಮಯ್ಯ ಹೇಳಿದ್ದಾರೆ.
ಈವರಗೆ 30ಟಿಎಂಸಿ ಮಾತ್ರ ನೀಡಿದ್ದೇವೆ.ಪ್ರತಿದಿನ 24 ಸಾವಿರ ಕ್ಯೂಸೆಕ್ ನೀರು ನೀಡುವಂತೆ ವಾದಿಸಿದ್ದಾರೆ, ನಾವು ಕೊಡಲು ಸಾಧ್ಯವಿಲ್ಲ ಎಂದು ವಾದಿಸಿದ್ದೇವೆ. ನಾವು ಲೀಗಲ್ ಟೀಂ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ನೀರಾವರಿ ಇಲಾಖೆ ಜೊತೆ ಮಾತನಾಡಿ ತೀರ್ಮಾನ ಮಾಡುತ್ತೇವೆ. ಸಂಕಷ್ಟ ಸೂತ್ರ ಅನುಸರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.
ನಮ್ಮ ಬಳಿಯೇ ಸೂಕ್ತ ಪ್ರಮಾಣದ ನೀರಿಲ್ಲ. ನಮಗೆ ಕುಡಿಯುವ ನೀರಿನ ಲಭ್ಯತೆ ಬಗ್ಗೆ ತೀರ್ಮಾನ ಮಾಡಬೇಕು. ಬೆಳೆಗಳ ಪರಿಸ್ಥಿತಿ ನೋಡಿಕೊಳ್ಳಬೇಕಾಗಿದೆ. ನಮ್ಮ ಬಳಿ ಬೀಳಬೇಕಾದ ಮಳೆ ಈ ಬಾರಿ ಬಿದ್ದಿಲ್ಲ. ಈ ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸುವೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಯೂ ಈ ಕುರಿತು ಮಾತನಾಡುವೆ ಎಂದು ಹೇಳಿದರು. ನಾವು ಕೋರ್ಟ್ ನಲ್ಲಿ ಅಪ್ಲಿಕೇಷನ್ ಹಾಕಬೇಕಾ?, ಎಂದು ಮುಂದಿನ ಸಾಧಕ-ಬಾಧಕ ಕುರಿತು ಪರಿಶೀಲಿಸುವೆ. ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಈವರಗೆ 30ಟಿಎಂಸಿ ಮಾತ್ರ ನೀಡಿದ್ದೇವೆ.ಪ್ರತಿದಿನ 24 ಸಾವಿರ ಕ್ಯೂಸೆಕ್ ನೀರು ನೀಡುವಂತೆ ವಾದಿಸಿದ್ದಾರೆ, ನಾವು ಕೊಡಲು ಸಾಧ್ಯವಿಲ್ಲ ಎಂದು ವಾದಿಸಿದ್ದೇವೆ. ನಾವು ಲೀಗಲ್ ಟೀಂ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ನೀರಾವರಿ ಇಲಾಖೆ ಜೊತೆ ಮಾತನಾಡಿ ತೀರ್ಮಾನ ಮಾಡುತ್ತೇವೆ. ಸಂಕಷ್ಟ ಸೂತ್ರ ಅನುಸರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.
ನಮ್ಮ ಬಳಿಯೇ ಸೂಕ್ತ ಪ್ರಮಾಣದ ನೀರಿಲ್ಲ. ನಮಗೆ ಕುಡಿಯುವ ನೀರಿನ ಲಭ್ಯತೆ ಬಗ್ಗೆ ತೀರ್ಮಾನ ಮಾಡಬೇಕು. ಬೆಳೆಗಳ ಪರಿಸ್ಥಿತಿ ನೋಡಿಕೊಳ್ಳಬೇಕಾಗಿದೆ. ನಮ್ಮ ಬಳಿ ಬೀಳಬೇಕಾದ ಮಳೆ ಈ ಬಾರಿ ಬಿದ್ದಿಲ್ಲ. ಈ ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸುವೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಯೂ ಈ ಕುರಿತು ಮಾತನಾಡುವೆ ಎಂದು ಹೇಳಿದರು. ನಾವು ಕೋರ್ಟ್ ನಲ್ಲಿ ಅಪ್ಲಿಕೇಷನ್ ಹಾಕಬೇಕಾ?, ಎಂದು ಮುಂದಿನ ಸಾಧಕ-ಬಾಧಕ ಕುರಿತು ಪರಿಶೀಲಿಸುವೆ. ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.