ನಮ್ಮ ಪಕ್ಷದ ಮುಖಂಡರ ಸಂಪರ್ಕದಲ್ಲಿ ಹಾಲಿ, ಮಾಜಿ ಶಾಸಕರು: ಸಚಿವ ಎನ್.ಎಸ್.ಬೋಸರಾಜು
ರಾಯಚೂರು ವಿಡಿಯೋಗಳಿಗೆ ಚಂದಾದಾರರಾಗಿ
ರಾಯಚೂರು: ಹಾಲಿ, ಮಾಜಿ ಶಾಸಕರು, ಪ್ರಮುಖ ಪಕ್ಷದ ಮುಖಂಡರು ಬಹಳಷ್ಟು ಜನ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸದ್ಯ ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಹಿನ್ನಲೆ ಆಪರೇಷನ್ ಹಸ್ತ ಕುರಿತಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಲ್ಯಾಣ ಕರ್ನಾಟಕ ಮುಂಬೈ ಮತ್ತು ಕರ್ನಾಟಕ ಭಾಗದಿಂದ ಪ್ರಮುಖ ಮುಖಂಡರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಹಾಲಿ, ಮಾಜಿ, ಶಾಸಕರು, ಪ್ರಮುಖ ಮುಖಂಡರು ಪಕ್ಷ ಸೇರ್ಪಡೆಯಲ್ಲಿದ್ದಾರೆ. ಪಕ್ಷದ ತತ್ವ ಸಿದ್ದಾಂತ ಒಪ್ಪಿಕೊಂಡು ಯಾರು ಯಾರು ಬರುತ್ತಾರೆಯೋ ಎಲ್ಲರಿಗೂ ಸ್ವಾಗತ ಇದೆ. ಬಹಳಷ್ಟು ಜನ ಈಗಾಗಲೇ ನಮ್ಮ ರಾಜ್ಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಯಾರಿದ್ದಾರೆ ಎನ್ನುವುದನ್ನು ನಾನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಹೆಸರುಗಳು ಬಹಿರಂಗವಾದರೆ ನಿರ್ಧಾರ ತೆಗೆದುಕೊಳ್ಳಲು ಅವರಿಗೆ ಗೊಂದಲವಾಗಬಹುದು ಎಂದರು.
ರಾಯಚೂರು ಮಾಜಿ ಸಂಸದ, ಬಿಜೆಪಿ ಮುಖಂಡ ಬಿ.ವಿ.ನಾಯಕ, ಮಾಜಿ ಶಾಸಕ ಪ್ರತಾಪ್ ಗೌಡರ ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸದ್ಯ ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಹಿನ್ನಲೆ ಆಪರೇಷನ್ ಹಸ್ತ ಕುರಿತಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಲ್ಯಾಣ ಕರ್ನಾಟಕ ಮುಂಬೈ ಮತ್ತು ಕರ್ನಾಟಕ ಭಾಗದಿಂದ ಪ್ರಮುಖ ಮುಖಂಡರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಹಾಲಿ, ಮಾಜಿ, ಶಾಸಕರು, ಪ್ರಮುಖ ಮುಖಂಡರು ಪಕ್ಷ ಸೇರ್ಪಡೆಯಲ್ಲಿದ್ದಾರೆ. ಪಕ್ಷದ ತತ್ವ ಸಿದ್ದಾಂತ ಒಪ್ಪಿಕೊಂಡು ಯಾರು ಯಾರು ಬರುತ್ತಾರೆಯೋ ಎಲ್ಲರಿಗೂ ಸ್ವಾಗತ ಇದೆ. ಬಹಳಷ್ಟು ಜನ ಈಗಾಗಲೇ ನಮ್ಮ ರಾಜ್ಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಯಾರಿದ್ದಾರೆ ಎನ್ನುವುದನ್ನು ನಾನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಹೆಸರುಗಳು ಬಹಿರಂಗವಾದರೆ ನಿರ್ಧಾರ ತೆಗೆದುಕೊಳ್ಳಲು ಅವರಿಗೆ ಗೊಂದಲವಾಗಬಹುದು ಎಂದರು.
ರಾಯಚೂರು ಮಾಜಿ ಸಂಸದ, ಬಿಜೆಪಿ ಮುಖಂಡ ಬಿ.ವಿ.ನಾಯಕ, ಮಾಜಿ ಶಾಸಕ ಪ್ರತಾಪ್ ಗೌಡರ ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು